AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuva: ಯುವ ರಾಜ್​ಕುಮಾರ್ ಮೊದಲ ಸಿನಿಮಾ ಟೈಟಲ್ ಟೀಸರ್ ಬಿಡುಗಡೆ

Yuva Rajkumar New Movie Title ಯುವ ರಾಜ್​ಕುಮಾರ್ ನಟನೆಯ ಹೊಸ ಸಿನಿಮಾದ ಟೈಟಲ್ ಹಾಗೂ ಟೈಟಲ್ ಟೀಸರ್ ಇಂದು ಬಿಡುಗಡೆ ಆಗಿದೆ. ಯೂಥ್​ಫುಲ್ ಆದ ಹೆಸರನ್ನು ಸಿನಿಮಾಕ್ಕೆ ಇಡಲಾಗಿದೆ.

Yuva: ಯುವ ರಾಜ್​ಕುಮಾರ್ ಮೊದಲ ಸಿನಿಮಾ ಟೈಟಲ್ ಟೀಸರ್ ಬಿಡುಗಡೆ
ಯುವ ರಾಜ್​ಕುಮಾರ್ ಸಿನಿಮಾ ಟೈಟಲ್ ಲಾಂಚ್
ಮಂಜುನಾಥ ಸಿ.
|

Updated on:Mar 03, 2023 | 7:11 PM

Share

ದೊಡ್ಮನೆಯ ಮತ್ತೊಂದು ಕುಡಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು, ರಾಘವೇಂದ್ರ ರಾಜ್​ಕುಮಾರ್ ಅವರ ಎರಡನೇ ಪುತ್ರ ಯುವ ರಾಜ್​ಕುಮಾರ್ (Yuva Rajkumar) ಇಂದು ಅಧಿಕೃತವಾಗಿ ಚಂದನವನಕ್ಕೆ ಕಾಲಿಟ್ಟಿದ್ದಾರೆ. ಯುವ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾದ ಟೈಟಲ್ ಇಂದು ಬಿಡುಗಡೆ ಆಗಿದ್ದು, ಯೂಥ್​ಫುಲ್ ಹೆಸರನ್ನು ಸಿನಿಮಾಕ್ಕೆ ಇಡಲಾಗಿದೆ.

ಯುವ ರಾಜ್​ಕುಮಾರ್ ಮೊದಲ ಸಿನಿಮಾಕ್ಕೆ ‘ಯುವ’ ಎಂದು ಹೆಸರಿಡಲಾಗಿದೆ. ಸಿನಿಮಾದ ಟೈಟಲ್ ಟೀಸರ್ (Title Teaser) ಬಿಡುಗಡೆ ಕಾರ್ಯಕ್ರಮವು ನಗರದ ಅಶೋಕ ಹೋಟಲ್ ನಲ್ಲಿ ಅದ್ಧೂರಿಯಾಗಿ ನಡೆದಿದೆ. ಜೊತೆಗೆ ಬೆಂಗಳೂರಿನ ಕುರುಬರಹಳ್ಳಿಯ ಅಣ್ಣಾವ್ರ ಪ್ರತಿಮೆ ಬಳಿ ಎಲ್ ಈ ಡಿ ಸ್ಕ್ರಿನ್ ನಲ್ಲಿ ಪ್ರದರ್ಶನ ಮಾಡಿದ ಜೊತೆಗೆ ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಸಹ ಟೈಟಲ್ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ.

ಟೈಟಲ್ ಬಿಡುಗಡೆಗೆ ಮುನ್ನ ಯುವ ರಾಜ್​ಕುಮಾರ್, ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ದೇಶಕ ಸಂತೋಶ್ ಆನಂದ್ ರಾಮ್​ ಅವರುಗಳು ಶೇಷಾದ್ರಿ ಪುರಂ ಸುಬ್ರಹ್ಮಣ್ಯ ಸ್ವಾಮಿಗೆ ಪೂಜೆ ಸಲ್ಲಿಸಿದರು. ಅಲ್ಲಿಂದ ಅಶೋಕ ಹೋಟೆಲ್​ಗೆ ತೆರಳಿ ಅಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಟೈಟಲ್ ಅನ್ನು ಅನಾವರಣ ಮಾಡಿದರು.

ಸಿನಿಮಾದ ಟೈಟಲ್ ಟೀಸರ್ ಸಹ ಬಿಡುಗಡೆ ಆಗಿದ್ದು, ಸಿನಿಮಾ ಭರ್ಜರಿ ಆಕ್ಷನ್ ಸಿನಿಮಾ ಆಗಿರುವ ಸೂಚನೆ ನೀಡಿದೆ. ಟೈಟಲ್ ಟೀಸರ್​ನಲ್ಲಿಯೇ ಸುತ್ತಿಗೆ, ಬ್ಯಾಟು, ಕತ್ತಿಗಳು ರಾರಾಜಿಸಿವೆ. ಖಡಕ್ ಧ್ವನಿಯನ್ನು ಡೈಲಾಗ್ ಸಹ ಹೊಡೆದಿರುವ ಯುವ ರಾಜ್​ಕುಮಾರ್, ನೀನು ದಾಟಿರುವುದು ಬ್ಲಡ್​ಲೈನ್, ರಕ್ತ ಹರಿದೇ ಹರಿಯುತ್ತೆ ಎಂದು ವಿಲನ್​ಗಳಿಗೆ ಎಚ್ಚರಿಕೆ ಸಹ ನೀಡಿದ್ದಾರೆ. ಈ ಸಿನಿಮಾವು ಗ್ಯಾಂಗ್​ವಾರ್​ಗೆ ಸಂಬಂಧಿಸಿದ ಕತೆ ಹೊಂದಿರುವ ಸುಳಿವೂ ಸಹ ಟೈಟಲ್ ಟೀಸರ್​ನಲ್ಲಿದೆ.

ಸಿನಿಮಾದ ಟೈಟಲ್ ಬಿಡುಗಡೆ ದಿನವೇ ಸಿನಿಮಾ ಬಿಡುಗಡೆ ದಿನಾಂಕವನ್ನೂ ಘೋಷಿಸಲಾಗಿದ್ದು, ಯುವ ರಾಜ್​ಕುಮಾರ್ ಮೊದಲ ಸಿನಿಮಾ ಯುವ, ಇದೇ ವರ್ಷಾಂತ್ಯ ಡಿಸೆಂಬರ್ 22ನೇ ತಾರೀಖು ಬಿಡುಗಡೆ ಆಗಲಿದೆ.

ಅಪ್ಪು ನಿಧನದ ಬಳಿಕ ಅವರ ಸ್ಥಾನವನ್ನು ಯುವ ರಾಜ್​ಕುಮಾರ್ ತುಂಬಬೇಕು ಎಂದು ಹಲವು ದೊಡ್ಮನೆ ಕುಟುಂಬದ ಅಭಿಮಾನಿಗಳು ಒತ್ತಾಯಿಸಿದ್ದರು. ಅಂತೆಯೇ ಅಪ್ಪು ಗಾಗಿ ಮಾಡಿದ್ದ ಕತೆಯನ್ನು ತುಸು ಬದಲಾಯಿಸಿ ನಿರ್ದೇಶಕ ಸಂತೋಶ್ ಆನಂದ್ ರಾಮ್ ಯುವ ರಾಜ್​ಕುಮಾರ್​ಗಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಹೊಂಬಾಳೆ ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Fri, 3 March 23

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್