AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಸಿನಿಮಾ ಚಿತ್ರೀಕರಣ ಮುಗಿವ ಮುನ್ನವೇ ಇನ್ನೆರಡು ಸಿನಿಮಾಗಳಿಗೆ ಸಹಿ ಹಾಕಿದ ಯುವ ರಾಜ್​ಕುಮಾರ್ಮೊದಲ ಸಿನಿಮಾ ಚಿತ್ರೀಕರಣ ಮುಗಿವ ಮುನ್ನವೇ ಇನ್ನೆರಡು ಸಿನಿಮಾಗಳಿಗೆ ಸಹಿ ಹಾಕಿದ ಯುವ ರಾಜ್​ಕುಮಾರ್

Yuva Rajkumar: ಯುವ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾದ ಚಿತ್ರೀಕರಣವೆ ಇನ್ನೂ ಮುಗಿದಿಲ್ಲ, ಈ ನಡುವೆ ಎರಡು ಹೊಸ ಸಿನಿಮಾಗಳ ಕತೆ ಕೇಳಿ ಒಪ್ಪಿಗೆಯನ್ನೂ ಸೂಚಿಸಿದ್ದಾರಂತೆ ಯುವ.

ಮೊದಲ ಸಿನಿಮಾ ಚಿತ್ರೀಕರಣ ಮುಗಿವ ಮುನ್ನವೇ ಇನ್ನೆರಡು ಸಿನಿಮಾಗಳಿಗೆ ಸಹಿ ಹಾಕಿದ ಯುವ ರಾಜ್​ಕುಮಾರ್ಮೊದಲ ಸಿನಿಮಾ ಚಿತ್ರೀಕರಣ ಮುಗಿವ ಮುನ್ನವೇ ಇನ್ನೆರಡು ಸಿನಿಮಾಗಳಿಗೆ ಸಹಿ ಹಾಕಿದ ಯುವ ರಾಜ್​ಕುಮಾರ್
ಯುವ ರಾಜ್​ಕುಮಾರ್
ಮಂಜುನಾಥ ಸಿ.
|

Updated on: Nov 12, 2023 | 6:21 PM

Share

ರಾಘವೇಂದ್ರ ರಾಜ್​ಕುಮಾರ್ ಪುತ್ರ ಯುವ ರಾಜ್​ಕುಮಾರ್ (Yuva Rajkumar) ಚಂದನವನಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಈ ಹಿಂದೆ ಮೈಥಾಲಜಿ ಸಿನಿಮಾ ಒಂದರ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡಲು ಯುವ ರಾಜ್​ಕುಮಾರ್ ಸಜ್ಜಾಗಿದ್ದರು. ಆದರೆ ಆ ನಂತರ ನಡೆದ ಕೆಲವು ಬೆಳವಣಿಗೆಗಳಿಂದಾಗಿ ‘ಯುವ’ ಸಿನಿಮಾ ಮೂಲಕ ಯುವ ರಾಜ್​ಕುಮಾರ್ ಚಿತ್ರರಂಗಕ್ಕೆ ಕಾಲಿಡುತ್ತಿದ್ದು, ‘ಯುವ’ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ‘ಯುವ’ ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿರಬೇಕಾದರೆ ಯುವ ರಾಜ್​ಕುಮಾರ್ ಇನ್ನೂ ಎರಡು ಸಿನಿಮಾಗಳ ಕತೆ ಕೇಳಿ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

‘ಯುವ’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಯುವ ರಾಜ್​ಕುಮಾರ್ ಅವರನ್ನು ಅರಸಿ ಇನ್ನೆರಡು ಸಿನಿಮಾ ಅವಕಾಶಗಳು ಬಂದಿದ್ದು, ಕತೆ ಕೇಳಿರುವ ಯುವ ರಾಜ್​ಕುಮಾರ್, ಕತೆಯನ್ನು ಓಕೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ‘ಮಫ್ತಿ’ ಪ್ರಸ್ತುತ ಶಿವರಾಜ್ ಕುಮಾರ್ ಜೊತೆಗೆ ‘ಭೈರತಿ ರಣಗಲ್’ ಸಿನಿಮಾಗಳನ್ನು ನಿರ್ದೇಶನ ಮಾಡುತ್ತಿರುವ ನಿರ್ದೇಶಕ ನರ್ತನ್ ಅವರು ಯುವ ರಾಜ್​ಕುಮಾರ್​ಗಾಗಿ ಹೊಸ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಹೆಬ್ಬುಲಿ ಕೃಷ್ಣ ನಿರ್ದೇಶನ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎರಡರಲ್ಲಿ ಒಂದು ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಪಿಆರ್​ಕೆ ಪ್ರೊಡಕ್ಷನ್ಸ್​ನವರು ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಬಂದ್ ದಿನವೂ ಸಿನಿಮಾ ಶೂಟಿಂಗ್? ಸ್ಪಷ್ಟನೆ ನೀಡಿದ ಯುವ ರಾಜ್​ಕುಮಾರ್

ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಮುಂದಿನ ವರ್ಷ ಮಾರ್ಚ್ ತಿಂಗಳ 28ನೇ ತಾರೀಖು ಸಿನಿಮಾ ಬಿಡುಗಡೆ ಆಗುವ ಸಾಧ್ಯತೆ ಇದೆ. ಈ ಹಿಂದೆ ಡಿಸೆಂಬರ್ 22ಕ್ಕೆ ಸಿನಿಮಾ ಬಿಡುಗಡೆ ಮಾಡುವ ನಿರ್ಧಾರ ಮಾಡಲಾಗಿತ್ತು, ಆದರೆ ‘ಸಲಾರ್’ ಸಿನಿಮಾದ ಬಿಡುಗಡೆ ಮುಂದಕ್ಕೆ ಹೋಗಿ ‘ಸಲಾರ್’ ಅನ್ನು ಡಿಸೆಂಬರ್ 22ಕ್ಕೆ ಬಿಡುಗಡೆ ಮಾಡಲು ಹೊಂಬಾಳೆ ನಿರ್ಧರಿಸಿರುವ ಕಾರಣ, ‘ಯುವ’ ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ.

ಯುವ ರಾಜ್​ಕುಮಾರ್, ಬೇರೊಂದು ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಪ್ರವೇಶಿಸಲು ಸಜ್ಜಾಗಿದ್ದರು. ಆದರೆ ಪುನೀತ್ ರಾಜ್​ಕುಮಾರ್ ಅಕಾಲ ಮೃತ್ಯುವಿನಿಂದಾಗಿ ಎಲ್ಲವೂ ಬದಲಾಯ್ತು. ಇದೀಗ ಅಪ್ಪುವಿನ ಸ್ಥಾನವನ್ನು ತುಂಬುವ ಪ್ರಯತ್ನವನ್ನು ಯುವ ರಾಜ್​ಕುಮಾರ್ ಮಾಡುತ್ತಿದ್ದಾರೆ. ಅವರು ಎಷ್ಟರ ಮಟ್ಟಿಗೆ ಸಫಲವಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಪ್ರಸ್ತುತ ನಟಿಸುತ್ತಿರುವ ‘ಯುವ’ ಸಿನಿಮಾವನ್ನು ಸಂತೋಷ್ ಆನಂದ್​ರಾಮ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿ. ಸಿನಿಮಾವು ಕಾಲೇಜು ಯುವಕನ ಕತೆಯನ್ನು ಒಳಗೊಂಡಿದ್ದು, ಯುವ ರಾಜ್​ಕುಮಾರ್ ಅವರನ್ನು ಅದ್ಧೂರಿಯಾಗಿ, ಸ್ಟೈಲಿಷ್ ಆಗಿ ತೆರೆಗೆ ಪರಿಚಯಿಸುವ ಪ್ರಯತ್ನವನ್ನು ಸಂತೋಷ್ ಆನಂದ್​ರಾಮ್ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ