AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ

Yuva Rajkumar | Ramya: ಅಕ್ಟೋಬರ್​ 28ರಂದು ‘ಗಂಧದ ಗುಡಿ’ ಡಾಕ್ಯುಮೆಂಟರಿ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಅ.21ರಂದು ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್ ಮಾಡಲು ತೀರ್ಮಾನಿಸಲಾಗಿದೆ.

Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
ರಮ್ಯಾ, ಯುವ ರಾಜ್​ಕುಮಾರ್​, ಪುನೀತ್​
TV9 Web
| Edited By: |

Updated on:Oct 10, 2022 | 12:01 PM

Share

ಡಾ. ರಾಜ್​ಕುಮಾರ್​ ಕುಟುಂಬದ ಜೊತೆಗೆ ನಟಿ ರಮ್ಯಾ ಅವರಿಗೆ ವಿಶೇಷ ಒಡನಾಟ ಇದೆ. ರಮ್ಯಾ (Ramya) ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ಪಾರ್ವತಮ್ಮ ರಾಜ್​ಕುಮಾರ್​ ನಿರ್ಮಾಣದ ‘ಅಭಿ’ ಸಿನಿಮಾ ಮೂಲಕ. ಚೊಚ್ಚಲ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​ ಜತೆ ನಟಿಸುವ ಭಾಗ್ಯ ಅವರದ್ದಾಗಿತ್ತು. ಈಗ ಪುನೀತ್​ ಅವರ ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರದ ಪ್ರೀ-ರಿಲೀಸ್​ ಇವೆಂಟ್​ಗೆ ರಮ್ಯಾ ಅವರನ್ನು ಆಹ್ವಾನಿಸಲಾಗಿದೆ. ಯುವ ರಾಜ್​ಕುಮಾರ್​ ಅವರು ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಈ ವೇಳೆ ಕ್ಲಿಕ್ಕಿಸಿದ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಶೇರ್​ ಮಾಡಿಕೊಂಡಿದ್ದಾರೆ. ಜತೆಗೆ ಯುವ ರಾಜ್​ಕುಮಾರ್ (Yuva Rajkumar) ಬಗ್ಗೆ ವಿಶೇಷ ಮಾತುಗಳನ್ನು ಹಂಚಿಕೊಂಡಿದ್ದಾರೆ.

ಅಕ್ಟೋಬರ್​ 28ರಂದು ‘ಗಂಧದ ಗುಡಿ’ ಡಾಕ್ಯುಮೆಂಟರಿ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್ ಮಾಡಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಸಕಲ ತಯಾರಿ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ. ಈಗ ರಮ್ಯಾ ಅವರ ಮನೆಗೂ ಆಮಂತ್ರಣ ಪತ್ರಿಕೆ ತಲುಪಿದೆ. ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ನ ವೇದಿಕೆಯಲ್ಲಿ ರಮ್ಯಾ ಡ್ಯಾನ್ಸ್​ ಮಾಡಬಹುದು ಎಂಬ ನಿರೀಕ್ಷೆ ಕೂಡ ಇದೆ.

ಆಹ್ವಾನ ನೀಡಲು ಬಂದ ಯುವ ರಾಜ್​ಕುಮಾರ್​ ಬಗ್ಗೆ ರಮ್ಯಾ ಅವರು ವಿಶೇಷ ಮಾತುಗಳನ್ನು ಹಂಚಿಕೊಂಡಿದ್ದಾರೆ. ‘ಯುವ ರಾಜ್​ಕುಮಾರ್​ ಈಗ ಚಿಕ್ಕ ಹುಡುಗನಲ್ಲ. ಅಪ್ಪು ಪರಂಪರೆಯನ್ನು ಆತ ಮುಂದುವರಿಸಿಕೊಂಡು ಹೋಗುತ್ತಿದ್ದಾನೆ’ ಎಂದು ರಮ್ಯಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ಹೊಸ ಸಿನಿಮಾಕ್ಕೆ ಯುವ ರಾಜ್​ಕುಮಾರ್​ ಹೀರೋ ಆಗಿದ್ದಾರೆ.

ಇದನ್ನೂ ಓದಿ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ
Image
Gandhada Gudi: ಪುನೀತ್​ ಎಕ್ಸ್​ಕ್ಲೂಸಿವ್​ ವಿಡಿಯೋ: ‘ಗಂಧದ ಗುಡಿ’ ಶೂಟಿಂಗ್​ ವೇಳೆ ಹೇಗಿತ್ತು ನೋಡಿ ಅಪ್ಪು ನಗುವಿನ ಕ್ಷಣ
Image
ತಿಂಗಳಿಗೂ ಮೊದಲೇ ಆರಂಭವಾಯ್ತು ಅಪ್ಪು ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಸೆಲೆಬ್ರೇಷನ್​

ವಿಶೇಷವಾಗಿದೆ ಆಮಂತ್ರಣ ಪತ್ರಿಕೆ:

‘ಗಂಧದ ಗುಡಿ’ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಈಗಾಗಲೇ ಅನೇಕರಿಗೆ ಆಮಂತ್ರಣ ಪತ್ರಿಕೆ ತಲುಪಿದೆ. ಸಂಪೂರ್ಣ ಮರದಿಂದ ಮಾಡಲಾದ ಈ ಪತ್ರಿಕೆಯಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪುತ್ಥಳಿ ಇದೆ. ಜೊತೆಗೆ ಶ್ರೀಗಂಧದ ತುಂಡಿನ ಮೇಲೆ ಪುನೀತ್ ರಾಜ್​ಕುಮಾರ್​ ಎಂದು ಬರೆದಿರುವ ಹಸ್ತಾಕ್ಷರ ಇದೆ. ಅಮಿತಾಭ್ ಬಚ್ಚನ್​, ರಜನಿಕಾಂತ್​ ಮುಂತಾದ ಗಣ್ಯರಿಗೆ ಇದೇ ಆಹ್ವಾನ ಪತ್ರಿಕೆಯನ್ನು ನೀಡಲಾಗಿದೆ.

ಅ.9ರಂದು ಬೆಂಗಳೂರಿನಲ್ಲಿ ‘ಗಂಧದ ಗುಡಿ’ ಟ್ರೇಲರ್​ ಲಾಂಚ್​ ಮಾಡಲಾಯಿತು. ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು ಜೊತೆಯಾಗಿ ಸೇರಿ ಟ್ರೇಲರ್​ ಅನಾವರಣಗೊಳಿಸಿದರು. ಚಿತ್ರಮಂದಿರದಲ್ಲಿ ‘ಗಂಧದ ಗುಡಿ’ ಸಾಕ್ಷ್ಯಚಿತ್ರವನ್ನು ನೋಡಲು ಎಲ್ಲರೂ ಕಾದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂತಾದವರು ಈ ಟ್ರೇಲರ್​ ಬಗ್ಗೆ ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:01 pm, Mon, 10 October 22

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!