AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್​ಕುಮಾರ್​ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?

ಕನ್ನಡ ಚಿತ್ರರಂಗದ ದೊಡ್ಮನೆ, ಡಾ. ರಾಜ್​ಕುಮಾರ್​ ಕುಟುಂಬದಲ್ಲಿ ಇದು ಮೊದಲ ವಿಚ್ಛೇದನ ಪ್ರಕರಣ. ಆ ಕಾರಣದಿಂದ ಅಭಿಮಾನಿಗಳಿಗೆ ಬೇಸರ ಆಗಿದೆ. ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಭೈರಪ್ಪ ವಿಚ್ಛೇದನ ಪಡೆಯಲು ಕೋರ್ಟ್​ ಮೆಟ್ಟಿಲು ಏರಿದ್ದಾರೆ. ಇಬ್ಬರ ಸಂಸಾರದಲ್ಲಿ ಬಿರುಕು ಮೂಡಲು ಖ್ಯಾತ ನಟಿಯೊಬ್ಬರು ಕಾರಣವಾದ್ರಾ ಎಂಬ ಅನುಮಾನ ವ್ಯಕ್ತವಾಗಿದೆ.

ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್​ಕುಮಾರ್​ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?
ಶ್ರೀದೇವಿ, ಯುವ ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Jun 10, 2024 | 2:19 PM

Share

ಡಾ. ರಾಜ್​ಕುಮಾರ್​ ಕುಟುಂಬದ ಅಭಿಮಾನಿಗಳಿಗೆ ಇದು ಶಾಕಿಂಗ್​ ನ್ಯೂಸ್​. ರಾಘವೇಂದ್ರ ರಾಜ್​ಕುಮಾರ್​ ಅವರ ಮಗ ಯುವ ರಾಜ್​ಕುಮಾರ್​ (Yuva Rajkumar) ಸಂಸಾರದಲ್ಲಿ ಬಿರುಕು ಮೂಡಿದೆ. ಪತ್ನಿ ಶ್ರೀದೇವಿ ಭೈರಪ್ಪ (Sridevi) ಅವರಿಂದ ವಿಚ್ಛೇದನ ಬೇಕು ಎಂದು ಯುವ ಅರ್ಜಿ ಸಲ್ಲಿಸಿದ್ದಾರೆ. ಅಷ್ಟಕ್ಕೂ ಈ ದಂತಿಯ ನಡುವೆ ಮನಸ್ತಾಪ ಮೂಡಲು ಕಾರಣ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಯುವ ರಾಜ್​ಕುಮಾರ್​ ವಿಚ್ಛೇದನ (Yuva Rajkumar Divorce) ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಗಾಂಧಿನಗರದಲ್ಲಿ ಕೇಳಿಬರುತ್ತಿರುವ ಗಾಸಿಪ್​ ಪ್ರಕಾರ ಪ್ರಸಿದ್ಧ ನಟಿಯ ಜೊತೆ ಯುವ ರಾಜ್​ಕುಮಾರ್​ ಆಪ್ತತೆ ಹೆಚ್ಚಿಸಿಕೊಂಡಿದ್ದೇ ಇದಕ್ಕೆಲ್ಲ ಕಾರಣ ಎನ್ನಲಾಗುತ್ತಿದೆ.

2019ರಲ್ಲಿ ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಅವರ ಮದುವೆ ನಡೆದಿತ್ತು. ಇಬ್ಬರೂ ಪ್ರೀತಿಸಿ ವಿವಾಹ ಆಗಿದ್ದರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಅವರಿಬ್ಬರ ನಡುವೆ ಮನಸ್ತಾಪ ಹೆಚ್ಚಾಯಿತು. ಸಾರ್ವಜನಿಕವಾಗಿ ಈ ವಿಷಯ ಬಹಿರಂಗ ಆಗದೇ ಇದ್ದರೂ ಕೂಡ ಆಪ್ತ ವಲಯದಲ್ಲಿ ಗುಸುಗುಸು ಕೇಳಿಬರುತ್ತಿತ್ತು. ಕಡೆಗೂ ಸಂಸಾರದ ಬಿರುಕು ಬಹಿರಂಗ ಆಗಿದೆ.

ಮನಸ್ತಾಪ ಹೆಚ್ಚಿದ ಬಳಿಕ ಶ್ರೀದೇವಿ ಅವರು ವಿದೇಶಕ್ಕೆ ತೆರಳಿದರು. ಕಳೆದ ಕೆಲವು ತಿಂಗಳಿಂದ ಅವರು ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಯುವ ರಾಜ್​ಕುಮಾರ್​ ನಟಿಸಿದ ‘ಯುವ’ ಸಿನಿಮಾ ಈ ವರ್ಷ ಬಿಡುಗಡೆ ಆಯಿತು. ಆ ಸಿನಿಮಾಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳಲ್ಲೂ ಪತ್ನಿ ಶ್ರೀದೇವಿ ಕಾಣಿಸಿಕೊಳ್ಳಲೇ ಇಲ್ಲ. ಆಗಲೂ ಕೂಡ ಬಹುತೇಕರಿಗೆ ಅನುಮಾನ ಮೂಡಿತ್ತು.

ಮೂಲಗಳ ಪ್ರಕಾರ, ಯುವ ರಾಜ್​ಕುಮಾರ್​ ಅವರು ಕನ್ನಡ ಚಿತ್ರರಂಗದ ಖ್ಯಾತ ನಟಿಯೊಬ್ಬರ ಜೊತೆ ಸ್ನೇಹ ಬೆಳೆಸಿಕೊಂಡಿದ್ದಾರೆ. ಆ ನಟಿಯ ಜೊತೆ ಯುವ ಆಪ್ತತೆ ಹೆಚ್ಚಾಯಿತು. ಆ ಕಾರಣದಿಂದಲೇ ಅವರ ಸಂಸಾರದಲ್ಲಿ ಸಮಸ್ಯೆ ಶುರುವಾಗಿರುವ ಸಾಧ್ಯತೆ ದಟ್ಟವಾಗಿದೆ. ಸದ್ಯಕ್ಕೆ ಶ್ರೀದೇವಿ ಅವರು ವಿಚ್ಛೇದನದ ಕುರಿತಂತೆ ಪ್ರತಿಕ್ರಿಯೆ ನೀಡುವುದು ಬಾಕಿಯಿದೆ. ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.

ಇದನ್ನೂ ಓದಿ: ಮಗು ಬೇಡ ಎಂದ ನಿವೇದಿತಾ: ಇದೇ ಕಾರಣಕ್ಕೆ ವಿಚ್ಛೇದನ ಪಡೆದ ಚಂದನ್​ ಶೆಟ್ಟಿ?

ಅಣ್ಣಾವ್ರ ಕುಟುಂಬದಲ್ಲಿ ಆಗುತ್ತಿರುವ ಮೊದಲ ವಿಚ್ಛೇದನ ಪ್ರಕರಣ ಇದು. ಹಾಗಾಗಿ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ. ಕುಟುಂಬದ ಹಿರಿಯರಾದ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್​​ ಮುಂತಾದವರು ಏನು ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು