ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್​ಕುಮಾರ್​ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?

|

Updated on: Jun 10, 2024 | 2:19 PM

ಕನ್ನಡ ಚಿತ್ರರಂಗದ ದೊಡ್ಮನೆ, ಡಾ. ರಾಜ್​ಕುಮಾರ್​ ಕುಟುಂಬದಲ್ಲಿ ಇದು ಮೊದಲ ವಿಚ್ಛೇದನ ಪ್ರಕರಣ. ಆ ಕಾರಣದಿಂದ ಅಭಿಮಾನಿಗಳಿಗೆ ಬೇಸರ ಆಗಿದೆ. ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಭೈರಪ್ಪ ವಿಚ್ಛೇದನ ಪಡೆಯಲು ಕೋರ್ಟ್​ ಮೆಟ್ಟಿಲು ಏರಿದ್ದಾರೆ. ಇಬ್ಬರ ಸಂಸಾರದಲ್ಲಿ ಬಿರುಕು ಮೂಡಲು ಖ್ಯಾತ ನಟಿಯೊಬ್ಬರು ಕಾರಣವಾದ್ರಾ ಎಂಬ ಅನುಮಾನ ವ್ಯಕ್ತವಾಗಿದೆ.

ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್​ಕುಮಾರ್​ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?
ಶ್ರೀದೇವಿ, ಯುವ ರಾಜ್​ಕುಮಾರ್​
Follow us on

ಡಾ. ರಾಜ್​ಕುಮಾರ್​ ಕುಟುಂಬದ ಅಭಿಮಾನಿಗಳಿಗೆ ಇದು ಶಾಕಿಂಗ್​ ನ್ಯೂಸ್​. ರಾಘವೇಂದ್ರ ರಾಜ್​ಕುಮಾರ್​ ಅವರ ಮಗ ಯುವ ರಾಜ್​ಕುಮಾರ್​ (Yuva Rajkumar) ಸಂಸಾರದಲ್ಲಿ ಬಿರುಕು ಮೂಡಿದೆ. ಪತ್ನಿ ಶ್ರೀದೇವಿ ಭೈರಪ್ಪ (Sridevi) ಅವರಿಂದ ವಿಚ್ಛೇದನ ಬೇಕು ಎಂದು ಯುವ ಅರ್ಜಿ ಸಲ್ಲಿಸಿದ್ದಾರೆ. ಅಷ್ಟಕ್ಕೂ ಈ ದಂತಿಯ ನಡುವೆ ಮನಸ್ತಾಪ ಮೂಡಲು ಕಾರಣ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಯುವ ರಾಜ್​ಕುಮಾರ್​ ವಿಚ್ಛೇದನ (Yuva Rajkumar Divorce) ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಗಾಂಧಿನಗರದಲ್ಲಿ ಕೇಳಿಬರುತ್ತಿರುವ ಗಾಸಿಪ್​ ಪ್ರಕಾರ ಪ್ರಸಿದ್ಧ ನಟಿಯ ಜೊತೆ ಯುವ ರಾಜ್​ಕುಮಾರ್​ ಆಪ್ತತೆ ಹೆಚ್ಚಿಸಿಕೊಂಡಿದ್ದೇ ಇದಕ್ಕೆಲ್ಲ ಕಾರಣ ಎನ್ನಲಾಗುತ್ತಿದೆ.

2019ರಲ್ಲಿ ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಅವರ ಮದುವೆ ನಡೆದಿತ್ತು. ಇಬ್ಬರೂ ಪ್ರೀತಿಸಿ ವಿವಾಹ ಆಗಿದ್ದರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಅವರಿಬ್ಬರ ನಡುವೆ ಮನಸ್ತಾಪ ಹೆಚ್ಚಾಯಿತು. ಸಾರ್ವಜನಿಕವಾಗಿ ಈ ವಿಷಯ ಬಹಿರಂಗ ಆಗದೇ ಇದ್ದರೂ ಕೂಡ ಆಪ್ತ ವಲಯದಲ್ಲಿ ಗುಸುಗುಸು ಕೇಳಿಬರುತ್ತಿತ್ತು. ಕಡೆಗೂ ಸಂಸಾರದ ಬಿರುಕು ಬಹಿರಂಗ ಆಗಿದೆ.

ಮನಸ್ತಾಪ ಹೆಚ್ಚಿದ ಬಳಿಕ ಶ್ರೀದೇವಿ ಅವರು ವಿದೇಶಕ್ಕೆ ತೆರಳಿದರು. ಕಳೆದ ಕೆಲವು ತಿಂಗಳಿಂದ ಅವರು ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಯುವ ರಾಜ್​ಕುಮಾರ್​ ನಟಿಸಿದ ‘ಯುವ’ ಸಿನಿಮಾ ಈ ವರ್ಷ ಬಿಡುಗಡೆ ಆಯಿತು. ಆ ಸಿನಿಮಾಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳಲ್ಲೂ ಪತ್ನಿ ಶ್ರೀದೇವಿ ಕಾಣಿಸಿಕೊಳ್ಳಲೇ ಇಲ್ಲ. ಆಗಲೂ ಕೂಡ ಬಹುತೇಕರಿಗೆ ಅನುಮಾನ ಮೂಡಿತ್ತು.

ಮೂಲಗಳ ಪ್ರಕಾರ, ಯುವ ರಾಜ್​ಕುಮಾರ್​ ಅವರು ಕನ್ನಡ ಚಿತ್ರರಂಗದ ಖ್ಯಾತ ನಟಿಯೊಬ್ಬರ ಜೊತೆ ಸ್ನೇಹ ಬೆಳೆಸಿಕೊಂಡಿದ್ದಾರೆ. ಆ ನಟಿಯ ಜೊತೆ ಯುವ ಆಪ್ತತೆ ಹೆಚ್ಚಾಯಿತು. ಆ ಕಾರಣದಿಂದಲೇ ಅವರ ಸಂಸಾರದಲ್ಲಿ ಸಮಸ್ಯೆ ಶುರುವಾಗಿರುವ ಸಾಧ್ಯತೆ ದಟ್ಟವಾಗಿದೆ. ಸದ್ಯಕ್ಕೆ ಶ್ರೀದೇವಿ ಅವರು ವಿಚ್ಛೇದನದ ಕುರಿತಂತೆ ಪ್ರತಿಕ್ರಿಯೆ ನೀಡುವುದು ಬಾಕಿಯಿದೆ. ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.

ಇದನ್ನೂ ಓದಿ: ಮಗು ಬೇಡ ಎಂದ ನಿವೇದಿತಾ: ಇದೇ ಕಾರಣಕ್ಕೆ ವಿಚ್ಛೇದನ ಪಡೆದ ಚಂದನ್​ ಶೆಟ್ಟಿ?

ಅಣ್ಣಾವ್ರ ಕುಟುಂಬದಲ್ಲಿ ಆಗುತ್ತಿರುವ ಮೊದಲ ವಿಚ್ಛೇದನ ಪ್ರಕರಣ ಇದು. ಹಾಗಾಗಿ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ. ಕುಟುಂಬದ ಹಿರಿಯರಾದ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​, ಅಶ್ವಿನಿ ಪುನೀತ್​ ರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್​​ ಮುಂತಾದವರು ಏನು ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.