AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಮಾಹಿತಿ ಇಲ್ಲ’: ಯುವ ರಾಜ್​ಕುಮಾರ್ ಡಿವೋರ್ಸ್ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ

‘ಯುವ ಡಿವೋರ್ಸ್​ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ, ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಈ ಬಗ್ಗೆ ಮೊಬೈಲ್​ನಲ್ಲಿ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ’ ಎಂದು ಶಿವರಾಜ್​ಕುಮಾರ್​ ಅವರು ಹೇಳಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದಲ್ಲಿ ಇದೇ ಮೊದಲ ಬಾರಿಗೆ ವಿಚ್ಛೇದನ ನಡೆಯುತ್ತಿದೆ. ಆದ್ದರಿಂದ ಅಭಿಮಾನಿಗಳಿಗೆ ಶಾಕ್​ ಆಗಿದೆ.

‘ನನಗೆ ಮಾಹಿತಿ ಇಲ್ಲ’: ಯುವ ರಾಜ್​ಕುಮಾರ್ ಡಿವೋರ್ಸ್ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ
ಶಿವರಾಜ್​ಕುಮಾರ್​, ಶ್ರೀದೇವಿ, ಯುವ ರಾಜ್​ಕುಮಾರ್
Basavaraj Yaraganavi
| Edited By: |

Updated on: Jun 10, 2024 | 3:29 PM

Share

ಡಾ. ರಾಜ್​ಕುಮಾರ್​ ಅವರ ಮೊಮ್ಮಗ ಯುವ ರಾಜ್​ಕುಮಾರ್ (Yuva Rajkumar)​ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪತ್ನಿ ಶ್ರೀದೇವಿ ಭರಪ್ಪ ಅವರಿಂದ ಡಿವೋರ್ಸ್​ ಪಡೆಯಲು ಮುಂದಾಗಿದ್ದಾರೆ. ಸದ್ಯ ಅಮೆರಿಕದಲ್ಲಿ ಇರುವ ಶ್ರೀದೇವಿ (Sridevi) ಅವರು ಡಿವೋರ್ಸ್​​ ನೋಟಿಸ್​ಗೆ ಪ್ರತಿಕ್ರಿಯಿಸಿದ್ದು, ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲ ಬೆಳೆವಣಿಗೆಗಳ ಕುರಿತಂತೆ ಅಣ್ಣಾವ್ರ ಕುಟುಂಬದ ಹಿರಿಯರಾದ ಶಿವರಾಜ್​ಕುಮಾರ್​ (Shivarajkumar) ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಅವರ ವಿಚ್ಛೇದನದ (Yuva Rajkumar Sridevi Divorce) ಬಗ್ಗೆ ತಮಗೆ ಯಾವುದೇ ಮಾಹಿತಿ ಸದ್ಯಕ್ಕೆ ಇಲ್ಲ ಎಂದು ಶಿವಣ್ಣ ಹೇಳಿದ್ದಾರೆ.

‘ಯುವ ಡಿವೋರ್ಸ್​ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ, ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಈ ಬಗ್ಗೆ ಮೊಬೈಲ್​ನಲ್ಲಿ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ’ ಎಂದು ಶಿವರಾಜ್​ಕುಮಾರ್​ ಅವರು ಹೇಳಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದಲ್ಲಿ ಇದೇ ಮೊದಲ ಬಾರಿಗೆ ವಿಚ್ಛೇದನ ನಡೆಯುತ್ತಿದೆ. ಆದ್ದರಿಂದ ಅಭಿಮಾನಿಗಳಿಗೆ ಶಾಕ್​ ಆಗಿದೆ.

ಇದನ್ನೂ ಓದಿ: ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್​ಕುಮಾರ್​ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?

2018ರ ಜುಲೈ 5ರಂದು ಮೈಸೂರಿನಲ್ಲಿ ನಿಶ್ಚಿತಾರ್ಥ ಮಾಡಲಾಗಿತ್ತು. 2019ರ ಮೇ 26ರಂದು ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಭೈರಪ್ಪ ಅವರ ವಿವಾಹ ನೆರವೇರಿತ್ತು. ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿ ವಿವಾಹ ಸಮಾರಂಭ ನಡೆದಿತ್ತು. ಅದರಲ್ಲಿ ಚಿರಂಜೀವಿ, ಉಪೇಂದ್ರ, ಯಶ್, ರವಿಚಂದ್ರನ್, ದ್ವಾರಕೀಶ್​, ರಚಿತಾ ರಾಮ್, ಚಿರಂಜೀವಿ ಸರ್ಜಾ, ರಶ್ಮಿಕಾ ಮಂದಣ್ಣ, ಸಿದ್ದರಾಮಯ್ಯ ಮುಂತಾದವರು ಭಾಗಿ ಆಗಿದ್ದರು. ಆದರೆ ಈಗ ಈ ಮದುವೆ ಮುರಿದು ಬಿದ್ದಿದೆ.

ಶ್ರೀದೇವಿ ಭೈರಪ್ಪ ಅವರು ಮೈಸೂರಿನಲ್ಲಿ ಹುಟ್ಟಿ ಬೆಳೆದು ಉನ್ನತ ಶಿಕ್ಷಣ ಪಡೆದಿದ್ದಾರೆ. ‘ಡಾ. ರಾಜ್ ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿ’ ಜವಾಬ್ದಾರಿಯನ್ನು ಅವರು ನಿಭಾಯಿಸುತ್ತಿದ್ದರು. ಅಕಾಡೆಮಿ ರೂವಾರಿ ಶ್ರೀದೇವಿ ಅವರೇ ಆಗಿದ್ದರು. ಅವರ ಜೊತೆ ಯುವ ರಾಜ್​ಕುಮಾರ್​ ಸುಮಾರು 7 ವರ್ಷ ಪ್ರೀತಿಯಲ್ಲಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಈಗ ಕಳೆದ ಆರೇಳು ತಿಂಗಳಿಂದ ಯುವರಾಜ್-ಶ್ರೀದೇವಿ ಒಟ್ಟಿಗೆ ವಾಸಿಸುತ್ತಿಲ್ಲ. ವಿಚ್ಛೇದನದ ಬಗ್ಗೆ ಶ್ರೀದೇವಿ ಅವರು ಸಾರ್ವಜನಿಕವಾಗಿ ಮಾತನಾಡುವುದು ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್