AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಮಾಹಿತಿ ಇಲ್ಲ’: ಯುವ ರಾಜ್​ಕುಮಾರ್ ಡಿವೋರ್ಸ್ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ

‘ಯುವ ಡಿವೋರ್ಸ್​ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ, ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಈ ಬಗ್ಗೆ ಮೊಬೈಲ್​ನಲ್ಲಿ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ’ ಎಂದು ಶಿವರಾಜ್​ಕುಮಾರ್​ ಅವರು ಹೇಳಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದಲ್ಲಿ ಇದೇ ಮೊದಲ ಬಾರಿಗೆ ವಿಚ್ಛೇದನ ನಡೆಯುತ್ತಿದೆ. ಆದ್ದರಿಂದ ಅಭಿಮಾನಿಗಳಿಗೆ ಶಾಕ್​ ಆಗಿದೆ.

‘ನನಗೆ ಮಾಹಿತಿ ಇಲ್ಲ’: ಯುವ ರಾಜ್​ಕುಮಾರ್ ಡಿವೋರ್ಸ್ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ
ಶಿವರಾಜ್​ಕುಮಾರ್​, ಶ್ರೀದೇವಿ, ಯುವ ರಾಜ್​ಕುಮಾರ್
Basavaraj Yaraganavi
| Edited By: |

Updated on: Jun 10, 2024 | 3:29 PM

Share

ಡಾ. ರಾಜ್​ಕುಮಾರ್​ ಅವರ ಮೊಮ್ಮಗ ಯುವ ರಾಜ್​ಕುಮಾರ್ (Yuva Rajkumar)​ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪತ್ನಿ ಶ್ರೀದೇವಿ ಭರಪ್ಪ ಅವರಿಂದ ಡಿವೋರ್ಸ್​ ಪಡೆಯಲು ಮುಂದಾಗಿದ್ದಾರೆ. ಸದ್ಯ ಅಮೆರಿಕದಲ್ಲಿ ಇರುವ ಶ್ರೀದೇವಿ (Sridevi) ಅವರು ಡಿವೋರ್ಸ್​​ ನೋಟಿಸ್​ಗೆ ಪ್ರತಿಕ್ರಿಯಿಸಿದ್ದು, ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲ ಬೆಳೆವಣಿಗೆಗಳ ಕುರಿತಂತೆ ಅಣ್ಣಾವ್ರ ಕುಟುಂಬದ ಹಿರಿಯರಾದ ಶಿವರಾಜ್​ಕುಮಾರ್​ (Shivarajkumar) ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಅವರ ವಿಚ್ಛೇದನದ (Yuva Rajkumar Sridevi Divorce) ಬಗ್ಗೆ ತಮಗೆ ಯಾವುದೇ ಮಾಹಿತಿ ಸದ್ಯಕ್ಕೆ ಇಲ್ಲ ಎಂದು ಶಿವಣ್ಣ ಹೇಳಿದ್ದಾರೆ.

‘ಯುವ ಡಿವೋರ್ಸ್​ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ, ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಈ ಬಗ್ಗೆ ಮೊಬೈಲ್​ನಲ್ಲಿ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ’ ಎಂದು ಶಿವರಾಜ್​ಕುಮಾರ್​ ಅವರು ಹೇಳಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದಲ್ಲಿ ಇದೇ ಮೊದಲ ಬಾರಿಗೆ ವಿಚ್ಛೇದನ ನಡೆಯುತ್ತಿದೆ. ಆದ್ದರಿಂದ ಅಭಿಮಾನಿಗಳಿಗೆ ಶಾಕ್​ ಆಗಿದೆ.

ಇದನ್ನೂ ಓದಿ: ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್​ಕುಮಾರ್​ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?

2018ರ ಜುಲೈ 5ರಂದು ಮೈಸೂರಿನಲ್ಲಿ ನಿಶ್ಚಿತಾರ್ಥ ಮಾಡಲಾಗಿತ್ತು. 2019ರ ಮೇ 26ರಂದು ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಭೈರಪ್ಪ ಅವರ ವಿವಾಹ ನೆರವೇರಿತ್ತು. ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿ ವಿವಾಹ ಸಮಾರಂಭ ನಡೆದಿತ್ತು. ಅದರಲ್ಲಿ ಚಿರಂಜೀವಿ, ಉಪೇಂದ್ರ, ಯಶ್, ರವಿಚಂದ್ರನ್, ದ್ವಾರಕೀಶ್​, ರಚಿತಾ ರಾಮ್, ಚಿರಂಜೀವಿ ಸರ್ಜಾ, ರಶ್ಮಿಕಾ ಮಂದಣ್ಣ, ಸಿದ್ದರಾಮಯ್ಯ ಮುಂತಾದವರು ಭಾಗಿ ಆಗಿದ್ದರು. ಆದರೆ ಈಗ ಈ ಮದುವೆ ಮುರಿದು ಬಿದ್ದಿದೆ.

ಶ್ರೀದೇವಿ ಭೈರಪ್ಪ ಅವರು ಮೈಸೂರಿನಲ್ಲಿ ಹುಟ್ಟಿ ಬೆಳೆದು ಉನ್ನತ ಶಿಕ್ಷಣ ಪಡೆದಿದ್ದಾರೆ. ‘ಡಾ. ರಾಜ್ ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿ’ ಜವಾಬ್ದಾರಿಯನ್ನು ಅವರು ನಿಭಾಯಿಸುತ್ತಿದ್ದರು. ಅಕಾಡೆಮಿ ರೂವಾರಿ ಶ್ರೀದೇವಿ ಅವರೇ ಆಗಿದ್ದರು. ಅವರ ಜೊತೆ ಯುವ ರಾಜ್​ಕುಮಾರ್​ ಸುಮಾರು 7 ವರ್ಷ ಪ್ರೀತಿಯಲ್ಲಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಈಗ ಕಳೆದ ಆರೇಳು ತಿಂಗಳಿಂದ ಯುವರಾಜ್-ಶ್ರೀದೇವಿ ಒಟ್ಟಿಗೆ ವಾಸಿಸುತ್ತಿಲ್ಲ. ವಿಚ್ಛೇದನದ ಬಗ್ಗೆ ಶ್ರೀದೇವಿ ಅವರು ಸಾರ್ವಜನಿಕವಾಗಿ ಮಾತನಾಡುವುದು ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ