AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಮಾಹಿತಿ ಇಲ್ಲ’: ಯುವ ರಾಜ್​ಕುಮಾರ್ ಡಿವೋರ್ಸ್ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ

‘ಯುವ ಡಿವೋರ್ಸ್​ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ, ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಈ ಬಗ್ಗೆ ಮೊಬೈಲ್​ನಲ್ಲಿ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ’ ಎಂದು ಶಿವರಾಜ್​ಕುಮಾರ್​ ಅವರು ಹೇಳಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದಲ್ಲಿ ಇದೇ ಮೊದಲ ಬಾರಿಗೆ ವಿಚ್ಛೇದನ ನಡೆಯುತ್ತಿದೆ. ಆದ್ದರಿಂದ ಅಭಿಮಾನಿಗಳಿಗೆ ಶಾಕ್​ ಆಗಿದೆ.

‘ನನಗೆ ಮಾಹಿತಿ ಇಲ್ಲ’: ಯುವ ರಾಜ್​ಕುಮಾರ್ ಡಿವೋರ್ಸ್ ಬಗ್ಗೆ ಶಿವಣ್ಣ ಮೊದಲ ಪ್ರತಿಕ್ರಿಯೆ
ಶಿವರಾಜ್​ಕುಮಾರ್​, ಶ್ರೀದೇವಿ, ಯುವ ರಾಜ್​ಕುಮಾರ್
Basavaraj Yaraganavi
| Edited By: |

Updated on: Jun 10, 2024 | 3:29 PM

Share

ಡಾ. ರಾಜ್​ಕುಮಾರ್​ ಅವರ ಮೊಮ್ಮಗ ಯುವ ರಾಜ್​ಕುಮಾರ್ (Yuva Rajkumar)​ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪತ್ನಿ ಶ್ರೀದೇವಿ ಭರಪ್ಪ ಅವರಿಂದ ಡಿವೋರ್ಸ್​ ಪಡೆಯಲು ಮುಂದಾಗಿದ್ದಾರೆ. ಸದ್ಯ ಅಮೆರಿಕದಲ್ಲಿ ಇರುವ ಶ್ರೀದೇವಿ (Sridevi) ಅವರು ಡಿವೋರ್ಸ್​​ ನೋಟಿಸ್​ಗೆ ಪ್ರತಿಕ್ರಿಯಿಸಿದ್ದು, ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲ ಬೆಳೆವಣಿಗೆಗಳ ಕುರಿತಂತೆ ಅಣ್ಣಾವ್ರ ಕುಟುಂಬದ ಹಿರಿಯರಾದ ಶಿವರಾಜ್​ಕುಮಾರ್​ (Shivarajkumar) ಅವರು ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಅವರ ವಿಚ್ಛೇದನದ (Yuva Rajkumar Sridevi Divorce) ಬಗ್ಗೆ ತಮಗೆ ಯಾವುದೇ ಮಾಹಿತಿ ಸದ್ಯಕ್ಕೆ ಇಲ್ಲ ಎಂದು ಶಿವಣ್ಣ ಹೇಳಿದ್ದಾರೆ.

‘ಯುವ ಡಿವೋರ್ಸ್​ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ, ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಈ ಬಗ್ಗೆ ಮೊಬೈಲ್​ನಲ್ಲಿ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ’ ಎಂದು ಶಿವರಾಜ್​ಕುಮಾರ್​ ಅವರು ಹೇಳಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದಲ್ಲಿ ಇದೇ ಮೊದಲ ಬಾರಿಗೆ ವಿಚ್ಛೇದನ ನಡೆಯುತ್ತಿದೆ. ಆದ್ದರಿಂದ ಅಭಿಮಾನಿಗಳಿಗೆ ಶಾಕ್​ ಆಗಿದೆ.

ಇದನ್ನೂ ಓದಿ: ಖ್ಯಾತ ನಟಿ ಜೊತೆ ಹೆಚ್ಚಿತಾ ಆಪ್ತತೆ? ಯುವ ರಾಜ್​ಕುಮಾರ್​ ವಿಚ್ಛೇದನಕ್ಕೆ ಇದೇ ಕಾರಣ ಆಯ್ತಾ?

2018ರ ಜುಲೈ 5ರಂದು ಮೈಸೂರಿನಲ್ಲಿ ನಿಶ್ಚಿತಾರ್ಥ ಮಾಡಲಾಗಿತ್ತು. 2019ರ ಮೇ 26ರಂದು ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ಭೈರಪ್ಪ ಅವರ ವಿವಾಹ ನೆರವೇರಿತ್ತು. ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿ ವಿವಾಹ ಸಮಾರಂಭ ನಡೆದಿತ್ತು. ಅದರಲ್ಲಿ ಚಿರಂಜೀವಿ, ಉಪೇಂದ್ರ, ಯಶ್, ರವಿಚಂದ್ರನ್, ದ್ವಾರಕೀಶ್​, ರಚಿತಾ ರಾಮ್, ಚಿರಂಜೀವಿ ಸರ್ಜಾ, ರಶ್ಮಿಕಾ ಮಂದಣ್ಣ, ಸಿದ್ದರಾಮಯ್ಯ ಮುಂತಾದವರು ಭಾಗಿ ಆಗಿದ್ದರು. ಆದರೆ ಈಗ ಈ ಮದುವೆ ಮುರಿದು ಬಿದ್ದಿದೆ.

ಶ್ರೀದೇವಿ ಭೈರಪ್ಪ ಅವರು ಮೈಸೂರಿನಲ್ಲಿ ಹುಟ್ಟಿ ಬೆಳೆದು ಉನ್ನತ ಶಿಕ್ಷಣ ಪಡೆದಿದ್ದಾರೆ. ‘ಡಾ. ರಾಜ್ ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿ’ ಜವಾಬ್ದಾರಿಯನ್ನು ಅವರು ನಿಭಾಯಿಸುತ್ತಿದ್ದರು. ಅಕಾಡೆಮಿ ರೂವಾರಿ ಶ್ರೀದೇವಿ ಅವರೇ ಆಗಿದ್ದರು. ಅವರ ಜೊತೆ ಯುವ ರಾಜ್​ಕುಮಾರ್​ ಸುಮಾರು 7 ವರ್ಷ ಪ್ರೀತಿಯಲ್ಲಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಈಗ ಕಳೆದ ಆರೇಳು ತಿಂಗಳಿಂದ ಯುವರಾಜ್-ಶ್ರೀದೇವಿ ಒಟ್ಟಿಗೆ ವಾಸಿಸುತ್ತಿಲ್ಲ. ವಿಚ್ಛೇದನದ ಬಗ್ಗೆ ಶ್ರೀದೇವಿ ಅವರು ಸಾರ್ವಜನಿಕವಾಗಿ ಮಾತನಾಡುವುದು ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?