AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರೀಕರಣ ಮುಗಿಸಿದ ‘ಯುವ’, ಶೀಘ್ರವೇ ಪ್ರಚಾರಕ್ಕೆ

Yuva Rajkumar: ದೊಡ್ಮನೆ ಕುಡಿ ಯುವ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾ ‘ಯುವ’ ಸಿನಿಮಾದ ಚಿತ್ರೀಕರಣ ಮುಗಿದಿದೆ. ಸಿನಿಮಾ ಮಾರ್ಚ್ 28ಕ್ಕೆ ಬಿಡುಗಡೆ ಆಗಲಿದೆ.

ಚಿತ್ರೀಕರಣ ಮುಗಿಸಿದ ‘ಯುವ’, ಶೀಘ್ರವೇ ಪ್ರಚಾರಕ್ಕೆ
ಮಂಜುನಾಥ ಸಿ.
|

Updated on: Feb 14, 2024 | 10:14 PM

Share

ಹೊಸ ನಟರ ಸಿನಿಮಾಗಳ ಬಗ್ಗೆ ಕನ್ನಡ ಚಿತ್ರರಂಗಕ್ಕೆ (Sandalwood) ಮತ್ತು ಪ್ರೇಕ್ಷಕರಿಗೂ ಸಹ ನಿರೀಕ್ಷೆಗಳು ಕಡಿಮೆ. ಆದರೆ ಒಂದು ಹೊಸ ನಟನ ಸಿನಿಮಾ ಬಗ್ಗೆ ಇಡೀ ಚಿತ್ರರಂಗ ಹಾಗೂ ಸಿನಿಮಾ ಪ್ರೇಮಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ ಅದುವೇ ‘ಯುವ’. ರಾಘವೇಂದ್ರ ರಾಜ್​ಕುಮಾರ್ ಪುತ್ರ ಯುವ ರಾಜ್​ಕುಮಾರ್ ನಟಿಸುತ್ತಿರುವ ಮೊದಲ ಸಿನಿಮಾ ‘ಯುವ’ ಇದೀಗ ಚಿತ್ರೀಕರಣ ಮುಗಿಸಿದ್ದು, ಪ್ರಚಾರವನ್ನು ಶೀಘ್ರವೇ ಆರಂಭ ಮಾಡುತ್ತಿದೆ.

ಹೊಂಬಾಳೆ ನಿರ್ಮಾಣ ಮಾಡಿ, ಪುನೀತ್ ರಾಜ್​ಕುಮಾರ್ ಅವರ ಮೆಚ್ಚಿನ ನಿರ್ದೇಶಕ ಸಂತೋಷ್ ಆನಂದ್​ರಾಮ್ ನಿರ್ದೇಶನ ಮಾಡಿರು ‘ಯುವ’ ಸಿನಿಮಾದ ಚಿತ್ರೀಕರಣ ಅಂತ್ಯವಾಗಿದ್ದು, ಚಿತ್ರತಂಡ ಒಟ್ಟಿಗೆ ಸೇರಿ ಚಿತ್ರಗಳನ್ನು ತೆಗೆಸಿಕೊಂಡು ಖುಷಿಯಿಂದ ಪ್ಯಾಕಪ್ ಮಾಡಿದೆ. ಸಿನಿಮಾದ ಮುಹೂರ್ತ ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ನೆರವೇರಿತ್ತು. ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್, ಹೊಂಬಾಳೆಯ ವಿಜಯ್ ಕಿರಗಂದೂರು ಇನ್ನೂ ಹಲವು ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ಮುಹೂರ್ತದಲ್ಲಿ ಭಾಗಿಯಾಗಿದ್ದರು. ಒಂದು ವರ್ಷ ಕಳೆವ ಮುಂಚೆಯೇ ಸಿನಿಮಾದ ಚಿತ್ರೀಕರಣವನ್ನು ನಿರ್ದೇಶಕ ಸಂತೋಷ್ ಆನಂದ್​ರಾಮ್ ಮುಗಿಸಿದ್ದಾರೆ.

ಇದನ್ನೂ ಓದಿ:Review: ಸರಳವಾದರೂ ತುಂಬ ವಿರಳವಾದ ಪ್ರೇಮಕಥೆಯಾಗಿ ಮೆಚ್ಚುಗೆ ಪಡೆಯುವ ಸುನಿ ಸಿನಿಮಾ

‘ಯುವ’ ಸಿನಿಮಾವು ಯುವ ರಾಜ್​ಕುಮಾರ್ ಅವರಿಗೆ ಲಾಂಚಿಂಗ್ ಪ್ಯಾಡ್ ಆಗಲಿದ್ದು, ಸಿನಿಮಾದ ಕತೆಯನ್ನು ಅಸಲಿಗೆ ಪುನೀತ್ ಅವರಿಗಾಗಿ ಮಾಡಿದ್ದರಂತೆ ಸಂತೋಷ್ ಆನಂದ್​ರಾಮ್, ಆದರೆ ಪುನೀತ್ ಅಗಲಿಕೆ ಬಳಿಕ ಚಿತ್ರಕತೆಯಲ್ಲಿ ತುಸು ಬದಲಾವಣೆಗಳನ್ನು ಮಾಡಿ ಅದನ್ನೇ ಯುವ ರಾಜ್​ಕುಮಾರ್ ಅವರಿಗಾಗಿ ಮಾಡಲಾಗಿದೆ. ಕಾಲೇಜು ಕತೆಯುಳ್ಳ ಆಕ್ಷನ್ ಸಿನಿಮಾ ಇದಾಗಿದ್ದು, ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ.

‘ಯುವ’ ಸಿನಿಮಾದ ಚಿತ್ರೀಕರಣ ಬೆಂಗಳೂರು ಸೇರಿದಂತೆ ಇನ್ನೂ ಕೆಲವು ಕಡೆಗಳಲ್ಲಿ ಅದ್ಧೂರಿಯಾಗಿ ನಡೆದಿದೆ. ಸಿನಿಮಾದಲ್ಲಿ ಯುವ ರಾಜ್​ಕುಮಾರ್, ಸಪ್ತಮಿ ಗೌಡ ಸೇರಿದಂತೆ ಇನ್ನೂ ಕೆಲವು ಹಿರಿಯ ನಟ-ನಟಿಯರು ಸಹ ಇದ್ದಾರೆ. ಈ ಸಿನಿಮಾದಲ್ಲಿ ಪುನೀತ್ ರಾಜ್​ಕುಮಾರ್ ಅವರಿಗೆ ವಿಶೇಷ ಗೌರವ ಸಹ ಸಲ್ಲಿಸಲಾಗಿದೆ ಎಂಬ ಮಾತುಗಳು ಸಹ ಇವೆ.

‘ಯುವ’ ಸಿನಿಮಾ ಸೆಟ್ಟೇರಿದಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿತ್ತು. ಆದರೆ ಆ ದಿನಾಂಕಕ್ಕೆ ಸಿನಿಮಾ ಬಿಡುಗಡೆ ಮಾಡಲಾಗಿಲ್ಲ. ಸಿನಿಮಾವನ್ನು ಮಾರ್ಚ್ 28ಕ್ಕೆ ಬಿಡುಗಡೆ ಮಾಡಲಾಗುತ್ತಿದೆ. ಸಿನಿಮಾದ ಪ್ರಚಾರ ಕೆಲಸಗಳು ಫೇಬ್ರವರಿ 16ರಿಂದಲೇ ಪ್ರಾರಂಭವಾಗಲಿವೆ. ಸಿನಿಮಾವನ್ನು ಸದ್ಯಕ್ಕೆ ಕನ್ನಡದಲ್ಲಿ ಮಾತ್ರವೇ ಬಿಡುಗಡೆ ಮಾಡಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ