AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಗೆ ದಾರಿಬಿಟ್ಟ ‘ಯುವ’: ಬಿಡುಗಡೆ ದಿನಾಂಕ ಮುಂದೂಡಿಕೆ

Yuva Movie: ಯುವ ರಾಜ್​ಕುಮಾರ್ ಅವರ 'ಯುವ' ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. 'ಸಲಾರ್' ಸಿನಿಮಾಕ್ಕಾಗಿ 'ಯುವ' ಸಿನಿಮಾದ ಬಿಡುಗಡೆಯನ್ನು ಹೊಂಬಾಳೆ ಫಿಲಮ್ಸ್ ಮುಂದಕ್ಕೆ ಹಾಕಿದೆ.

'ಸಲಾರ್' ಗೆ ದಾರಿಬಿಟ್ಟ 'ಯುವ': ಬಿಡುಗಡೆ ದಿನಾಂಕ ಮುಂದೂಡಿಕೆ
ಯುವ ಸಿನಿಮಾ
ಮಂಜುನಾಥ ಸಿ.
|

Updated on: Oct 26, 2023 | 7:53 PM

Share

ಯುವ ರಾಜ್​ಕುಮಾರ್ (Yuva Rajkumar) ನಟಿಸುತ್ತಿರುವ ‘ಯುವ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಹೊಂಬಾಳೆ ಫಿಲಮ್ಸ್​ನವರು ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಸಂತೋಶ್ ಆನಂದ್​ರಾಮ್ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಮುಹೂರ್ತ ಸಮಾರಂಭವನ್ನು ಅದ್ಧೂರಿಯಾಗಿ ನೆರವೇರಿಸಿದ್ದ ಹೊಂಬಾಳೆ, ಮುಹೂರ್ತದ ದಿನವೇ ಬಿಡುಗಡೆ ದಿನಾಂಕವನ್ನೂ ಘೋಷಣೆ ಮಾಡಿತ್ತು. ಆದರೆ ಈಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.

‘ಯುವ’ ಸಿನಿಮಾ ಸೆಟ್ಟೇರಿದಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿ ಆಶ್ಚರ್ಯ ಮೂಡಿಸಿತ್ತು ಹೊಂಬಾಳೆ ಫಿಲಮ್ಸ್. ‘ಯುವ’ ಸಿನಿಮಾವನ್ನು ಡಿಸೆಂಬರ್ 22ಕ್ಕೆ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಅದರಂತೆಯೇ ಸಿನಿಮಾಕ್ಕೆ ಸಂಬಂಧಿಸಿದ ಕೆಲಸಗಳು ಸಹ ಚಕ-ಚಕನೆ ನಡೆದಿದ್ದವು. ಸಿನಿಮಾಕ್ಕೆ ನಾಯಕಿ ಆಯ್ಕೆ, ಪಾತ್ರವರ್ಗದ ಆಯ್ಕೆಗಳು ಬೇಗನೆ ನಡೆದು ಚಿತ್ರೀಕರಣವೂ ಶುರುವಾಗಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿರುವ ಮಾಹಿತಿಯನ್ನು ಹೊಂಬಾಳೆ ಹಂಚಿಕೊಂಡಿದೆ.

‘ಯುವ’ ಸಿನಿಮಾವು ಡಿಸೆಂಬರ್ 22ಕ್ಕೆ ಬದಲಿಗೆ 2024ರ ಮಾರ್ಚ್ 28ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದ ಹೊಸ ಪೋಸ್ಟರ್​ ಮೂಲಕ ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಸೆಪ್ಟೆಂಬರ್ 29ಕ್ಕೆ ಬಿಡುಗಡೆ ಆಗಬೇಕಿದ್ದ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟು, ಡಿಸೆಂಬರ್ 22ಕ್ಕೆ ಬಿಡುಗಡೆ ಆಗುತ್ತಿರುವ ಕಾರಣ, ‘ಯುವ’ ಸಿನಿಮಾವನ್ನು ಮಾರ್ಚ್ 28ಕ್ಕೆ ಬಿಡುಗಡೆ ಮಾಡುವ ನಿರ್ಧಾರವನ್ನು ನಿರ್ಮಾಣ ಸಂಸ್ಥೆ ಮಾಡಿದೆ.

ಇದನ್ನೂ ಓದಿ:ಬಂದ್ ದಿನವೂ ಸಿನಿಮಾ ಶೂಟಿಂಗ್? ಸ್ಪಷ್ಟನೆ ನೀಡಿದ ಯುವ ರಾಜ್​ಕುಮಾರ್

‘ಯುವ’ ಸಿನಿಮಾವು ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ ಆಗಿರಲಿದೆ. ಈ ಮೊದಲು ಬೇರೊಂದು ಸಿನಿಮಾ ಮೂಲಕ ಯುವ ರಾಜ್​ಕುಮಾರ್ ನಟನೆಗೆ ಎಂಟ್ರಿ ನೀಡಬೇಕಿತ್ತು, ಆದರೆ ಅಪ್ಪು ಅಗಲಿಕೆ ಬಳಿಕ ಬದಲಾದ ಪರಿಸ್ಥಿತಿಯಲ್ಲಿ ಹೊಂಬಾಳೆ ಸಂಸ್ಥೆಯೇ ಯುವ ರಾಜ್​ಕುಮಾರ್ ಅವರನ್ನು ಲಾಂಚ್ ಮಾಡಲು ಮುಂದಾಗಿದೆ. ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಇದು ಹೊಂಬಾಳೆ ಜೊತೆಗೆ ಅವರ ಎರಡನೇ ಸಿನಿಮಾ.

ಹೊಂಬಾಳೆ ಫಿಲಮ್ಸ್​ನವರ ಆರು ಸಿನಿಮಾಗಳು ಪ್ರಸ್ತುತ ಚಾಲ್ತಿಯಲ್ಲಿವೆ. ಮೊದಲಿಗೆ ‘ಬಘೀರ’ ಸಿನಿಮಾ ಬಿಡುಗಡೆ ಆಗಲಿದೆ. ಅದರ ಬಳಿಕ ‘ಸಲಾರ್’ ಆ ಬಳಿಕ ಕ್ರಮವಾಗಿ ಮಲಯಾಳಂ ಸಿನಿಮಾ ‘ಟೈಸನ್’, ತಮಿಳಿನ ‘ರಘು ತಾತ’, ರಕ್ಷಿತ್ ಶೆಟ್ಟಿಯ ‘ರಿಚರ್ಡ್ ಆಂಟೊನಿ’ ಸಿನಿಮಾಗಳು ಬಿಡುಗಡೆ ಆಗುವ ಸಾಧ್ಯತೆ ಇವೆ. ‘ಕೆಜಿಎಫ್ 3’ ಸಿನಿಮಾವನ್ನು ಸಹ ಹೊಂಬಾಳೆ ಫಿಲಮ್ಸ್ ಘೋಷಣೆ ಮಾಡಿದ್ದು ಸಿನಿಮಾದ ಚಿತ್ರೀಕರಣ ಚಾಲ್ತಿ ಯಾವಾಗ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ