AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಗೆ ದಾರಿಬಿಟ್ಟ ‘ಯುವ’: ಬಿಡುಗಡೆ ದಿನಾಂಕ ಮುಂದೂಡಿಕೆ

Yuva Movie: ಯುವ ರಾಜ್​ಕುಮಾರ್ ಅವರ 'ಯುವ' ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. 'ಸಲಾರ್' ಸಿನಿಮಾಕ್ಕಾಗಿ 'ಯುವ' ಸಿನಿಮಾದ ಬಿಡುಗಡೆಯನ್ನು ಹೊಂಬಾಳೆ ಫಿಲಮ್ಸ್ ಮುಂದಕ್ಕೆ ಹಾಕಿದೆ.

'ಸಲಾರ್' ಗೆ ದಾರಿಬಿಟ್ಟ 'ಯುವ': ಬಿಡುಗಡೆ ದಿನಾಂಕ ಮುಂದೂಡಿಕೆ
ಯುವ ಸಿನಿಮಾ
ಮಂಜುನಾಥ ಸಿ.
|

Updated on: Oct 26, 2023 | 7:53 PM

Share

ಯುವ ರಾಜ್​ಕುಮಾರ್ (Yuva Rajkumar) ನಟಿಸುತ್ತಿರುವ ‘ಯುವ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಹೊಂಬಾಳೆ ಫಿಲಮ್ಸ್​ನವರು ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಸಂತೋಶ್ ಆನಂದ್​ರಾಮ್ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಮುಹೂರ್ತ ಸಮಾರಂಭವನ್ನು ಅದ್ಧೂರಿಯಾಗಿ ನೆರವೇರಿಸಿದ್ದ ಹೊಂಬಾಳೆ, ಮುಹೂರ್ತದ ದಿನವೇ ಬಿಡುಗಡೆ ದಿನಾಂಕವನ್ನೂ ಘೋಷಣೆ ಮಾಡಿತ್ತು. ಆದರೆ ಈಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.

‘ಯುವ’ ಸಿನಿಮಾ ಸೆಟ್ಟೇರಿದಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿ ಆಶ್ಚರ್ಯ ಮೂಡಿಸಿತ್ತು ಹೊಂಬಾಳೆ ಫಿಲಮ್ಸ್. ‘ಯುವ’ ಸಿನಿಮಾವನ್ನು ಡಿಸೆಂಬರ್ 22ಕ್ಕೆ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಅದರಂತೆಯೇ ಸಿನಿಮಾಕ್ಕೆ ಸಂಬಂಧಿಸಿದ ಕೆಲಸಗಳು ಸಹ ಚಕ-ಚಕನೆ ನಡೆದಿದ್ದವು. ಸಿನಿಮಾಕ್ಕೆ ನಾಯಕಿ ಆಯ್ಕೆ, ಪಾತ್ರವರ್ಗದ ಆಯ್ಕೆಗಳು ಬೇಗನೆ ನಡೆದು ಚಿತ್ರೀಕರಣವೂ ಶುರುವಾಗಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿರುವ ಮಾಹಿತಿಯನ್ನು ಹೊಂಬಾಳೆ ಹಂಚಿಕೊಂಡಿದೆ.

‘ಯುವ’ ಸಿನಿಮಾವು ಡಿಸೆಂಬರ್ 22ಕ್ಕೆ ಬದಲಿಗೆ 2024ರ ಮಾರ್ಚ್ 28ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದ ಹೊಸ ಪೋಸ್ಟರ್​ ಮೂಲಕ ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಸೆಪ್ಟೆಂಬರ್ 29ಕ್ಕೆ ಬಿಡುಗಡೆ ಆಗಬೇಕಿದ್ದ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟು, ಡಿಸೆಂಬರ್ 22ಕ್ಕೆ ಬಿಡುಗಡೆ ಆಗುತ್ತಿರುವ ಕಾರಣ, ‘ಯುವ’ ಸಿನಿಮಾವನ್ನು ಮಾರ್ಚ್ 28ಕ್ಕೆ ಬಿಡುಗಡೆ ಮಾಡುವ ನಿರ್ಧಾರವನ್ನು ನಿರ್ಮಾಣ ಸಂಸ್ಥೆ ಮಾಡಿದೆ.

ಇದನ್ನೂ ಓದಿ:ಬಂದ್ ದಿನವೂ ಸಿನಿಮಾ ಶೂಟಿಂಗ್? ಸ್ಪಷ್ಟನೆ ನೀಡಿದ ಯುವ ರಾಜ್​ಕುಮಾರ್

‘ಯುವ’ ಸಿನಿಮಾವು ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ ಆಗಿರಲಿದೆ. ಈ ಮೊದಲು ಬೇರೊಂದು ಸಿನಿಮಾ ಮೂಲಕ ಯುವ ರಾಜ್​ಕುಮಾರ್ ನಟನೆಗೆ ಎಂಟ್ರಿ ನೀಡಬೇಕಿತ್ತು, ಆದರೆ ಅಪ್ಪು ಅಗಲಿಕೆ ಬಳಿಕ ಬದಲಾದ ಪರಿಸ್ಥಿತಿಯಲ್ಲಿ ಹೊಂಬಾಳೆ ಸಂಸ್ಥೆಯೇ ಯುವ ರಾಜ್​ಕುಮಾರ್ ಅವರನ್ನು ಲಾಂಚ್ ಮಾಡಲು ಮುಂದಾಗಿದೆ. ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಇದು ಹೊಂಬಾಳೆ ಜೊತೆಗೆ ಅವರ ಎರಡನೇ ಸಿನಿಮಾ.

ಹೊಂಬಾಳೆ ಫಿಲಮ್ಸ್​ನವರ ಆರು ಸಿನಿಮಾಗಳು ಪ್ರಸ್ತುತ ಚಾಲ್ತಿಯಲ್ಲಿವೆ. ಮೊದಲಿಗೆ ‘ಬಘೀರ’ ಸಿನಿಮಾ ಬಿಡುಗಡೆ ಆಗಲಿದೆ. ಅದರ ಬಳಿಕ ‘ಸಲಾರ್’ ಆ ಬಳಿಕ ಕ್ರಮವಾಗಿ ಮಲಯಾಳಂ ಸಿನಿಮಾ ‘ಟೈಸನ್’, ತಮಿಳಿನ ‘ರಘು ತಾತ’, ರಕ್ಷಿತ್ ಶೆಟ್ಟಿಯ ‘ರಿಚರ್ಡ್ ಆಂಟೊನಿ’ ಸಿನಿಮಾಗಳು ಬಿಡುಗಡೆ ಆಗುವ ಸಾಧ್ಯತೆ ಇವೆ. ‘ಕೆಜಿಎಫ್ 3’ ಸಿನಿಮಾವನ್ನು ಸಹ ಹೊಂಬಾಳೆ ಫಿಲಮ್ಸ್ ಘೋಷಣೆ ಮಾಡಿದ್ದು ಸಿನಿಮಾದ ಚಿತ್ರೀಕರಣ ಚಾಲ್ತಿ ಯಾವಾಗ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು