AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಗೆ ದಾರಿಬಿಟ್ಟ ‘ಯುವ’: ಬಿಡುಗಡೆ ದಿನಾಂಕ ಮುಂದೂಡಿಕೆ

Yuva Movie: ಯುವ ರಾಜ್​ಕುಮಾರ್ ಅವರ 'ಯುವ' ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. 'ಸಲಾರ್' ಸಿನಿಮಾಕ್ಕಾಗಿ 'ಯುವ' ಸಿನಿಮಾದ ಬಿಡುಗಡೆಯನ್ನು ಹೊಂಬಾಳೆ ಫಿಲಮ್ಸ್ ಮುಂದಕ್ಕೆ ಹಾಕಿದೆ.

'ಸಲಾರ್' ಗೆ ದಾರಿಬಿಟ್ಟ 'ಯುವ': ಬಿಡುಗಡೆ ದಿನಾಂಕ ಮುಂದೂಡಿಕೆ
ಯುವ ಸಿನಿಮಾ
ಮಂಜುನಾಥ ಸಿ.
|

Updated on: Oct 26, 2023 | 7:53 PM

Share

ಯುವ ರಾಜ್​ಕುಮಾರ್ (Yuva Rajkumar) ನಟಿಸುತ್ತಿರುವ ‘ಯುವ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಹೊಂಬಾಳೆ ಫಿಲಮ್ಸ್​ನವರು ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಸಂತೋಶ್ ಆನಂದ್​ರಾಮ್ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಮುಹೂರ್ತ ಸಮಾರಂಭವನ್ನು ಅದ್ಧೂರಿಯಾಗಿ ನೆರವೇರಿಸಿದ್ದ ಹೊಂಬಾಳೆ, ಮುಹೂರ್ತದ ದಿನವೇ ಬಿಡುಗಡೆ ದಿನಾಂಕವನ್ನೂ ಘೋಷಣೆ ಮಾಡಿತ್ತು. ಆದರೆ ಈಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.

‘ಯುವ’ ಸಿನಿಮಾ ಸೆಟ್ಟೇರಿದಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿ ಆಶ್ಚರ್ಯ ಮೂಡಿಸಿತ್ತು ಹೊಂಬಾಳೆ ಫಿಲಮ್ಸ್. ‘ಯುವ’ ಸಿನಿಮಾವನ್ನು ಡಿಸೆಂಬರ್ 22ಕ್ಕೆ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಅದರಂತೆಯೇ ಸಿನಿಮಾಕ್ಕೆ ಸಂಬಂಧಿಸಿದ ಕೆಲಸಗಳು ಸಹ ಚಕ-ಚಕನೆ ನಡೆದಿದ್ದವು. ಸಿನಿಮಾಕ್ಕೆ ನಾಯಕಿ ಆಯ್ಕೆ, ಪಾತ್ರವರ್ಗದ ಆಯ್ಕೆಗಳು ಬೇಗನೆ ನಡೆದು ಚಿತ್ರೀಕರಣವೂ ಶುರುವಾಗಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿರುವ ಮಾಹಿತಿಯನ್ನು ಹೊಂಬಾಳೆ ಹಂಚಿಕೊಂಡಿದೆ.

‘ಯುವ’ ಸಿನಿಮಾವು ಡಿಸೆಂಬರ್ 22ಕ್ಕೆ ಬದಲಿಗೆ 2024ರ ಮಾರ್ಚ್ 28ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದ ಹೊಸ ಪೋಸ್ಟರ್​ ಮೂಲಕ ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಸೆಪ್ಟೆಂಬರ್ 29ಕ್ಕೆ ಬಿಡುಗಡೆ ಆಗಬೇಕಿದ್ದ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟು, ಡಿಸೆಂಬರ್ 22ಕ್ಕೆ ಬಿಡುಗಡೆ ಆಗುತ್ತಿರುವ ಕಾರಣ, ‘ಯುವ’ ಸಿನಿಮಾವನ್ನು ಮಾರ್ಚ್ 28ಕ್ಕೆ ಬಿಡುಗಡೆ ಮಾಡುವ ನಿರ್ಧಾರವನ್ನು ನಿರ್ಮಾಣ ಸಂಸ್ಥೆ ಮಾಡಿದೆ.

ಇದನ್ನೂ ಓದಿ:ಬಂದ್ ದಿನವೂ ಸಿನಿಮಾ ಶೂಟಿಂಗ್? ಸ್ಪಷ್ಟನೆ ನೀಡಿದ ಯುವ ರಾಜ್​ಕುಮಾರ್

‘ಯುವ’ ಸಿನಿಮಾವು ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ ಆಗಿರಲಿದೆ. ಈ ಮೊದಲು ಬೇರೊಂದು ಸಿನಿಮಾ ಮೂಲಕ ಯುವ ರಾಜ್​ಕುಮಾರ್ ನಟನೆಗೆ ಎಂಟ್ರಿ ನೀಡಬೇಕಿತ್ತು, ಆದರೆ ಅಪ್ಪು ಅಗಲಿಕೆ ಬಳಿಕ ಬದಲಾದ ಪರಿಸ್ಥಿತಿಯಲ್ಲಿ ಹೊಂಬಾಳೆ ಸಂಸ್ಥೆಯೇ ಯುವ ರಾಜ್​ಕುಮಾರ್ ಅವರನ್ನು ಲಾಂಚ್ ಮಾಡಲು ಮುಂದಾಗಿದೆ. ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಇದು ಹೊಂಬಾಳೆ ಜೊತೆಗೆ ಅವರ ಎರಡನೇ ಸಿನಿಮಾ.

ಹೊಂಬಾಳೆ ಫಿಲಮ್ಸ್​ನವರ ಆರು ಸಿನಿಮಾಗಳು ಪ್ರಸ್ತುತ ಚಾಲ್ತಿಯಲ್ಲಿವೆ. ಮೊದಲಿಗೆ ‘ಬಘೀರ’ ಸಿನಿಮಾ ಬಿಡುಗಡೆ ಆಗಲಿದೆ. ಅದರ ಬಳಿಕ ‘ಸಲಾರ್’ ಆ ಬಳಿಕ ಕ್ರಮವಾಗಿ ಮಲಯಾಳಂ ಸಿನಿಮಾ ‘ಟೈಸನ್’, ತಮಿಳಿನ ‘ರಘು ತಾತ’, ರಕ್ಷಿತ್ ಶೆಟ್ಟಿಯ ‘ರಿಚರ್ಡ್ ಆಂಟೊನಿ’ ಸಿನಿಮಾಗಳು ಬಿಡುಗಡೆ ಆಗುವ ಸಾಧ್ಯತೆ ಇವೆ. ‘ಕೆಜಿಎಫ್ 3’ ಸಿನಿಮಾವನ್ನು ಸಹ ಹೊಂಬಾಳೆ ಫಿಲಮ್ಸ್ ಘೋಷಣೆ ಮಾಡಿದ್ದು ಸಿನಿಮಾದ ಚಿತ್ರೀಕರಣ ಚಾಲ್ತಿ ಯಾವಾಗ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ