AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಗೆ ದಾರಿಬಿಟ್ಟ ‘ಯುವ’: ಬಿಡುಗಡೆ ದಿನಾಂಕ ಮುಂದೂಡಿಕೆ

Yuva Movie: ಯುವ ರಾಜ್​ಕುಮಾರ್ ಅವರ 'ಯುವ' ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. 'ಸಲಾರ್' ಸಿನಿಮಾಕ್ಕಾಗಿ 'ಯುವ' ಸಿನಿಮಾದ ಬಿಡುಗಡೆಯನ್ನು ಹೊಂಬಾಳೆ ಫಿಲಮ್ಸ್ ಮುಂದಕ್ಕೆ ಹಾಕಿದೆ.

'ಸಲಾರ್' ಗೆ ದಾರಿಬಿಟ್ಟ 'ಯುವ': ಬಿಡುಗಡೆ ದಿನಾಂಕ ಮುಂದೂಡಿಕೆ
ಯುವ ಸಿನಿಮಾ
ಮಂಜುನಾಥ ಸಿ.
|

Updated on: Oct 26, 2023 | 7:53 PM

Share

ಯುವ ರಾಜ್​ಕುಮಾರ್ (Yuva Rajkumar) ನಟಿಸುತ್ತಿರುವ ‘ಯುವ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಹೊಂಬಾಳೆ ಫಿಲಮ್ಸ್​ನವರು ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಸಂತೋಶ್ ಆನಂದ್​ರಾಮ್ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಮುಹೂರ್ತ ಸಮಾರಂಭವನ್ನು ಅದ್ಧೂರಿಯಾಗಿ ನೆರವೇರಿಸಿದ್ದ ಹೊಂಬಾಳೆ, ಮುಹೂರ್ತದ ದಿನವೇ ಬಿಡುಗಡೆ ದಿನಾಂಕವನ್ನೂ ಘೋಷಣೆ ಮಾಡಿತ್ತು. ಆದರೆ ಈಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.

‘ಯುವ’ ಸಿನಿಮಾ ಸೆಟ್ಟೇರಿದಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿ ಆಶ್ಚರ್ಯ ಮೂಡಿಸಿತ್ತು ಹೊಂಬಾಳೆ ಫಿಲಮ್ಸ್. ‘ಯುವ’ ಸಿನಿಮಾವನ್ನು ಡಿಸೆಂಬರ್ 22ಕ್ಕೆ ಬಿಡುಗಡೆ ಮಾಡುವುದಾಗಿ ಹೇಳಿತ್ತು. ಅದರಂತೆಯೇ ಸಿನಿಮಾಕ್ಕೆ ಸಂಬಂಧಿಸಿದ ಕೆಲಸಗಳು ಸಹ ಚಕ-ಚಕನೆ ನಡೆದಿದ್ದವು. ಸಿನಿಮಾಕ್ಕೆ ನಾಯಕಿ ಆಯ್ಕೆ, ಪಾತ್ರವರ್ಗದ ಆಯ್ಕೆಗಳು ಬೇಗನೆ ನಡೆದು ಚಿತ್ರೀಕರಣವೂ ಶುರುವಾಗಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿರುವ ಮಾಹಿತಿಯನ್ನು ಹೊಂಬಾಳೆ ಹಂಚಿಕೊಂಡಿದೆ.

‘ಯುವ’ ಸಿನಿಮಾವು ಡಿಸೆಂಬರ್ 22ಕ್ಕೆ ಬದಲಿಗೆ 2024ರ ಮಾರ್ಚ್ 28ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದ ಹೊಸ ಪೋಸ್ಟರ್​ ಮೂಲಕ ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಸೆಪ್ಟೆಂಬರ್ 29ಕ್ಕೆ ಬಿಡುಗಡೆ ಆಗಬೇಕಿದ್ದ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟು, ಡಿಸೆಂಬರ್ 22ಕ್ಕೆ ಬಿಡುಗಡೆ ಆಗುತ್ತಿರುವ ಕಾರಣ, ‘ಯುವ’ ಸಿನಿಮಾವನ್ನು ಮಾರ್ಚ್ 28ಕ್ಕೆ ಬಿಡುಗಡೆ ಮಾಡುವ ನಿರ್ಧಾರವನ್ನು ನಿರ್ಮಾಣ ಸಂಸ್ಥೆ ಮಾಡಿದೆ.

ಇದನ್ನೂ ಓದಿ:ಬಂದ್ ದಿನವೂ ಸಿನಿಮಾ ಶೂಟಿಂಗ್? ಸ್ಪಷ್ಟನೆ ನೀಡಿದ ಯುವ ರಾಜ್​ಕುಮಾರ್

‘ಯುವ’ ಸಿನಿಮಾವು ಯುವ ರಾಜ್​ಕುಮಾರ್ ಅವರ ಮೊದಲ ಸಿನಿಮಾ ಆಗಿರಲಿದೆ. ಈ ಮೊದಲು ಬೇರೊಂದು ಸಿನಿಮಾ ಮೂಲಕ ಯುವ ರಾಜ್​ಕುಮಾರ್ ನಟನೆಗೆ ಎಂಟ್ರಿ ನೀಡಬೇಕಿತ್ತು, ಆದರೆ ಅಪ್ಪು ಅಗಲಿಕೆ ಬಳಿಕ ಬದಲಾದ ಪರಿಸ್ಥಿತಿಯಲ್ಲಿ ಹೊಂಬಾಳೆ ಸಂಸ್ಥೆಯೇ ಯುವ ರಾಜ್​ಕುಮಾರ್ ಅವರನ್ನು ಲಾಂಚ್ ಮಾಡಲು ಮುಂದಾಗಿದೆ. ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಇದು ಹೊಂಬಾಳೆ ಜೊತೆಗೆ ಅವರ ಎರಡನೇ ಸಿನಿಮಾ.

ಹೊಂಬಾಳೆ ಫಿಲಮ್ಸ್​ನವರ ಆರು ಸಿನಿಮಾಗಳು ಪ್ರಸ್ತುತ ಚಾಲ್ತಿಯಲ್ಲಿವೆ. ಮೊದಲಿಗೆ ‘ಬಘೀರ’ ಸಿನಿಮಾ ಬಿಡುಗಡೆ ಆಗಲಿದೆ. ಅದರ ಬಳಿಕ ‘ಸಲಾರ್’ ಆ ಬಳಿಕ ಕ್ರಮವಾಗಿ ಮಲಯಾಳಂ ಸಿನಿಮಾ ‘ಟೈಸನ್’, ತಮಿಳಿನ ‘ರಘು ತಾತ’, ರಕ್ಷಿತ್ ಶೆಟ್ಟಿಯ ‘ರಿಚರ್ಡ್ ಆಂಟೊನಿ’ ಸಿನಿಮಾಗಳು ಬಿಡುಗಡೆ ಆಗುವ ಸಾಧ್ಯತೆ ಇವೆ. ‘ಕೆಜಿಎಫ್ 3’ ಸಿನಿಮಾವನ್ನು ಸಹ ಹೊಂಬಾಳೆ ಫಿಲಮ್ಸ್ ಘೋಷಣೆ ಮಾಡಿದ್ದು ಸಿನಿಮಾದ ಚಿತ್ರೀಕರಣ ಚಾಲ್ತಿ ಯಾವಾಗ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು