AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ’; ಅನೈತಿಕ ಸಂಬಂಧ ಆರೋಪಕ್ಕೆ ತಿರುಗೇಟು ಕೊಟ್ಟ ಯುವ ಪತ್ನಿ

‘ಶ್ರೀದೇವಿ ಅವರು ಯುವಗೆ ಟಾರ್ಚರ್ ಮಾಡಿದ್ದಾರೆ. ರಾಜ್​ಕುಮಾರ್ ಅಕಾಡೆಮಿಯಿಂದ ಪರ್ಸನಲ್ ಅಕೌಂಟ್​ಗೆ 3 ಕೋಟಿ ರೂಪಾಯಿ ಟ್ರಾನ್ಸಫರ್ ಮಾಡಿಕೊಂಡಿದ್ದಾರೆ ಎಂದು ಯುವ ಪರ ವಕೀಲರು ಆರೋಪ ಮಾಡಿದ್ದರು. ಇದಕ್ಕೆ ಶ್ರೀದೇವಿ ಉತ್ತರ ನೀಡಿದ್ದಾರೆ.

‘ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ’; ಅನೈತಿಕ ಸಂಬಂಧ ಆರೋಪಕ್ಕೆ ತಿರುಗೇಟು ಕೊಟ್ಟ ಯುವ ಪತ್ನಿ
ಯುವ
ಅಕ್ಷತಾ ವರ್ಕಾಡಿ
| Updated By: ರಾಜೇಶ್ ದುಗ್ಗುಮನೆ|

Updated on: Jun 11, 2024 | 7:02 AM

Share

ನಟ ಯುವ ಹಾಗೂ ಶ್ರೀದೇವಿ (Sridevi) ಸಂಸಾರ ವಿಚ್ಛೇದನದವರೆಗೆ ಬಂದು ನಿಂತಿದೆ. ಯುವ ಅವರು ಕೋರ್ಟ್​ ಮೆಟ್ಟಿಲೇರಿದ್ದಾರೆ. ಪತ್ನಿಯಿಂದ ಕಿರುಕುಳ ಮತ್ತಿತ್ಯಾದಿ ಆರೋಪಗಳನ್ನು ಮಾಡಿದ್ದಾರೆ. ಈ ಮಧ್ಯೆ ಯುವ ಪರ ವಕೀಲರು ಸುದ್ದಿಗೋಷ್ಠಿ ನಡೆಸಿ ಶ್ರೀದೇವಿ ವಿರುದ್ಧ ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಶ್ರೀದೇವಿಗೆ ಅನೈತಿಕ ಸಂಬಂಧವಿದೆ, ರಾಜ್​ಕುಮಾರ್ ಅಕಾಡೆಮಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬಿತ್ಯಾದಿ ಆರೋಪ ಹೊರಿಸಿದ್ದಾರೆ. ಈ ಆರೋಪಗಳಿಗೆ ಶ್ರೀದೇವಿ ತಿರುಗೇಟು ನೀಡಿದ್ದಾರೆ.

ಸೋಮವಾರ (ಜೂನ್ 10) ಸುದ್ದಿಗೋಷ್ಠಿ ನಡೆಸಿದ್ದ ಯುವ ಪರ ವಕೀಲರು, ‘ಶ್ರೀದೇವಿ ಅವರು ಯುವಗೆ ಟಾರ್ಚರ್ ಮಾಡಿದ್ದಾರೆ. ರಾಜ್​ಕುಮಾರ್ ಅಕಾಡೆಮಿಯಿಂದ ಪರ್ಸನಲ್ ಅಕೌಂಟ್​ಗೆ 3 ಕೋಟಿ ರೂಪಾಯಿ ಟ್ರಾನ್ಸಫರ್ ಮಾಡಿಕೊಂಡಿದ್ದಾರೆ. ನಿನ್ನನ್ನು ಬೀದಿಗೆ ತರುತ್ತೇನೆ ಎಂದು ಪತಿಗೆ ಬೆದರಿಸಿದ್ದಾರೆ. ಯುವನ ಬಳಿಕ ಅಮೆರಿಕಕ್ಕೆ ಬರುವಂತೆ ಒತ್ತಾಯ ಮಾಡಿದ್ದರು. ಬಾಯ್​ಫ್ರೆಂಡ್ ಮೂಲಕ ಮಗು ಪಡೆಯೋ ಆಲೋಚನೆಯಲ್ಲಿ ಅವರಿದ್ದರು. ರಾಧಯ್ಯ ಅನ್ನೋದು ಶ್ರೀದೇವಿ ಬಾಯ್​ಫ್ರೆಂಡ್ ಹೆಸರು’ ಎಂದು ಆರೋಪಿಸಿದ್ದರು.

ಇದಕ್ಕೆ ಶ್ರೀದೇವಿ ಉತ್ತರಿಸಿದ್ದಾರೆ. ‘ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಂದು ಹೆಣ್ಣಿನ ಚಾರಿತ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ’ ಎಂದು ಫೇಸ್​ಬುಕ್ ಪೋಸ್ಟ್ ಆರಂಭಿಸಿದ್ದಾರೆ.

ಇದನ್ನೂ ಓದಿ: ಯುವ ರಾಜ್​ಕುಮಾರ್​ ವಿಚ್ಛೇದನದ ಬಗ್ಗೆ ಸಂಪೂರ್ಣ ವಿವರ ನೀಡಿದ ಶ್ರೀದೇವಿ ತಂದೆ ಭೈರಪ್ಪ

‘ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ. ಆದರೆ, ನನ್ನ ಸಭ್ಯತೆ ಹಾಗೂ ಮಾನವೀಯತೆಗಳನ್ನು ಗೌರವಿಸದೆ ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ