AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್ ಕುಮಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಗಿಫ್ಟ್; ಇಲ್ಲಿದೆ ಹೊಸ ಸಮಾಚಾರ

Nikhil Kumar: ಸ್ಯಾಂಡಲ್​ವುಡ್ ನಟ ನಿಖಿಲ್​ ಕುಮಾರ್ ಅವರ ಐದನೇ ಚಿತ್ರದ ಮಾಹಿತಿ ಜನವರಿ 22ರಂದು ಘೋಷಣೆಯಾಗಲಿದೆ. ಈ ಕುರಿತು ವಿಶೇಷ ಘಷಣೆ ಮಾಡಿದೆ ಚಿತ್ರತಂಡ.

ನಿಖಿಲ್ ಕುಮಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಗಿಫ್ಟ್; ಇಲ್ಲಿದೆ ಹೊಸ ಸಮಾಚಾರ
ನಿಖಿಲ್ ಕುಮಾರ್ ಹೊಸ ಚಿತ್ರದ ಪೋಸ್ಟರ್
Follow us
TV9 Web
| Updated By: shivaprasad.hs

Updated on:Jan 18, 2022 | 1:19 PM

ಚಂದನವನದ ‘ಯುವರಾಜ’ ಎಂದು ಅಭಿಮಾನಿಗಳು ಪ್ರೀತಿಯಿಂದ ಕರೆಯುವ ನಿಖಿಲ್ ಕುಮಾರ್​​ಗೆ (Nikhil Kumar) ಜನವರಿ 22ರಂದು ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಮುಂದಿನ ಚಿತ್ರವನ್ನು ನಿರ್ಮಿಸುತ್ತಿರುವ ಚಿತ್ರತಂಡ ವಿಶೇಷ ಗಿಫ್ಟ್ ನೀಡಲು ಮುಂದಾಗಿದೆ.‘ರೈಡರ್’ (Rider), ‘ಜಾಗ್ವಾರ್’ ಮೊದಲಾದ ಗಮನ ಸೆಳೆಯುವ ಚಿತ್ರಗಳನ್ನು ನೀಡಿರುವ ನಿಖಿಲ್ ಅವರ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಅವರ ಜನ್ಮದಿನದಂದು ರಿಲೀಸ್ ಆಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ (KVN Productions) ಅದ್ದೂರಿಯಾಗಿ ನಿಖಿಲ್ ಐದನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಅದರ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಲು ಚಿತ್ರತಂಡ ಸಕಲ ರೀತಿಯಿಂದ ಸಜ್ಜಾಗಿದೆ. ಸಂಕ್ರಾಂತಿ ಹಬ್ಬ ಮುಗಿಸಿಕೊಂಡು ಶೂಟಿಂಗ್ ಅಖಾಡಕ್ಕೆ ಧುಮುಕಿದ್ದ ಯುವರಾಜನ ಹೊಸ ಸಿನಿಮಾಗೆ ಮಂಜು ಅಥರ್ವ ಆಕ್ಷನ್ ಕಟ್ ಹೇಳಿದ್ದಾರೆ.

ಕಳೆದ ಏಳು ವರ್ಷಗಳಿಂದ ನಿರ್ದೇಶಕ ಮಂಜು ಅಥರ್ವ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ತಮಿಳಿನ ಕದಿರನ್ ಜತೆ ಕೆಲಸ ಮಾಡಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ‘ಮಾಸ್ಟರ್‌ಪೀಸ್‌’, ‘ಮಫ್ತಿ’ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಆಗಿ ಕೆಲಸ ಮಾಡಿದ್ದಾರೆ. ನೆನಪಿರಲಿ ಪ್ರೇಮ್‌ ಅವರ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಸಿನಿಮಾಗೆ ಮಂಜು ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ ಅವರು ನಿಖಿಲ್‌ ಸಿನಿಮಾ ಮೂಲಕ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ನಿಖಿಲ್ ಹಾಗೂ ಮಂಜು ಅಥರ್ವ ಸಹಯೋಗದಲ್ಲಿ ಮೂಡಿ ಬರುತ್ತಿರುವ ಹೊಸ ಸಿನಿಮಾದ‌ ಮೊದಲ ಹಂತದ ಶೂಟಿಂಗ್ ಈಗಾಗಲೇ ಪ್ರಾರಂಭವಾಗಿದೆ. ನಿಖಿಲ್ ಅವರ ಭಾಗದ ಶೂಟಿಂಗ್ ನಡೆಯುತ್ತಿದೆ. ಈ ಬಗ್ಗೆ ಚಿತ್ರ ತಂಡ ಮಾಹಿತಿ ಹಂಚಿಕೊಂಡಿದೆ. ಕೆವಿಎನ್ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ ನಿಖಿಲ್ ಸಿನಿಮಾವನ್ನು ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ.

ಸದ್ಯಕ್ಕೆ ಚಿತ್ರದ ಎಲ್ಲಾ ಪಾತ್ರಗಳು ಫೈನಲ್ ಆಗಿಲ್ಲ. ಚಿತ್ರಕ್ಕೆ ಅಜನೀಶ್ ಲೋಕನಾಥ್‌ ಸಂಗೀತ ನೀಡುತ್ತಿದ್ದಾರೆ. ‘ಮಫ್ತಿ’, ‘ಮದಗಜ’ ಸಿನಿಮಾಗಳ ಸಿನಿಮಾಟೋಗ್ರಾಫರ್ ನವೀನ್ ಕ್ಯಾಮೆರಾ ಕೈ ಚಳಕ ಸಿನಿಮಾಕ್ಕೆ ಇರಲಿದೆ. ಸದ್ಯಕ್ಕೆ ಶೂಟಿಂಗ್ ಪ್ರಾರಂಭಿಸಿರುವ ಚಿತ್ರತಂಡ ಟೈಟಲ್ ಹಾಗೂ ಇತರ ಮಾಹಿತಿ ಜತೆಗೆ ತಾರಾ ಬಳಗದ ಬಗ್ಗೆಯೂ ಮಾಹಿತಿ ಹಂಚಿಕೊಳ್ಳಲಿದೆ.

ಇದನ್ನೂ ಓದಿ:

ನಿಖಿಲ್​ ಕುಮಾರ್ ಹೊಸ ಚಿತ್ರಕ್ಕೆ ಸಿಕ್ತು ಚಾಲನೆ; ಯಶ್​ ಚಿತ್ರದಲ್ಲಿ ಕೆಲಸ ಮಾಡಿದವರೇ  ಈಗ ಡೈರೆಕ್ಟರ್​

Sreeja: ಚಿರಂಜೀವಿ ಕಿರಿಯ ಪುತ್ರಿಯ ವೈವಾಹಿಕ ಜೀವನದಲ್ಲಿ ಬಿರುಕು? ವದಂತಿಗೆ ಪುಷ್ಠಿ ನೀಡಿದ ಶ್ರೀಜಾ ನಡೆ

Published On - 1:09 pm, Tue, 18 January 22

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು