AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಅಖಾಡಕ್ಕೆ ಇಳಿದ ‘ಯುವರತ್ನ’ ಅಪ್ಪು.. ಡಬ್ಬಿಂಗ್ ಶುರು!

ಎಲ್ಲವೂ ಸರಿಯಾಗಿದ್ದಿದ್ರೆ, ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೆ ತಯಾರಿ ನಡೆಸುತ್ತಿತ್ತು. ಅಷ್ಟರಲ್ಲೇ ಕೊರೊನಾ ವೈರಸ್ ರಾಜ್ಯಕ್ಕೂ ಲಗ್ಗೆ ಇಟ್ಟಿದ್ದರಿಂದ ಚಿತ್ರೀಕರಣವನ್ನ ವಿಧಿಯಿಲ್ಲದೆ ನಿಲ್ಲಿಸಬೇಕಾಯ್ತು. ಆದ್ರೀಗ ಹೆಚ್ಚು-ಕಡಿಮೆ ಎರಡು ತಿಂಗಳ ಬಳಿಕ ಮತ್ತೆ ಯುವರತ್ನ ಚಿತ್ರತಂಡ ಅಖಾಡಕ್ಕೆ ಇಳಿದಿದೆ. ಇಂದಿನ ಅಪ್ಪು ಹಾಗೂ ಸಂತೋಷ್ ಆನಂದ್​ ರಾಮ್ ಕಾಂಬಿನೇಷನ್​ನ ಯುವರತ್ನ ಚಿತ್ರದ ಡಬ್ಬಿಂಗ್ ಶುರುವಾಗಿದೆ. ಈ ವಿಷಯವನ್ನ ಸ್ವತ: ಪುನೀತ್ ರಾಜ್​ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಂದ್ಹಾಗೆ ಈಗಾಗ್ಲೇ ಫಸ್ಟ್ ಡಬ್ಬಿಂಗ್ ಮುಗಿಸಿರೋ […]

ಮತ್ತೆ ಅಖಾಡಕ್ಕೆ ಇಳಿದ ‘ಯುವರತ್ನ’ ಅಪ್ಪು.. ಡಬ್ಬಿಂಗ್ ಶುರು!
ಸಾಧು ಶ್ರೀನಾಥ್​
|

Updated on:May 25, 2020 | 5:12 PM

Share

ಎಲ್ಲವೂ ಸರಿಯಾಗಿದ್ದಿದ್ರೆ, ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ಅಭಿನಯದ ಯುವರತ್ನ ಸಿನಿಮಾ ಬಿಡುಗಡೆಗೆ ತಯಾರಿ ನಡೆಸುತ್ತಿತ್ತು. ಅಷ್ಟರಲ್ಲೇ ಕೊರೊನಾ ವೈರಸ್ ರಾಜ್ಯಕ್ಕೂ ಲಗ್ಗೆ ಇಟ್ಟಿದ್ದರಿಂದ ಚಿತ್ರೀಕರಣವನ್ನ ವಿಧಿಯಿಲ್ಲದೆ ನಿಲ್ಲಿಸಬೇಕಾಯ್ತು. ಆದ್ರೀಗ ಹೆಚ್ಚು-ಕಡಿಮೆ ಎರಡು ತಿಂಗಳ ಬಳಿಕ ಮತ್ತೆ ಯುವರತ್ನ ಚಿತ್ರತಂಡ ಅಖಾಡಕ್ಕೆ ಇಳಿದಿದೆ.

ಇಂದಿನ ಅಪ್ಪು ಹಾಗೂ ಸಂತೋಷ್ ಆನಂದ್​ ರಾಮ್ ಕಾಂಬಿನೇಷನ್​ನ ಯುವರತ್ನ ಚಿತ್ರದ ಡಬ್ಬಿಂಗ್ ಶುರುವಾಗಿದೆ. ಈ ವಿಷಯವನ್ನ ಸ್ವತ: ಪುನೀತ್ ರಾಜ್​ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಂದ್ಹಾಗೆ ಈಗಾಗ್ಲೇ ಫಸ್ಟ್ ಡಬ್ಬಿಂಗ್ ಮುಗಿಸಿರೋ ಯುವರತ್ನ ಚಿತ್ರತಂಡ ಸೆಂಕೆಡ್ ಹಾಫ್ ಡಬ್ಬಿಂಗ್ ಅನ್ನ ಅರಂಭಿಸಿದೆ. ಈ ಸಂತಸದ ವಿಷಯವನ್ನ ನಿರ್ದೇಶಕ ಸಂತೋಷ್ ಆನಂದ್​ರಾಮ್ ಹಾಗೂ ಅಪ್ಪು ಇಬ್ಬರು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ರಾಜಕುಮಾರ ಬಳಿಕ ಅಪ್ಪು ಹಾಗೂ ಸಂತೋಷ್ ಆನಂದ್​ ರಾಮ್ ಕಾಂಬಿನೇಷನ್ ಸಿನಿಮಾ ಯುವರತ್ನ. ಹೀಗಾಗಿ ಸಹಜವಾಗೇ ಪವರ್ ಸ್ಟಾರ್ ಅಭಿಮಾನಿಗಳಲ್ಲಿ ಕುತೂಹಲ ದುಪ್ಪಟ್ಟಾಗಿದೆ. ಇದೇ ವೇಳೆ ಕೊರೊನಾದಿಂದ ಥಿಯೇಟರ್​ಗಳು ಬಾಗಿಲು ಮುಚ್ಚಿವೆ. ಹಾಗಾಗಿ ಓಟಿಟಿ ಪ್ಲಾಟ್​ಫಾರ್ಮ್ ನಲ್ಲಿ ಬಿಡುಗಡೆಯಾಗುತ್ತೆ ಅಂತ ಸುದ್ದಿ ಹಬ್ಬಿತ್ತು. ಆದ್ರೆ ಚಿತ್ರತಂಡ ಇನ್ನೂ ಆರು ತಿಂಗಳಾದ್ರೂ ಯುವರತ್ನವನ್ನ ಚಿತ್ರಮಂದಿರದಲ್ಲೇ ರಿಲೀಸ್ ಮಾಡ್ತೀವಿ ಅಂತ ಹೇಳೊ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಹೀಗಾಗಿ ಕೊರೊನಾ ಬಿಕ್ಕಟ್ಟು ಮುಗಿದ ಕೂಡ್ಲೇ ಯುವರತ್ನ ಥಿಯೇಟರ್​ಗೆ ಅಪ್ಪಳಿಸೋದು ಗ್ಯಾರಂಟಿ.

Published On - 5:08 pm, Mon, 25 May 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ