AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa 2021:​ ಯುವರತ್ನ ಸಿನಿಮಾದ ಊರಿಗೊಬ್ಬ ವಿಡಿಯೋ ಸಾಂಗ್​ ಬಿಡುಗಡೆಗೆ ಸಜ್ಜು, ಪುನೀತ್​​ ಧ್ವನಿಯಲ್ಲೇ ಮೂಡಿಬಂದ ಹಾಡು

Puneeth Rajkumar: ವಿಡಿಯೋ ಸಾಂಗ್​ ಬಿಡುಗಡೆ ಬಗ್ಗೆ ಚಿತ್ರದ ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಟ್ವೀಟ್​ ಮಾಡಿದ್ದು, ಕನ್ನಡ ಮತ್ತು ತೆಲುಗು ಎರಡೂ ಭಾಷೆಗಳಲ್ಲೂ ಬಿಡುಗಡೆಗೊಳಿಸುವುದಾಗಿ ಮಾಹಿತಿ ನೀಡಿದ್ದಾರೆ.

Yuvarathnaa 2021:​ ಯುವರತ್ನ ಸಿನಿಮಾದ ಊರಿಗೊಬ್ಬ ವಿಡಿಯೋ ಸಾಂಗ್​ ಬಿಡುಗಡೆಗೆ ಸಜ್ಜು, ಪುನೀತ್​​ ಧ್ವನಿಯಲ್ಲೇ ಮೂಡಿಬಂದ ಹಾಡು
ಯುವರತ್ನ
Skanda
|

Updated on:Feb 24, 2021 | 2:12 PM

Share

ಕೊರೊನಾ ಮೂಡಿಸಿದ ಬಿರುಗಾಳಿಯ ನಂತರ ಚಿತ್ರರಂಗದಲ್ಲಿ ಇದೀಗ ಹೊಸ ಗಾಳಿ ಆರಂಭವಾಗಿದೆ. ಸ್ಟಾರ್ ನಟರ ದೊಡ್ಡ ದೊಡ್ಡ ಸಿನಿಮಾಗಳು ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿ ಸರತಿಯಲ್ಲಿ ನಿಂತಿವೆ. ಒಂದೊಂದೇ ಸಿನಿಮಾದ ಟೀಸರ್​, ಟ್ರೇಲರ್​, ಹಾಡು ಬಿಡುಗಡೆಯಾಗುತ್ತಿದ್ದು ಸಿನಿ ರಸಿಕರಿಗೆ ರಸದೌತಣ ಬಡಿಸುತ್ತಿವೆ. ಈ ಸಾಲಿನಲ್ಲಿ ಪವರ್​ ಸ್ಟಾರ್​ ಪುನೀತ್ ರಾಜ್​ಕುಮಾರ್ (Puneeth Rajkumar)​ ಅಭಿನಯದ ಹೊಚ್ಚ ಹೊಸ ಸಿನಿಮಾ ಯುವರತ್ನ (Yuvarathnaa) ಸಹ ಇದ್ದು, ಪುನೀತ್​​ ಅಭಿಮಾನಿಗಳಂತೂ ಉತ್ಸುಕರಾಗಿದ್ದಾರೆ. ಈ ಉತ್ಸಾಹಕ್ಕೆ ಮತ್ತಷ್ಟು ಹುರುಪು ತುಂಬುವಂತೆ ಫೆಬ್ರವರಿ 25ರಂದು ಮಧ್ಯಾಹ್ನ 3.33ಕ್ಕೆ ಯುವರತ್ನ ಚಿತ್ರದ ಊರಿಗೊಬ್ಬ ರಾಜ (Oorigobba Raaja) ವಿಡಿಯೋ ಸಾಂಗ್​ ಬಿಡುಗಡೆಯಾಗುತ್ತಿದ್ದು ಚಿತ್ರಾಭಿಮಾನಿಗಳು ಕುತೂಹಲಭರಿತರಾಗಿ ಕಾಯುತ್ತಿದ್ದಾರೆ.

ವಿಡಿಯೋ ಸಾಂಗ್​ ಬಿಡುಗಡೆ ಬಗ್ಗೆ ಚಿತ್ರದ ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಟ್ವೀಟ್​ ಮಾಡಿದ್ದು, ಕನ್ನಡ ಮತ್ತು ತೆಲುಗು ಎರಡೂ ಭಾಷೆಗಳಲ್ಲೂ ಬಿಡುಗಡೆಗೊಳಿಸುವುದಾಗಿ ಮಾಹಿತಿ ನೀಡಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್​ ಅಡಿಯಲ್ಲಿ ನಿರ್ಮಾಣಗೊಂಡಿರುವ ಯುವರತ್ನ ಚಿತ್ರ ಈಗಾಗಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದ್ದು, ನಾಳೆ ಬಿಡುಗಡೆಯಾಗುತ್ತಿರುವ ಊರಿಗೊಬ್ಬ ರಾಜ ಹಾಡಿಗೆ ರಮ್ಯಾ ಬೆಹರಾ ಜೊತೆಗೆ ಸ್ವತಃ ಪುನೀತ್​ ರಾಜ್​ಕುಮಾರ್​ ಧ್ವನಿಯಾಗಿರುವುದು ಕಾಯುವಿಕೆಗೆ ಮತ್ತಷ್ಟು ಮೆರಗು ತುಂಬಿದೆ.

ಊರಿಗೊಬ್ಬ ರಾಜ ಹಾಡಿನ ಸಾಹಿತ್ಯವನ್ನು ಚಿತ್ರ ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಅವರೇ ರಚಿಸಿದ್ದು, ತಮನ್.ಎಸ್​ ಸಂಗೀತ ನೀಡಿದ್ದಾರೆ. ಕನ್ನಡದಲ್ಲಿ ಊರಿಗೊಬ್ಬ ರಾಜ ಮತ್ತು ತೆಲುಗಿನಲ್ಲಿ ಊರಿಕೊಕ್ಕ ರಾಜ ಹಾಡು ಬಿಡುಗಡೆಯಾಗುತ್ತಿದ್ದು, ಕನ್ನಡದ ಹಾಡು ಹೊಂಬಾಳೆ ಯೂಟ್ಯೂಬ್​ ಚಾನೆಲ್​ನಲ್ಲಿ ತೆರೆಕಾಣಲಿದೆ. ಯುವರತ್ನ ಸಿನಿಮಾದಲ್ಲಿ ಪುನೀತ್​ ಜೊತೆಗೆ ಧನಂಜಯ್​, ಸಯೇಶ ಸೈಗಲ್​, ವಸಿಷ್ಠ ಸಿಂಹ, ದಿಗಂತ್​, ಸೋನು ಗೌಡ, ರಂಗಾಯಣ ರಘು, ಸುಧಾರಾಣಿ, ಸಾಯಿಕುಮಾರ್​, ಅಚ್ಯುತ್​ ಕುಮಾರ್​, ಕುರಿ ಪ್ರತಾಪ್​, ರಾಧಿಕಾ ಶರತ್​ ಕುಮಾರ್​, ಪ್ರಕಾಶ್​ ಬೆಳವಾಡಿ, ಪ್ರಕಾಶ್​ ರಾಜ್​, ಗುರುದತ್​, ರವಿಶಂಕರ್​ ಗೌಡ, ರಾಜೇಶ್​ ನಟರಂಗ್​, ಅವಿನಾಶ್​, ನಾಗಭೂಷಣ್​, ತಾರಕ್​ ಪೊನ್ನಪ್ಪ, ಯಮುನಾ ಶ್ರೀನಿಧಿ, ಸುಧಿ, ಅರುಣ್​ ಗೌಡ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ.

YUVARATHNAA 2021

ಊರಿಗೊಬ್ಬ ರಾಜ

YUVARATHNAA 2021

ಊರಿಕೊಕ್ಕ ರಾಜ (ತೆಲುಗು ಪೋಸ್ಟರ್​)

ಇದನ್ನೂ ಓದಿ: ಪ್ರಿಯಾಂಕ ಉಪೇಂದ್ರ ನಟನೆಯ ‘1980 ಟೀಸರ್’ ರಿಲೀಸ್ ಬ್ರಾಹ್ಮಣ ಸಮುದಾಯಕ್ಕೆ ನೋವುಂಟುಮಾಡಿರುವ ದೃಶ್ಯವನ್ನು ನಾಳೆಯೊಳಗೆ ತೆಗೆಯುತ್ತೇವೆ: ಪೊಗರು ನಿರ್ದೇಶಕ ನಂದಕಿಶೋರ್​

Published On - 11:46 am, Wed, 24 February 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?