ಕೊರೊನಾ 2ನೇ ಅಲೆ: ಹೌಸ್​ಫುಲ್​ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್​? ಬಿಬಿಎಂಪಿ ಪ್ರಸ್ತಾವನೆಗೆ ಪುನೀತ್​ ವಿರೋಧ

ಪುನೀತ್​ ರಾಜ್​ಕುಮಾರ್​ ಅವರ ‘ಯುವರತ್ನ’ ಸಿನಿಮಾ ಏ.1ರಂದು ತೆರೆಗೆ ಬರಲು ಸಿದ್ಧವಾಗಿದೆ. ಈ ಸಂದರ್ಭಕ್ಕೆ ಹೌಸ್​ಫುಲ್​ ಪ್ರದರ್ಶನಕ್ಕೆ ಬ್ರೇಕ್​ ಹಾಕಿದರೆ ಚಿತ್ರತಂಡಕ್ಕೆ ಭಾರಿ ನಷ್ಟ ಆಗಲಿದೆ.

ಕೊರೊನಾ 2ನೇ ಅಲೆ: ಹೌಸ್​ಫುಲ್​ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್​? ಬಿಬಿಎಂಪಿ ಪ್ರಸ್ತಾವನೆಗೆ ಪುನೀತ್​ ವಿರೋಧ
ಪುನೀತ್​ ರಾಜ್​ಕುಮಾರ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 19, 2021 | 5:33 PM

ದೇಶಾದ್ಯಂತ ಕೊರೊನಾ ವೈರಸ್​ನ ಎರಡನೇ ಅಲೆ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್​ಡೌನ್​ ಆಗಬಹುದೇನೂ ಎಂಬ ಆತಂಕ ಮನೆ ಮಾಡಿದೆ. ಅದರಲ್ಲೂ ಚಿತ್ರರಂಗಕ್ಕೆ ಹೆಚ್ಚು ನಷ್ಟವಾಗುವ ಸಾಧ್ಯತೆ ಎದುರಾಗಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಚಿತ್ರಮಂದಿರಗಳಲ್ಲಿ ಹೌಸ್​ ಫುಲ್​ ಪ್ರದರ್ಶನಕ್ಕೆ ಬ್ರೇಕ್​ ಹಾಕಬೇಕು ಎಂದು ಬಿಬಿಎಂಪಿ ಆಲೋಚಿಸುತ್ತಿದೆ. ಇದನ್ನು ಕನ್ನಡ ಚಿತ್ರರಂಗ ವಿರೋಧಿಸುತ್ತಿದೆ.

ಲಾಕ್​ಡೌನ್​ ಸಡಿಲಿಕೆಗೂ ಮುನ್ನ ಚಿತ್ರಮಂದಿಗಳು ಸಂಪೂರ್ಣ ಬಂದ್​ ಆಗಿದ್ದವು. ಬಳಿಕ ಶೇ.50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಲಾಯಿತು. ಪೊಗರು ಚಿತ್ರದ ರಿಲೀಸ್​ ಸಂದರ್ಭದಲ್ಲಿ ಹೌಸ್​ಫುಲ್​ ಪ್ರದರ್ಶನಕ್ಕೆ ಅನುಮತಿ ಸಿಕ್ಕಿತು. ಆದರೆ ಈಗ ಕೊರೊನಾ ವೈರಸ್​ ಎರಡನೇ ಅಲೆ ಹಬ್ಬುತ್ತಿದೆ ಎಂಬ ಕಾರಣಕ್ಕೆ ಮತ್ತೆ ಚಿತ್ರಮಂದಿರಗಳಲ್ಲಿ ಶೇ.50ಕ್ಕಿಂತ ಹೆಚ್ಚು ಆಸನಗಳ ಭರ್ತಿಗೆ ಅವಕಾಶ ನೀಡಬಾರದು ಎಂಬ ಪ್ರಸ್ತಾವನೆ ಕೇಳಿಬಂದಿದೆ. ಆದರೆ ಇದರಿಂದ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಲಿದ್ದು, ಪುನೀತ್​ ರಾಜ್​ಕುಮಾರ್​ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರ ‘ಯುವರತ್ನ’ ಸಿನಿಮಾ ಏ.1ರಂದು ತೆರೆಗೆ ಬರಲು ಸಿದ್ಧವಾಗಿದೆ. ಈ ಸಂದರ್ಭದಲ್ಲಿ ಹೌಸ್​ಫುಲ್​ ಪ್ರದರ್ಶನಕ್ಕೆ ಬ್ರೇಕ್​ ಹಾಕಿದರೆ ಚಿತ್ರತಂಡಕ್ಕೆ ಭಾರಿ ನಷ್ಟ ಆಗಲಿದೆ. ಈ ಕುರಿತು ಪುನೀತ್ ಪ್ರತಿಕ್ರಿಯೆ ನೀಡಿದ್ದಾರೆ. ‘ದಯವಿಟ್ಟು 100 ಪರ್ಸೆಂಟ್​ಗೆ ಅವಕಾಶ ನೀಡಬೇಕು. ನಮ್ಮ ಇಂಡಸ್ಟ್ರೀ ಮಾತ್ರವಲ್ಲ, ಇಡೀ ಆರ್ಥಿಕತೆ ಈಗತಾನೇ ಚೇತರಿಸಿಕೊಳ್ಳುತ್ತಿದೆ’ ಎಂದು ಪುನೀತ್​ ಹೇಳಿದ್ದಾರೆ.

‘ನಮ್ಮ ಜೀವ, ಆರೋಗ್ಯ, ಕುಟುಂಬ ನಮಗೆ ಮುಖ್ಯ. ವ್ಯಾಪಾರ-ವ್ಯಾವಹಾರ ಎರಡನೆಯದ್ದು. ನನ್ನ ಪ್ರಕಾರ ಹೇಳಬೇಕೆಂದರೆ ಮದುವೆ, ಸಾರ್ವಜನಿಕ ಸಮಾರಂಭ, ಚುನಾವಣೆಗಳನ್ನು ಹಲವಾರು ತಿಂಗಳ ಹಿಂದೆಯೇ ಅವಾಯ್ಡ್​ ಮಾಡಬೇಕಿತ್ತು. ಥಿಯೇಟರ್​ಗೆ ಇದು ಬೇಕಾಗಿಲ್ಲ. ಮಾಸ್ಕ್​, ಸ್ಯಾನಿಟೈಸರ್​ ಬಳಸಬೇಕು. ಚಿತ್ರಮಂದಿರದ ಶೌಚಾಯಲ ಕ್ಲೀನ್​ ಆಗಿರಬೇಕು. ಅದು ತುಂಬ ಮುಖ್ಯ. ದಯವಿಟ್ಟು 100 ಪರ್ಸೆಂಟ್​ ಮಾಡಬೇಕು. ಚಿತ್ರಮಂದಿರದಲ್ಲಿ ಎಲ್ಲವೂ ಜಾಗ್ರತೆಯಿಂದ ನಡೆಯುತ್ತಿದೆ’ ಎಂದು ಪುನೀತ್ ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಪುನೀತ್​ ಸಿಂಪಲ್ ಬರ್ತ್​​ಡೇ; ಫೋಟೋ ಕೇಳಿದ ಅಭಿಮಾನಿಗಳಿಗೆ ಅಪ್ಪು ಕಂಡೀಷನ್

Feel the Power Promo: ಡ್ಯಾನ್ಸ್​ನಲ್ಲಿ ಪುನೀತ್​ಗೆ ಯಾರು ಸಾಟಿ? ಪ್ರೋಮೋ ಹಾಡಿನಲ್ಲೇ ಪವರ್​ ತೋರಿಸಿದ ಪವರ್​ ಸ್ಟಾರ್​!

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ