Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ತಾವು ನಂಬಿದ ದೇವರ ದರ್ಶನ ಪಡೆದ ಪುನೀತ್​ ರಾಜ್​ಕುಮಾರ್​! ಯಾವುದು ಆ ದೇವರು?

ಸದ್ಯ ಪುನೀತ್​ ರಾಜ್​ಕುಮಾರ್​ ಅವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಇದೇ ವೇಳೆ ಬಳ್ಳಾರಿಗೆ ಭೇಟಿ ನೀಡಿ ತಾವು ನಂಬಿದ ದೇವರ ದರ್ಶನವನ್ನು ಪಡೆದುಕೊಂಡಿದ್ದಾರೆ.

ಬಳ್ಳಾರಿಯಲ್ಲಿ ತಾವು ನಂಬಿದ ದೇವರ ದರ್ಶನ ಪಡೆದ ಪುನೀತ್​ ರಾಜ್​ಕುಮಾರ್​! ಯಾವುದು ಆ ದೇವರು?
ಪುನೀತ್​ ರಾಜ್​ಕುಮಾರ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Mar 22, 2021 | 3:44 PM

‘ಪವರ್ ಸ್ಟಾರ್’​ ಪುನೀತ್​ ರಾಜ್​ಕುಮಾರ್​ ನಟನೆಯ ‘ಯುವರತ್ನ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏ.1ರಂದು ಅದ್ದೂರಿಯಾಗಿ ಈ ಸಿನಿಮಾ ತೆರೆಗೆ ಬರಲಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲಿಯೂ ‘ಯುವರತ್ನ’ ತೆರೆಕಾಣಲಿದ್ದು, ಭರ್ಜರಿಯಾಗಿಯೇ ಪ್ರಚಾರ ಮಾಡಲಾಗುತ್ತಿದೆ. ಅದಕ್ಕಾಗಿ ಪುನೀತ್​ ರಾಜ್​ಕುಮಾರ್​ ಅವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ.

ಮಾ.21ರಿಂದ 23ರವರೆಗೆ ಮೊದಲ ಹಂತದ ರಾಜ್ಯ ಪ್ರವಾಸ ಮಾಡುತ್ತಿರುವ ಯುವರತ್ನ ಚಿತ್ರತಂಡ ಇಂದು (ಮಾ.22) ಬಳ್ಳಾರಿಗೆ ಭೇಟಿ ನೀಡಿತ್ತು. ಪುನೀತ್​ ರಾಜ್​ಕುಮಾರ್​ ಜೊತೆ ನಟ ಧನಂಜಯ, ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಕೂಡ ಸಾಥ್​ ನೀಡಿದ್ದರು. ಪುನೀತ್​ ಅವರನ್ನು ನೋಡಲು ಬಳ್ಳಾರಿ ಜನರು ಮುಗಿಬಿದ್ದಿದ್ದರು.

ತಮ್ಮನ್ನು ನೋಡಲು ಬಂದ ಸಾವಿರಾರು ಅಭಿಮಾನಿಗಳ ಎದುರಿನಲ್ಲಿ ಪುನೀತ್​ ಮಾತನಾಡಿದರು. ‘ಕನಕ ದುರ್ಗಮ್ಮ ದೇವಿ ದರ್ಶನ ಆಯ್ತು. ಆ ದೇವರ ದರ್ಶನ ನಡೆದ ಜಾಗದಲ್ಲಿ ಅಭಿಮಾನಿಗಳೇ ನಮ್ಮನೆ ದೇವ್ರು ಹಾಡು ಹೇಳಿದ್ದು ಕೂಡ ಆಯ್ತು. ದೇವರ ದರ್ಶನಕ್ಕೂ ಮುಂಚೆ ನಾವು ನಂಬಿರುವ ದೇವರ ದರ್ಶನ ಆಗಿಹೋಯ್ತು. ಈ ಪ್ರೀತಿ ವಿಶ್ವಾಸಕ್ಕೆ ನಾವು ಏನು ಮಾತನಾಡಿದರೂ ಕಮ್ಮಿ’ ಎನ್ನುವ ಮೂಲಕ ಅಭಿಮಾನಿಗಳೇ ತಾವು ನಂಬಿದ ದೇವರು ಎಂದು ಪುನೀತ್​ ಮತ್ತೊಮ್ಮೆ ಹೇಳಿದ್ದಾರೆ.

ಅಭಿಮಾನಿಗಳು ಹಾಕಿದ ಹೂವು, ಶಿಳ್ಳೆ, ಚಪ್ಪಾಳೆ, ಜೈಕಾರ ಕಂಡು ಪುನೀತ್​ ಫಿದಾ ಆಗಿದ್ದಾರೆ. ಬಳ್ಳಾರಿ ಜೊತೆ ತಮಗೆ ಇರುವ ಸಂಬಂಧವನ್ನು ಅವರು ನೆನಪಿಸಿಕೊಂಡರು. ‘ನನ್ನ ಅರಸು, ಪವರ್​ ಸಿನಿಮಾಗಳ ಹಾಡು ಇಲ್ಲೇ ಬಿಡುಗಡೆ ಆಗಿತ್ತು. ದೊಡ್ಮನೆ ಹುಡುಗ ಹಾಡು ಇಲ್ಲೇ ಶೂಟಿಂಗ್​ ಆಗಿತ್ತು. ಈಗ ಯುವರತ್ನಗೋಸ್ಕರ ಇಲ್ಲಿಗೆ ಬಂದಿದ್ದೇನೆ. ಯುವರತ್ನ ಎಂದರೆ ನಾನಲ್ಲ. ಪ್ರತಿಯೊಬ್ಬ ಯುವಕನೂ, ಇಲ್ಲಿರುವ ಎಲ್ಲರೂ ಯುವರತ್ನಗಳೇ’ ಎಂದು ಪುನೀತ್​ ಹೇಳಿದ್ದಾರೆ.

ನೆಚ್ಚಿನ ನಟನನ್ನು ನೋಡಲು ಸಾವಿರಾರು ಅಭಿಮಾನಿಗಳು ಒಟ್ಟಿಗೆ ಮುಗಿಬಿದ್ದಿದ್ದರಿಂದ ಕೆಲವು ಕಾಲ ನೂಕು ನುಗ್ಗಲು ಉಂಟಾಗಿತ್ತು. ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಚ್​ ಕೂಡ ಮಾಡಬೇಕಾಯಿತು. ಪುನೀತ್​ ಜೊತೆ ವೇದಿಕೆಯಲ್ಲಿ ಸಾಥ್​ ನೀಡಿದ ಡಾಲಿ ಧನಂಜಯ ಅವರು ‘ಯುವರತ್ನ’ ಸಿನಿಮಾದ ಡೈಲಾಗ್​ ಹೇಳಿ ಎಲ್ಲರನ್ನೂ ರಂಜಿಸಿದರು.

ಇದನ್ನೂ ಓದಿ: ನನ್ನನ್ನು ಪ್ರೀತಿಸಬೇಡಿ, ನನಗೆ ಮದ್ವೆ ಆಗಿದೆ; ಪುನೀತ್​ ರಾಜ್​ಕುಮಾರ್​ ಹೀಗೆ ಅಂದಿದ್ಯಾಕೆ?

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು