AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ ತಾವು ನಂಬಿದ ದೇವರ ದರ್ಶನ ಪಡೆದ ಪುನೀತ್​ ರಾಜ್​ಕುಮಾರ್​! ಯಾವುದು ಆ ದೇವರು?

ಸದ್ಯ ಪುನೀತ್​ ರಾಜ್​ಕುಮಾರ್​ ಅವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಇದೇ ವೇಳೆ ಬಳ್ಳಾರಿಗೆ ಭೇಟಿ ನೀಡಿ ತಾವು ನಂಬಿದ ದೇವರ ದರ್ಶನವನ್ನು ಪಡೆದುಕೊಂಡಿದ್ದಾರೆ.

ಬಳ್ಳಾರಿಯಲ್ಲಿ ತಾವು ನಂಬಿದ ದೇವರ ದರ್ಶನ ಪಡೆದ ಪುನೀತ್​ ರಾಜ್​ಕುಮಾರ್​! ಯಾವುದು ಆ ದೇವರು?
ಪುನೀತ್​ ರಾಜ್​ಕುಮಾರ್​
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Mar 22, 2021 | 3:44 PM

Share

‘ಪವರ್ ಸ್ಟಾರ್’​ ಪುನೀತ್​ ರಾಜ್​ಕುಮಾರ್​ ನಟನೆಯ ‘ಯುವರತ್ನ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏ.1ರಂದು ಅದ್ದೂರಿಯಾಗಿ ಈ ಸಿನಿಮಾ ತೆರೆಗೆ ಬರಲಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲಿಯೂ ‘ಯುವರತ್ನ’ ತೆರೆಕಾಣಲಿದ್ದು, ಭರ್ಜರಿಯಾಗಿಯೇ ಪ್ರಚಾರ ಮಾಡಲಾಗುತ್ತಿದೆ. ಅದಕ್ಕಾಗಿ ಪುನೀತ್​ ರಾಜ್​ಕುಮಾರ್​ ಅವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ.

ಮಾ.21ರಿಂದ 23ರವರೆಗೆ ಮೊದಲ ಹಂತದ ರಾಜ್ಯ ಪ್ರವಾಸ ಮಾಡುತ್ತಿರುವ ಯುವರತ್ನ ಚಿತ್ರತಂಡ ಇಂದು (ಮಾ.22) ಬಳ್ಳಾರಿಗೆ ಭೇಟಿ ನೀಡಿತ್ತು. ಪುನೀತ್​ ರಾಜ್​ಕುಮಾರ್​ ಜೊತೆ ನಟ ಧನಂಜಯ, ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಕೂಡ ಸಾಥ್​ ನೀಡಿದ್ದರು. ಪುನೀತ್​ ಅವರನ್ನು ನೋಡಲು ಬಳ್ಳಾರಿ ಜನರು ಮುಗಿಬಿದ್ದಿದ್ದರು.

ತಮ್ಮನ್ನು ನೋಡಲು ಬಂದ ಸಾವಿರಾರು ಅಭಿಮಾನಿಗಳ ಎದುರಿನಲ್ಲಿ ಪುನೀತ್​ ಮಾತನಾಡಿದರು. ‘ಕನಕ ದುರ್ಗಮ್ಮ ದೇವಿ ದರ್ಶನ ಆಯ್ತು. ಆ ದೇವರ ದರ್ಶನ ನಡೆದ ಜಾಗದಲ್ಲಿ ಅಭಿಮಾನಿಗಳೇ ನಮ್ಮನೆ ದೇವ್ರು ಹಾಡು ಹೇಳಿದ್ದು ಕೂಡ ಆಯ್ತು. ದೇವರ ದರ್ಶನಕ್ಕೂ ಮುಂಚೆ ನಾವು ನಂಬಿರುವ ದೇವರ ದರ್ಶನ ಆಗಿಹೋಯ್ತು. ಈ ಪ್ರೀತಿ ವಿಶ್ವಾಸಕ್ಕೆ ನಾವು ಏನು ಮಾತನಾಡಿದರೂ ಕಮ್ಮಿ’ ಎನ್ನುವ ಮೂಲಕ ಅಭಿಮಾನಿಗಳೇ ತಾವು ನಂಬಿದ ದೇವರು ಎಂದು ಪುನೀತ್​ ಮತ್ತೊಮ್ಮೆ ಹೇಳಿದ್ದಾರೆ.

ಅಭಿಮಾನಿಗಳು ಹಾಕಿದ ಹೂವು, ಶಿಳ್ಳೆ, ಚಪ್ಪಾಳೆ, ಜೈಕಾರ ಕಂಡು ಪುನೀತ್​ ಫಿದಾ ಆಗಿದ್ದಾರೆ. ಬಳ್ಳಾರಿ ಜೊತೆ ತಮಗೆ ಇರುವ ಸಂಬಂಧವನ್ನು ಅವರು ನೆನಪಿಸಿಕೊಂಡರು. ‘ನನ್ನ ಅರಸು, ಪವರ್​ ಸಿನಿಮಾಗಳ ಹಾಡು ಇಲ್ಲೇ ಬಿಡುಗಡೆ ಆಗಿತ್ತು. ದೊಡ್ಮನೆ ಹುಡುಗ ಹಾಡು ಇಲ್ಲೇ ಶೂಟಿಂಗ್​ ಆಗಿತ್ತು. ಈಗ ಯುವರತ್ನಗೋಸ್ಕರ ಇಲ್ಲಿಗೆ ಬಂದಿದ್ದೇನೆ. ಯುವರತ್ನ ಎಂದರೆ ನಾನಲ್ಲ. ಪ್ರತಿಯೊಬ್ಬ ಯುವಕನೂ, ಇಲ್ಲಿರುವ ಎಲ್ಲರೂ ಯುವರತ್ನಗಳೇ’ ಎಂದು ಪುನೀತ್​ ಹೇಳಿದ್ದಾರೆ.

ನೆಚ್ಚಿನ ನಟನನ್ನು ನೋಡಲು ಸಾವಿರಾರು ಅಭಿಮಾನಿಗಳು ಒಟ್ಟಿಗೆ ಮುಗಿಬಿದ್ದಿದ್ದರಿಂದ ಕೆಲವು ಕಾಲ ನೂಕು ನುಗ್ಗಲು ಉಂಟಾಗಿತ್ತು. ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಚ್​ ಕೂಡ ಮಾಡಬೇಕಾಯಿತು. ಪುನೀತ್​ ಜೊತೆ ವೇದಿಕೆಯಲ್ಲಿ ಸಾಥ್​ ನೀಡಿದ ಡಾಲಿ ಧನಂಜಯ ಅವರು ‘ಯುವರತ್ನ’ ಸಿನಿಮಾದ ಡೈಲಾಗ್​ ಹೇಳಿ ಎಲ್ಲರನ್ನೂ ರಂಜಿಸಿದರು.

ಇದನ್ನೂ ಓದಿ: ನನ್ನನ್ನು ಪ್ರೀತಿಸಬೇಡಿ, ನನಗೆ ಮದ್ವೆ ಆಗಿದೆ; ಪುನೀತ್​ ರಾಜ್​ಕುಮಾರ್​ ಹೀಗೆ ಅಂದಿದ್ಯಾಕೆ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ