AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa Collection: ಯುವರತ್ನ ಬಾಕ್ಸ್​ ಆಫೀಸ್​ ಗಳಿಕೆ ಎಷ್ಟು? ಇಲ್ಲಿದೆ ಮಾಹಿತಿ

ಯುವರತ್ನ ಸಿನಿಮಾ ಗುರುವಾರ ರಿಲೀಸ್​ ಆಗಿತ್ತು. ಶುಕ್ರವಾರ ಕೂಡ ಈ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡಿದೆಯಂತೆ. ಎಲ್ಲವೂ ಸರಿಯಿದ್ದಿದ್ದರೆ ಶನಿವಾರ ಹಾಗೂ ಭಾನುವಾರ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇತ್ತು.

Yuvarathnaa Collection: ಯುವರತ್ನ ಬಾಕ್ಸ್​ ಆಫೀಸ್​ ಗಳಿಕೆ ಎಷ್ಟು? ಇಲ್ಲಿದೆ ಮಾಹಿತಿ
ಪುನೀತ್​ ರಾಜ್​ಕುಮಾರ್​ - ಯುವರತ್ನ
ರಾಜೇಶ್ ದುಗ್ಗುಮನೆ
| Edited By: |

Updated on: Apr 03, 2021 | 5:24 PM

Share

ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ ‘ಯುವರತ್ನ’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನ ಮುಂಜಾನೆ 6 ಗಂಟೆಯಿಂದಲೇ ಯುವರತ್ನ ಪ್ರದರ್ಶನ ಕಂಡಿತ್ತು. ಪರಿಣಾಮ ಬಾಕ್ಸ್​ ಆಫೀಸ್​ನಲ್ಲಿ ಸಿನಿಮಾ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ. ಹಾಗಿದ್ದರೆ ಬಾಕ್ಸ್​ ಆಫೀಸ್​ನಲ್ಲಿ ಪುನೀತ್​ ಸಿನಿಮಾ ಗಳಿಕೆ ಮಾಡಿದ್ದೆಷ್ಟು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ಆಂಗ್ಲ ಮಾಧ್ಯಮವೊಂದು ಮಾಡಿದ ವರದಿ ಪ್ರಕಾರ ಯುವರತ್ನ ಸಿನಿಮಾ ಮೊದಲ ದಿನ 7-10 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆಯಂತೆ. ಪುನೀತ್​ ಹಿಂದಿನ ಸಿನಿಮಾ ನಟಸಾರ್ವಭೌಮ ಮೊದಲ ದಿನ 6 ಕೋಟಿ ಕಲೆಕ್ಷನ್ ಮಾಡಿತ್ತು. ಈ ಗಳಿಕೆಗೂ ಮೀರಿ ಯುವರತ್ನ ಕಲೆಕ್ಷನ್ ಮಾಡಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ರಿಲೀಸ್​ ಆದ ಪ್ರಮುಖ ಮೂರನೇ ಚಿತ್ರ ಇದಾಗಿದೆ. ಧ್ರುವ ಸರ್ಜಾ ನಟನೆಯ ಪೊಗರು ಚಿತ್ರ ಮೊದಲ ದಿನ 8.17 ಕೋಟಿ ಕಲೆಕ್ಷನ್​ ಮಾಡಿತ್ತು. ಇನ್ನು, 100 ಕೋಟಿ ಕಲೆಕ್ಷನ್​ ಮಾಡಿರುವ ರಾಬರ್ಟ್​ ಸಿನಿಮಾ ಮೊದಲ ದಿನ ಬರೋಬ್ಬರಿ 17.24 ಕೋಟಿ ಕಲೆಕ್ಷನ್​ ಮಾಡಿತ್ತು.

ಯುವರತ್ನ ಸಿನಿಮಾ ಗುರುವಾರ ರಿಲೀಸ್​ ಆಗಿತ್ತು. ಶುಕ್ರವಾರ ಕೂಡ ಈ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡಿದೆಯಂತೆ. ಎಲ್ಲವೂ ಸರಿಯಿದ್ದಿದ್ದರೆ ಶನಿವಾರ ಹಾಗೂ ಭಾನುವಾರ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇತ್ತು. ಆದರೆ, ಕೊರೊನಾ ಕಾರಣದಿಂದ ಸರ್ಕಾರ ಶೇ.50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಇದರಿಂದ ಯುವರತ್ನ ಕಲೆಕ್ಷನ್​ ಕುಸಿಯುವ ಸಾಧ್ಯತೆ ಇದೆ.

ಶೇ.50 ಆಸನ ಭರ್ತಿ ನಿಯಮ ಜಾರಿಯಲ್ಲಿರುವುದರಿಂದ ಚಿತ್ರಮಂದಿರದಲ್ಲಿ ಸೀಟ್​ ಬಿಟ್ಟು ಸೀಟ್​ ಕುಳಿತುಕೊಳ್ಳಬೇಕು. ಹೀಗಾದಾಗ, ಕುಟುಂಬದವರು ಚಿತ್ರಮಂದಿರಕ್ಕೆ ಹೋಗುವವರ ಸಂಖ್ಯೆ ಕುಸಿಯಲಿದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಧನಂಜಯ್​, ಪ್ರಕಾಶ್​ ರಾಜ್ ಮೊದಲಾದವರು​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

ಯುವರತ್ನ ವಿರುದ್ಧ ಸರ್ಕಾರದ ವ್ಯವಸ್ಥಿತ ಸಂಚು, ಪುನೀತ್ ಫ್ಯಾನ್ಸ್ ಆರೋಪ! ವಾಣಿಜ್ಯ ಮಂಡಳಿಗೆ ಮುತ್ತಿಗೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?