AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa Collection: ಯುವರತ್ನ ಬಾಕ್ಸ್​ ಆಫೀಸ್​ ಗಳಿಕೆ ಎಷ್ಟು? ಇಲ್ಲಿದೆ ಮಾಹಿತಿ

ಯುವರತ್ನ ಸಿನಿಮಾ ಗುರುವಾರ ರಿಲೀಸ್​ ಆಗಿತ್ತು. ಶುಕ್ರವಾರ ಕೂಡ ಈ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡಿದೆಯಂತೆ. ಎಲ್ಲವೂ ಸರಿಯಿದ್ದಿದ್ದರೆ ಶನಿವಾರ ಹಾಗೂ ಭಾನುವಾರ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇತ್ತು.

Yuvarathnaa Collection: ಯುವರತ್ನ ಬಾಕ್ಸ್​ ಆಫೀಸ್​ ಗಳಿಕೆ ಎಷ್ಟು? ಇಲ್ಲಿದೆ ಮಾಹಿತಿ
ಪುನೀತ್​ ರಾಜ್​ಕುಮಾರ್​ - ಯುವರತ್ನ
ರಾಜೇಶ್ ದುಗ್ಗುಮನೆ
| Edited By: |

Updated on: Apr 03, 2021 | 5:24 PM

Share

ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ ‘ಯುವರತ್ನ’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನ ಮುಂಜಾನೆ 6 ಗಂಟೆಯಿಂದಲೇ ಯುವರತ್ನ ಪ್ರದರ್ಶನ ಕಂಡಿತ್ತು. ಪರಿಣಾಮ ಬಾಕ್ಸ್​ ಆಫೀಸ್​ನಲ್ಲಿ ಸಿನಿಮಾ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ. ಹಾಗಿದ್ದರೆ ಬಾಕ್ಸ್​ ಆಫೀಸ್​ನಲ್ಲಿ ಪುನೀತ್​ ಸಿನಿಮಾ ಗಳಿಕೆ ಮಾಡಿದ್ದೆಷ್ಟು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ಆಂಗ್ಲ ಮಾಧ್ಯಮವೊಂದು ಮಾಡಿದ ವರದಿ ಪ್ರಕಾರ ಯುವರತ್ನ ಸಿನಿಮಾ ಮೊದಲ ದಿನ 7-10 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆಯಂತೆ. ಪುನೀತ್​ ಹಿಂದಿನ ಸಿನಿಮಾ ನಟಸಾರ್ವಭೌಮ ಮೊದಲ ದಿನ 6 ಕೋಟಿ ಕಲೆಕ್ಷನ್ ಮಾಡಿತ್ತು. ಈ ಗಳಿಕೆಗೂ ಮೀರಿ ಯುವರತ್ನ ಕಲೆಕ್ಷನ್ ಮಾಡಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ರಿಲೀಸ್​ ಆದ ಪ್ರಮುಖ ಮೂರನೇ ಚಿತ್ರ ಇದಾಗಿದೆ. ಧ್ರುವ ಸರ್ಜಾ ನಟನೆಯ ಪೊಗರು ಚಿತ್ರ ಮೊದಲ ದಿನ 8.17 ಕೋಟಿ ಕಲೆಕ್ಷನ್​ ಮಾಡಿತ್ತು. ಇನ್ನು, 100 ಕೋಟಿ ಕಲೆಕ್ಷನ್​ ಮಾಡಿರುವ ರಾಬರ್ಟ್​ ಸಿನಿಮಾ ಮೊದಲ ದಿನ ಬರೋಬ್ಬರಿ 17.24 ಕೋಟಿ ಕಲೆಕ್ಷನ್​ ಮಾಡಿತ್ತು.

ಯುವರತ್ನ ಸಿನಿಮಾ ಗುರುವಾರ ರಿಲೀಸ್​ ಆಗಿತ್ತು. ಶುಕ್ರವಾರ ಕೂಡ ಈ ಸಿನಿಮಾ ಒಳ್ಳೆಯ ಕಲೆಕ್ಷನ್​ ಮಾಡಿದೆಯಂತೆ. ಎಲ್ಲವೂ ಸರಿಯಿದ್ದಿದ್ದರೆ ಶನಿವಾರ ಹಾಗೂ ಭಾನುವಾರ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇತ್ತು. ಆದರೆ, ಕೊರೊನಾ ಕಾರಣದಿಂದ ಸರ್ಕಾರ ಶೇ.50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಇದರಿಂದ ಯುವರತ್ನ ಕಲೆಕ್ಷನ್​ ಕುಸಿಯುವ ಸಾಧ್ಯತೆ ಇದೆ.

ಶೇ.50 ಆಸನ ಭರ್ತಿ ನಿಯಮ ಜಾರಿಯಲ್ಲಿರುವುದರಿಂದ ಚಿತ್ರಮಂದಿರದಲ್ಲಿ ಸೀಟ್​ ಬಿಟ್ಟು ಸೀಟ್​ ಕುಳಿತುಕೊಳ್ಳಬೇಕು. ಹೀಗಾದಾಗ, ಕುಟುಂಬದವರು ಚಿತ್ರಮಂದಿರಕ್ಕೆ ಹೋಗುವವರ ಸಂಖ್ಯೆ ಕುಸಿಯಲಿದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಧನಂಜಯ್​, ಪ್ರಕಾಶ್​ ರಾಜ್ ಮೊದಲಾದವರು​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

ಯುವರತ್ನ ವಿರುದ್ಧ ಸರ್ಕಾರದ ವ್ಯವಸ್ಥಿತ ಸಂಚು, ಪುನೀತ್ ಫ್ಯಾನ್ಸ್ ಆರೋಪ! ವಾಣಿಜ್ಯ ಮಂಡಳಿಗೆ ಮುತ್ತಿಗೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?