AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

23 ವರ್ಷದ ಯುವರತ್ನ ನಾಯಕಿ ಸಾಯೇಶಾ ಪತಿ ತಮಿಳಿನ ಸ್ಟಾರ್​ ಹೀರೋ; ಇಲ್ಲಿದೆ ಇವರ ಲವ್​ ಸ್ಟೋರಿ

ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ.

23 ವರ್ಷದ ಯುವರತ್ನ ನಾಯಕಿ ಸಾಯೇಶಾ ಪತಿ ತಮಿಳಿನ ಸ್ಟಾರ್​ ಹೀರೋ; ಇಲ್ಲಿದೆ ಇವರ ಲವ್​ ಸ್ಟೋರಿ
ಸಾಯೇಶಾ ಸೈಗಲ್​
ರಾಜೇಶ್ ದುಗ್ಗುಮನೆ
|

Updated on: Apr 09, 2021 | 8:42 PM

Share

ತೆಲುಗು ಹಾಗೂ ತಮಿಳಿನಲ್ಲಿ ಮಿಂಚಿ ನಂತರ ಯುವರತ್ನ ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ಗೆ ಕಾಲಿಟ್ಟವರು ನಟಿ ಸಾಯೇಶಾ ಸೈಗಲ್​. ಯುವರತ್ನದಲ್ಲಿ ಸಿಕ್ಕ ಅವಕಾಶವನ್ನು ಸಾಯೇಶಾ ಸರಿಯಾಗಿ ಬಳಸಿಕೊಂಡಿದ್ದರು. ಸಾಯೇಶಾಗೆ ಮದುವೆ ಆಗಿದೆ ಅನ್ನೋ ವಿಚಾರ ಅನೇಕರಿಗೆ ಗೊತ್ತಿಲ್ಲ. ಅದರಲ್ಲೂ ಇವರದ್ದು ಲವ್​ ಮ್ಯಾರೇಜ್​ ಅನ್ನೋದು ವಿಶೇಷ. ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ. ಹೀಗಾಗಿ, ಇವರಿಗೆ ಸಹಜವಾಗಿಯೇ ನಟನೆ ಬಗ್ಗೆ ಆಸಕ್ತಿ ಹುಟ್ಟಿಕೊಂಡಿತ್ತು.

2015ರಲ್ಲಿ ತೆರೆಗೆ ಬಂದ ತೆಲುಗಿನ ‘ಅಖಿಲ್​’ ಸಿನಿಮಾ ಮೂಲಕ ಸಾಯೆಶಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ನಂತರ ಅಜಯ್​ ದೇವಗನ್​ ನಟನೆಯ ಶಿವಾಯ್​ ಸಿನಿಮಾದಲ್ಲಿ ಬಣ್ಣ ಹಚ್ಚಲು ಅವಕಾಶ ಗಿಟ್ಟಿಸಿಕೊಂಡರು. ಈ ಮೂಲಕ ಬಾಲಿವುಡ್​ನಲ್ಲೂ ಅವರು ಖಾತೆ ತೆರೆದರು. ನಂತರ ಸಾಲು ಸಾಲು ತಮಿಳು ಸಿನಿಮಾಗಳಲ್ಲಿ ಸಾಯೇಶಾ ಬಣ್ಣ ಹಚ್ಚಿದ್ದರು. 2018ರಲ್ಲಿ ತೆರೆಗೆ ಬಂದ ಗಜನಿಕಾಂತ್​ ಸಿನಿಮಾದಲ್ಲಿ ತಮಿಳಿನ ಸ್ಟಾರ್​ ಹೀರೋ ಆರ್ಯಗೆ ಜೋಡಿಯಾಗಿ ಸಾಯೇಶಾ ಕಾಣಿಸಿಕೊಂಡಿದ್ದರು. ನಂತರ ಕಾಪನ್​, ಟೆಡ್ಡಿ ಸಿನಿಮಾಗಳಲ್ಲೂ ಇಬ್ಬರೂ ಒಟ್ಟಾಗಿ ನಟಿಸಿದ್ದರು.

ಸಾಲು ಸಾಲು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ ಇವರ ಮಧ್ಯೆ ಸೆಟ್​ನಲ್ಲೇ ಪ್ರೀತಿ ಮೂಡಿತು. ಇವರು ಕದ್ದುಮುಚ್ಚಿ ಓಡಾಡುತ್ತಿರುವ ಸುದ್ದಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ನಂತರ 2019ರ ಮಾರ್ಚ್​​ 10ರಂದು ಇಬ್ಬರೂ ಮದುವೆ ಆಗಿ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡಿದರು. ಈ ಮೂಲಕ 21ನೇ ವಯಸ್ಸಿಗೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು.

2019ರಲ್ಲಿ ತೆರೆಗೆ ಬಂದ ಟೆಡ್ಡಿ ಸಿನಿಮಾ ನಂತರ ತೆರೆಕಂಡಿದ್ದು ಯುವರತ್ನ ಚಿತ್ರ. ಈ ಸಿನಿಮಾದಲ್ಲಿ ಕೆಲವೇ ಕೆಲವು ದೃಶ್ಯಗಳಿಗೆ ಹಾಗೂ ಹಾಡುಗಳಿಗೆ ಮಾತ್ರ ಸಾಯೆಶಾ ಸೀಮಿತವಾದರು. ಆದಾಗ್ಯೂ, ಸಿಕ್ಕ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದರು. ಸದ್ಯ, ಸಾಯೇಶಾ ಕೈಯಲ್ಲಿ ಯಾವುದೇ ಸಿನಿಮಾಗಳಿಲ್ಲ. ಕನ್ನಡದಿಂದ ಅವರಿಗೆ ಬೇರೆ ಯಾವುದಾದರೂ ಆಫರ್​ ಬರಬಹುದೇ ಎಂಬುದು ಸದ್ಯದ ಕುತೂಹಲ.

ಇದನ್ನೂ ಓದಿ: Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ 

 

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ