AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

23 ವರ್ಷದ ಯುವರತ್ನ ನಾಯಕಿ ಸಾಯೇಶಾ ಪತಿ ತಮಿಳಿನ ಸ್ಟಾರ್​ ಹೀರೋ; ಇಲ್ಲಿದೆ ಇವರ ಲವ್​ ಸ್ಟೋರಿ

ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ.

23 ವರ್ಷದ ಯುವರತ್ನ ನಾಯಕಿ ಸಾಯೇಶಾ ಪತಿ ತಮಿಳಿನ ಸ್ಟಾರ್​ ಹೀರೋ; ಇಲ್ಲಿದೆ ಇವರ ಲವ್​ ಸ್ಟೋರಿ
ಸಾಯೇಶಾ ಸೈಗಲ್​
ರಾಜೇಶ್ ದುಗ್ಗುಮನೆ
|

Updated on: Apr 09, 2021 | 8:42 PM

Share

ತೆಲುಗು ಹಾಗೂ ತಮಿಳಿನಲ್ಲಿ ಮಿಂಚಿ ನಂತರ ಯುವರತ್ನ ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ಗೆ ಕಾಲಿಟ್ಟವರು ನಟಿ ಸಾಯೇಶಾ ಸೈಗಲ್​. ಯುವರತ್ನದಲ್ಲಿ ಸಿಕ್ಕ ಅವಕಾಶವನ್ನು ಸಾಯೇಶಾ ಸರಿಯಾಗಿ ಬಳಸಿಕೊಂಡಿದ್ದರು. ಸಾಯೇಶಾಗೆ ಮದುವೆ ಆಗಿದೆ ಅನ್ನೋ ವಿಚಾರ ಅನೇಕರಿಗೆ ಗೊತ್ತಿಲ್ಲ. ಅದರಲ್ಲೂ ಇವರದ್ದು ಲವ್​ ಮ್ಯಾರೇಜ್​ ಅನ್ನೋದು ವಿಶೇಷ. ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ. ಹೀಗಾಗಿ, ಇವರಿಗೆ ಸಹಜವಾಗಿಯೇ ನಟನೆ ಬಗ್ಗೆ ಆಸಕ್ತಿ ಹುಟ್ಟಿಕೊಂಡಿತ್ತು.

2015ರಲ್ಲಿ ತೆರೆಗೆ ಬಂದ ತೆಲುಗಿನ ‘ಅಖಿಲ್​’ ಸಿನಿಮಾ ಮೂಲಕ ಸಾಯೆಶಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ನಂತರ ಅಜಯ್​ ದೇವಗನ್​ ನಟನೆಯ ಶಿವಾಯ್​ ಸಿನಿಮಾದಲ್ಲಿ ಬಣ್ಣ ಹಚ್ಚಲು ಅವಕಾಶ ಗಿಟ್ಟಿಸಿಕೊಂಡರು. ಈ ಮೂಲಕ ಬಾಲಿವುಡ್​ನಲ್ಲೂ ಅವರು ಖಾತೆ ತೆರೆದರು. ನಂತರ ಸಾಲು ಸಾಲು ತಮಿಳು ಸಿನಿಮಾಗಳಲ್ಲಿ ಸಾಯೇಶಾ ಬಣ್ಣ ಹಚ್ಚಿದ್ದರು. 2018ರಲ್ಲಿ ತೆರೆಗೆ ಬಂದ ಗಜನಿಕಾಂತ್​ ಸಿನಿಮಾದಲ್ಲಿ ತಮಿಳಿನ ಸ್ಟಾರ್​ ಹೀರೋ ಆರ್ಯಗೆ ಜೋಡಿಯಾಗಿ ಸಾಯೇಶಾ ಕಾಣಿಸಿಕೊಂಡಿದ್ದರು. ನಂತರ ಕಾಪನ್​, ಟೆಡ್ಡಿ ಸಿನಿಮಾಗಳಲ್ಲೂ ಇಬ್ಬರೂ ಒಟ್ಟಾಗಿ ನಟಿಸಿದ್ದರು.

ಸಾಲು ಸಾಲು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ ಇವರ ಮಧ್ಯೆ ಸೆಟ್​ನಲ್ಲೇ ಪ್ರೀತಿ ಮೂಡಿತು. ಇವರು ಕದ್ದುಮುಚ್ಚಿ ಓಡಾಡುತ್ತಿರುವ ಸುದ್ದಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ನಂತರ 2019ರ ಮಾರ್ಚ್​​ 10ರಂದು ಇಬ್ಬರೂ ಮದುವೆ ಆಗಿ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡಿದರು. ಈ ಮೂಲಕ 21ನೇ ವಯಸ್ಸಿಗೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು.

2019ರಲ್ಲಿ ತೆರೆಗೆ ಬಂದ ಟೆಡ್ಡಿ ಸಿನಿಮಾ ನಂತರ ತೆರೆಕಂಡಿದ್ದು ಯುವರತ್ನ ಚಿತ್ರ. ಈ ಸಿನಿಮಾದಲ್ಲಿ ಕೆಲವೇ ಕೆಲವು ದೃಶ್ಯಗಳಿಗೆ ಹಾಗೂ ಹಾಡುಗಳಿಗೆ ಮಾತ್ರ ಸಾಯೆಶಾ ಸೀಮಿತವಾದರು. ಆದಾಗ್ಯೂ, ಸಿಕ್ಕ ಪಾತ್ರವನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದರು. ಸದ್ಯ, ಸಾಯೇಶಾ ಕೈಯಲ್ಲಿ ಯಾವುದೇ ಸಿನಿಮಾಗಳಿಲ್ಲ. ಕನ್ನಡದಿಂದ ಅವರಿಗೆ ಬೇರೆ ಯಾವುದಾದರೂ ಆಫರ್​ ಬರಬಹುದೇ ಎಂಬುದು ಸದ್ಯದ ಕುತೂಹಲ.

ಇದನ್ನೂ ಓದಿ: Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ 

 

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ