AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿಗೆ ಮಾಲೆ ಹಾಕಿ, ಆರತಿ ಎತ್ತಿ ‘ಯುವರತ್ನ’ನನ್ನು​ ಸ್ವಾಗತಿಸಿದ ಕಿರುತೆರೆ ವೀಕ್ಷಕರು; ಪುನೀತ್​ ಮೇಲಿನ ಅಭಿಮಾನಕ್ಕೆ ಇಲ್ಲ ಮಿತಿ

ಪುನೀತ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಅವರನ್ನು ಆರಾಧಿಸುವ ಸಾಕಷ್ಟು ಮಂದಿ ಇದ್ದಾರೆ. ಅವರ ಸಿನಿಮಾ ರಿಲೀಸ್​ ಆಗುತ್ತಿದೆ ಎಂದರೆ ಅಭಿಮಾನಿಗಳು ಸಂಭ್ರಮಿಸುತ್ತಿದ್ದರು.

ಟಿವಿಗೆ ಮಾಲೆ ಹಾಕಿ, ಆರತಿ ಎತ್ತಿ ‘ಯುವರತ್ನ’ನನ್ನು​ ಸ್ವಾಗತಿಸಿದ ಕಿರುತೆರೆ ವೀಕ್ಷಕರು; ಪುನೀತ್​ ಮೇಲಿನ ಅಭಿಮಾನಕ್ಕೆ ಇಲ್ಲ ಮಿತಿ
ಪುನೀತ್​ ರಾಜ್​ಕುಮಾರ್​ಗೆ ಸ್ವಾಗತ ಕೋರಿದ ಪರಿ
TV9 Web
| Edited By: |

Updated on: Jan 16, 2022 | 6:11 PM

Share

ಪುನೀತ್​ ರಾಜ್​ಕುಮಾರ್​ ನಟನೆಯ ‘ಯುವರತ್ನ’ ಸಿನಿಮಾ ಕಳೆದ ವರ್ಷ ಏಪ್ರಿಲ್​ ತಿಂಗಳಲ್ಲಿ ತೆರೆಕಂಡಿತ್ತು. ಅವರು ಬದುಕಿದ್ದಾಗ ತೆರೆಕಂಡ ಕೊನೆಯ ಚಿತ್ರ ಇದು. ಈಗ ಅವರ ನಟನೆಯ ‘ಜೇಮ್ಸ್​’, ಅತಿಥಿ ಪಾತ್ರ ಮಾಡಿರುವ ‘ಲಕ್ಕಿ ಮ್ಯಾನ್​’ ಸಿನಿಮಾಗಳು ರಿಲೀಸ್​ ಆಗಬೇಕಿವೆ. ಆದರೆ, ಅಭಿಮಾನಿಗಳ ಜತೆ ಕುಳಿತು ಸಿನಿಮಾ ನೋಡೋಕೆ ಅವರಿಲ್ಲ. ಈಗ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 15ರಂದು ಉದಯ ಟಿವಿಯಲ್ಲಿ ‘ಯುವರತ್ನ’ ಸಿನಿಮಾ ಪ್ರಸಾರವಾಗಿದೆ. ಈ ಚಿತ್ರವನ್ನು ಅಭಿಮಾನಿಗಳು ಸ್ವಾಗತ ಮಾಡಿಕೊಂಡ ರೀತಿ ಕಣ್ತುಂಬಿ ಬರುವಂತಿತ್ತು. ಈ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿವೆ.

ಪುನೀತ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಅವರನ್ನು ಆರಾಧಿಸುವ ಸಾಕಷ್ಟು ಮಂದಿ ಇದ್ದಾರೆ. ಅವರ ಸಿನಿಮಾ ರಿಲೀಸ್​ ಆಗುತ್ತಿದೆ ಎಂದರೆ ಅಭಿಮಾನಿಗಳು ಸಂಭ್ರಮಿಸುತ್ತಿದ್ದರು. ಅವರ ಕಟೌಟ್​ಗೆ ಮಾಲೆ ಹಾಕಿ, ಹಾಲಿನ ಅಭಿಷೇಕ ಮಾಡುತ್ತಿದ್ದರು. ‘ಯುವರತ್ನ’ ಸಿನಿಮಾವನ್ನು ಕಿರುತೆರೆ ಪ್ರೇಕ್ಷಕರು ಹೀಗೆಯೇ ಸ್ವಾಗತಿಸಿದ್ದಾರೆ.

‘ಯುವರತ್ನ’ ಸಿನಿಮಾ ಪ್ರಸಾರವಾಗುತ್ತಿದ್ದಂತೆ ಅವರ ಅಭಿಮಾನಿಗಳು ಟಿವಿಗೆ ಹಾರ ಹಾಕಿ ಪೂಜೆ ಮಾಡಿದ್ದಾರೆ. ಈ ಮೂಲಕ ಪುನೀತ್​ ಸತ್ತಿಲ್ಲ ಎನ್ನುವ ಭಾವನೆಯನ್ನು ಮನದಲ್ಲಿ ಇಟ್ಟುಕೊಂಡಿದ್ದಾರೆ. ಈ ರೀತಿ ಮಾಡಿರುವುದು ಕೇವಲ ಒಬ್ಬಿಬ್ಬರಲ್ಲ. ಅನೇಕರು ಇದೇ ರೀತಿ ‘ಯುವರತ್ನ’ನನ್ನು​ ಸ್ವಾಗತಿಸಿದ್ದಾರೆ. ಸದ್ಯ, ವಿಡಿಯೋ ವೈರಲ್​ ಆಗುತ್ತಿದೆ. ಇದು ಪುನೀತ್​ ಮೇಲಿನ ಅಭಿಮಾನಕ್ಕೆ ಸಾಕ್ಷಿ ಆಗಿದೆ.

‘ಯುವರತ್ನ’ ಚಿತ್ರಕ್ಕೆ ಸಂತೋಷ್​ ಆನಂದ್​ರಾಮ್​ ನಿರ್ದೇಶನ ಮಾಡಿದ್ದು, ಸಾಯೆಶಾ ಸೈಗಲ್ ನಾಯಕಿಯಾಗಿ ನಟಿಸಿದ್ದಾರೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ‘ಯುವರತ್ನ’ ಸಿನಿಮಾ ನಿರ್ಮಾಣ ಆಗಿದೆ. 2021ರ ಏಪ್ರಿಲ್​ 1ರಂದು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಆಗಿತ್ತು. ಆ ಸಂದರ್ಭದಲ್ಲಿ ಕೊರೊನಾ 2ನೇ ಅಲೆಯ ಹಾವಳಿ ಇದ್ದಿದ್ದರಿಂದ ಚಿತ್ರಮಂದಿರದಲ್ಲಿ ಶೇ.50 ಆಸನ ಮಿತಿ ನಿಯಮವನ್ನು ಜಾರಿ ಮಾಡಲಾಯಿತು. ಇದರಿಂದ ಚಿತ್ರದ ಕಲೆಕ್ಷನ್​ಗೆ ಹೊಡೆತಬಿದ್ದಿತ್ತು. ಅಲ್ಲದೇ ಬಹುಪಾಲು ಪ್ರೇಕ್ಷಕರಿಗೆ ಈ ಚಿತ್ರವನ್ನು ನೋಡಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ಪುನೀತ್ ಯುವರತ್ನ, ಶಿವರಾಂ ಭಕ್ತಿರತ್ನ; ತಿಂಗಳಲ್ಲಿ ಎರಡು ರತ್ನಗಳನ್ನು ಕಳೆದುಕೊಂಡಿದ್ದೇವೆ: ನಿರ್ದೇಶಕ ಭಗವಾನ್ ಕಂಬನಿ

ಉದಯ ಟಿವಿಯಲ್ಲಿ ಪ್ರಸಾರ ಆಗಲಿದೆ ‘ಯುವರತ್ನ’ ಚಿತ್ರ; ದಿನಾಂಕ, ಸಮಯದ ಬಗ್ಗೆ ಇಲ್ಲಿದೆ ವಿವರ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ