AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿಗೆ ಮಾಲೆ ಹಾಕಿ, ಆರತಿ ಎತ್ತಿ ‘ಯುವರತ್ನ’ನನ್ನು​ ಸ್ವಾಗತಿಸಿದ ಕಿರುತೆರೆ ವೀಕ್ಷಕರು; ಪುನೀತ್​ ಮೇಲಿನ ಅಭಿಮಾನಕ್ಕೆ ಇಲ್ಲ ಮಿತಿ

ಪುನೀತ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಅವರನ್ನು ಆರಾಧಿಸುವ ಸಾಕಷ್ಟು ಮಂದಿ ಇದ್ದಾರೆ. ಅವರ ಸಿನಿಮಾ ರಿಲೀಸ್​ ಆಗುತ್ತಿದೆ ಎಂದರೆ ಅಭಿಮಾನಿಗಳು ಸಂಭ್ರಮಿಸುತ್ತಿದ್ದರು.

ಟಿವಿಗೆ ಮಾಲೆ ಹಾಕಿ, ಆರತಿ ಎತ್ತಿ ‘ಯುವರತ್ನ’ನನ್ನು​ ಸ್ವಾಗತಿಸಿದ ಕಿರುತೆರೆ ವೀಕ್ಷಕರು; ಪುನೀತ್​ ಮೇಲಿನ ಅಭಿಮಾನಕ್ಕೆ ಇಲ್ಲ ಮಿತಿ
ಪುನೀತ್​ ರಾಜ್​ಕುಮಾರ್​ಗೆ ಸ್ವಾಗತ ಕೋರಿದ ಪರಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 16, 2022 | 6:11 PM

Share

ಪುನೀತ್​ ರಾಜ್​ಕುಮಾರ್​ ನಟನೆಯ ‘ಯುವರತ್ನ’ ಸಿನಿಮಾ ಕಳೆದ ವರ್ಷ ಏಪ್ರಿಲ್​ ತಿಂಗಳಲ್ಲಿ ತೆರೆಕಂಡಿತ್ತು. ಅವರು ಬದುಕಿದ್ದಾಗ ತೆರೆಕಂಡ ಕೊನೆಯ ಚಿತ್ರ ಇದು. ಈಗ ಅವರ ನಟನೆಯ ‘ಜೇಮ್ಸ್​’, ಅತಿಥಿ ಪಾತ್ರ ಮಾಡಿರುವ ‘ಲಕ್ಕಿ ಮ್ಯಾನ್​’ ಸಿನಿಮಾಗಳು ರಿಲೀಸ್​ ಆಗಬೇಕಿವೆ. ಆದರೆ, ಅಭಿಮಾನಿಗಳ ಜತೆ ಕುಳಿತು ಸಿನಿಮಾ ನೋಡೋಕೆ ಅವರಿಲ್ಲ. ಈಗ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 15ರಂದು ಉದಯ ಟಿವಿಯಲ್ಲಿ ‘ಯುವರತ್ನ’ ಸಿನಿಮಾ ಪ್ರಸಾರವಾಗಿದೆ. ಈ ಚಿತ್ರವನ್ನು ಅಭಿಮಾನಿಗಳು ಸ್ವಾಗತ ಮಾಡಿಕೊಂಡ ರೀತಿ ಕಣ್ತುಂಬಿ ಬರುವಂತಿತ್ತು. ಈ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿವೆ.

ಪುನೀತ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಅವರನ್ನು ಆರಾಧಿಸುವ ಸಾಕಷ್ಟು ಮಂದಿ ಇದ್ದಾರೆ. ಅವರ ಸಿನಿಮಾ ರಿಲೀಸ್​ ಆಗುತ್ತಿದೆ ಎಂದರೆ ಅಭಿಮಾನಿಗಳು ಸಂಭ್ರಮಿಸುತ್ತಿದ್ದರು. ಅವರ ಕಟೌಟ್​ಗೆ ಮಾಲೆ ಹಾಕಿ, ಹಾಲಿನ ಅಭಿಷೇಕ ಮಾಡುತ್ತಿದ್ದರು. ‘ಯುವರತ್ನ’ ಸಿನಿಮಾವನ್ನು ಕಿರುತೆರೆ ಪ್ರೇಕ್ಷಕರು ಹೀಗೆಯೇ ಸ್ವಾಗತಿಸಿದ್ದಾರೆ.

‘ಯುವರತ್ನ’ ಸಿನಿಮಾ ಪ್ರಸಾರವಾಗುತ್ತಿದ್ದಂತೆ ಅವರ ಅಭಿಮಾನಿಗಳು ಟಿವಿಗೆ ಹಾರ ಹಾಕಿ ಪೂಜೆ ಮಾಡಿದ್ದಾರೆ. ಈ ಮೂಲಕ ಪುನೀತ್​ ಸತ್ತಿಲ್ಲ ಎನ್ನುವ ಭಾವನೆಯನ್ನು ಮನದಲ್ಲಿ ಇಟ್ಟುಕೊಂಡಿದ್ದಾರೆ. ಈ ರೀತಿ ಮಾಡಿರುವುದು ಕೇವಲ ಒಬ್ಬಿಬ್ಬರಲ್ಲ. ಅನೇಕರು ಇದೇ ರೀತಿ ‘ಯುವರತ್ನ’ನನ್ನು​ ಸ್ವಾಗತಿಸಿದ್ದಾರೆ. ಸದ್ಯ, ವಿಡಿಯೋ ವೈರಲ್​ ಆಗುತ್ತಿದೆ. ಇದು ಪುನೀತ್​ ಮೇಲಿನ ಅಭಿಮಾನಕ್ಕೆ ಸಾಕ್ಷಿ ಆಗಿದೆ.

‘ಯುವರತ್ನ’ ಚಿತ್ರಕ್ಕೆ ಸಂತೋಷ್​ ಆನಂದ್​ರಾಮ್​ ನಿರ್ದೇಶನ ಮಾಡಿದ್ದು, ಸಾಯೆಶಾ ಸೈಗಲ್ ನಾಯಕಿಯಾಗಿ ನಟಿಸಿದ್ದಾರೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ‘ಯುವರತ್ನ’ ಸಿನಿಮಾ ನಿರ್ಮಾಣ ಆಗಿದೆ. 2021ರ ಏಪ್ರಿಲ್​ 1ರಂದು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಆಗಿತ್ತು. ಆ ಸಂದರ್ಭದಲ್ಲಿ ಕೊರೊನಾ 2ನೇ ಅಲೆಯ ಹಾವಳಿ ಇದ್ದಿದ್ದರಿಂದ ಚಿತ್ರಮಂದಿರದಲ್ಲಿ ಶೇ.50 ಆಸನ ಮಿತಿ ನಿಯಮವನ್ನು ಜಾರಿ ಮಾಡಲಾಯಿತು. ಇದರಿಂದ ಚಿತ್ರದ ಕಲೆಕ್ಷನ್​ಗೆ ಹೊಡೆತಬಿದ್ದಿತ್ತು. ಅಲ್ಲದೇ ಬಹುಪಾಲು ಪ್ರೇಕ್ಷಕರಿಗೆ ಈ ಚಿತ್ರವನ್ನು ನೋಡಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ಪುನೀತ್ ಯುವರತ್ನ, ಶಿವರಾಂ ಭಕ್ತಿರತ್ನ; ತಿಂಗಳಲ್ಲಿ ಎರಡು ರತ್ನಗಳನ್ನು ಕಳೆದುಕೊಂಡಿದ್ದೇವೆ: ನಿರ್ದೇಶಕ ಭಗವಾನ್ ಕಂಬನಿ

ಉದಯ ಟಿವಿಯಲ್ಲಿ ಪ್ರಸಾರ ಆಗಲಿದೆ ‘ಯುವರತ್ನ’ ಚಿತ್ರ; ದಿನಾಂಕ, ಸಮಯದ ಬಗ್ಗೆ ಇಲ್ಲಿದೆ ವಿವರ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು