AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ನಡೆಯಲಿದೆ ಯುವರತ್ನ ಪ್ರೀ ರಿಲೀಸ್​ ಇವೆಂಟ್​!

ಯುವರತ್ನ ಸಿನಿಮಾ ತೆಲುಗಿನಲ್ಲೂ ರಿಲೀಸ್​ ಆಗುತ್ತಿದೆ. ಈ ಸಿನಿಮಾಗೆ ಪ್ರಚಾರ ಕೊಡುವ ಉದ್ದೇಶದಿಂದ ಆಂಧ್ರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸೋ ಆಲೋಚನೆ ಚಿತ್ರತಂಡದ್ದು.

ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ನಡೆಯಲಿದೆ ಯುವರತ್ನ ಪ್ರೀ ರಿಲೀಸ್​ ಇವೆಂಟ್​!
ಪುನೀತ್​ ರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 14, 2021 | 4:09 PM

Share

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಚಿತ್ರತಂಡ ಮೈಸೂರಿನಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಏರ್ಪಡಿಸಿದೆ. ಮಾರ್ಚ್ 20ರಂದು ಮೈಸೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಯುವರತ್ನ ಪ್ರೀ ರಿಲೀಸ್ ಇವೆಂಟ್​ ಮತ್ತು ಆಡಿಯೋ ಲಾಂಚ್ ಒಟ್ಟಿಗೆ ನೆರವೇರಲಿದೆ. ಇದಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೀಗಿರುವಾಗಲೇ ಚಿತ್ರತಂಡದಿಂದ ಮತ್ತೊಂದು ಅಪ್​ಡೇಟ್​ ಸಿಕ್ಕಿದೆ. ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಪ್ರೀ ರಿಲೀಸ್​ ಇವೆಂಟ್​ ಮಾಡಲು ತಂಡ ನಿರ್ಧರಿಸಿದೆ. ಹೌದು, ಯುವರತ್ನ ಸಿನಿಮಾ ತೆಲುಗಿನಲ್ಲೂ ರಿಲೀಸ್​ ಆಗುತ್ತಿದೆ. ಈ ಸಿನಿಮಾಗೆ ಪ್ರಚಾರ ಕೊಡುವ ಉದ್ದೇಶದಿಂದ ಆಂಧ್ರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸೋ ಆಲೋಚನೆ ಚಿತ್ರತಂಡದ್ದು. ಈ ಕಾರ್ಯಕ್ರಮಕ್ಕೆ ಸ್ಟಾರ್​ ನಟರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಟಾಲಿವುಡ್​ನ ಅನೇಕ ಸ್ಟಾರ್​ಗಳಿಗೆ ರಾಜ್​ಕುಮಾರ್​ ಫ್ಯಾಮಿಲಿ ತುಂಬಾನೇ ಆಪ್ತವಾಗಿದೆ. ಬೆಂಗಳೂರಿಗೆ ಬಂದಾಗೆಲ್ಲ ಅವರು ರಾಜ್​ಕುಮಾರ್​ ಕುಟುಂಬದವರನ್ನು ಭೇಟಿ ಮಾಡಿ ಹೋದ ಉದಾಹರಣೆ ಇದೆ. ಈಗ ತೆಲುಗು ನಾಡಿಗೆ ಪುನೀತ್​ ಹೋಗುತ್ತಾರೆ ಎಂದರೆ, ಅಲ್ಲಿ ಟಾಲಿವುಡ್​ ನಟರಿಂದ ಭರ್ಜರಿ ಸ್ವಾಗತ ಸಿಗುವ ನಿರೀಕ್ಷೆ ಇದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಈ ಮೊದಲು ರಿಲೀಸ್​ ಆಗಿರುವ ಸಿನಿಮಾ ಟೀಸರ್​ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಪುನೀತ್​ಗೆ ಜತೆಯಾಗಿ ಸಯ್ಯೇಶಾ ನಟಿಸಿದ್ದಾರೆ. ಧನಂಜಯ್​ ಹಾಗೂ ಪ್ರಕಾಶ್​ ರಾಜ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 1ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Yuvarathnaa Pre-Release: ಮೈಸೂರಲ್ಲಿ ಅದ್ದೂರಿಯಾಗಿ ನೆರವೇರಲಿದೆ ಯುವರತ್ನ ಪ್ರೀ ರಿಲೀಸ್ ಇವೆಂಟ್

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ