AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ನಡೆಯಲಿದೆ ಯುವರತ್ನ ಪ್ರೀ ರಿಲೀಸ್​ ಇವೆಂಟ್​!

ಯುವರತ್ನ ಸಿನಿಮಾ ತೆಲುಗಿನಲ್ಲೂ ರಿಲೀಸ್​ ಆಗುತ್ತಿದೆ. ಈ ಸಿನಿಮಾಗೆ ಪ್ರಚಾರ ಕೊಡುವ ಉದ್ದೇಶದಿಂದ ಆಂಧ್ರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸೋ ಆಲೋಚನೆ ಚಿತ್ರತಂಡದ್ದು.

ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ನಡೆಯಲಿದೆ ಯುವರತ್ನ ಪ್ರೀ ರಿಲೀಸ್​ ಇವೆಂಟ್​!
ಪುನೀತ್​ ರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 14, 2021 | 4:09 PM

Share

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಚಿತ್ರತಂಡ ಮೈಸೂರಿನಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಏರ್ಪಡಿಸಿದೆ. ಮಾರ್ಚ್ 20ರಂದು ಮೈಸೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಯುವರತ್ನ ಪ್ರೀ ರಿಲೀಸ್ ಇವೆಂಟ್​ ಮತ್ತು ಆಡಿಯೋ ಲಾಂಚ್ ಒಟ್ಟಿಗೆ ನೆರವೇರಲಿದೆ. ಇದಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೀಗಿರುವಾಗಲೇ ಚಿತ್ರತಂಡದಿಂದ ಮತ್ತೊಂದು ಅಪ್​ಡೇಟ್​ ಸಿಕ್ಕಿದೆ. ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಪ್ರೀ ರಿಲೀಸ್​ ಇವೆಂಟ್​ ಮಾಡಲು ತಂಡ ನಿರ್ಧರಿಸಿದೆ. ಹೌದು, ಯುವರತ್ನ ಸಿನಿಮಾ ತೆಲುಗಿನಲ್ಲೂ ರಿಲೀಸ್​ ಆಗುತ್ತಿದೆ. ಈ ಸಿನಿಮಾಗೆ ಪ್ರಚಾರ ಕೊಡುವ ಉದ್ದೇಶದಿಂದ ಆಂಧ್ರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸೋ ಆಲೋಚನೆ ಚಿತ್ರತಂಡದ್ದು. ಈ ಕಾರ್ಯಕ್ರಮಕ್ಕೆ ಸ್ಟಾರ್​ ನಟರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಟಾಲಿವುಡ್​ನ ಅನೇಕ ಸ್ಟಾರ್​ಗಳಿಗೆ ರಾಜ್​ಕುಮಾರ್​ ಫ್ಯಾಮಿಲಿ ತುಂಬಾನೇ ಆಪ್ತವಾಗಿದೆ. ಬೆಂಗಳೂರಿಗೆ ಬಂದಾಗೆಲ್ಲ ಅವರು ರಾಜ್​ಕುಮಾರ್​ ಕುಟುಂಬದವರನ್ನು ಭೇಟಿ ಮಾಡಿ ಹೋದ ಉದಾಹರಣೆ ಇದೆ. ಈಗ ತೆಲುಗು ನಾಡಿಗೆ ಪುನೀತ್​ ಹೋಗುತ್ತಾರೆ ಎಂದರೆ, ಅಲ್ಲಿ ಟಾಲಿವುಡ್​ ನಟರಿಂದ ಭರ್ಜರಿ ಸ್ವಾಗತ ಸಿಗುವ ನಿರೀಕ್ಷೆ ಇದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಈ ಮೊದಲು ರಿಲೀಸ್​ ಆಗಿರುವ ಸಿನಿಮಾ ಟೀಸರ್​ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಪುನೀತ್​ಗೆ ಜತೆಯಾಗಿ ಸಯ್ಯೇಶಾ ನಟಿಸಿದ್ದಾರೆ. ಧನಂಜಯ್​ ಹಾಗೂ ಪ್ರಕಾಶ್​ ರಾಜ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 1ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Yuvarathnaa Pre-Release: ಮೈಸೂರಲ್ಲಿ ಅದ್ದೂರಿಯಾಗಿ ನೆರವೇರಲಿದೆ ಯುವರತ್ನ ಪ್ರೀ ರಿಲೀಸ್ ಇವೆಂಟ್

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!