AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ನಡೆಯಲಿದೆ ಯುವರತ್ನ ಪ್ರೀ ರಿಲೀಸ್​ ಇವೆಂಟ್​!

ಯುವರತ್ನ ಸಿನಿಮಾ ತೆಲುಗಿನಲ್ಲೂ ರಿಲೀಸ್​ ಆಗುತ್ತಿದೆ. ಈ ಸಿನಿಮಾಗೆ ಪ್ರಚಾರ ಕೊಡುವ ಉದ್ದೇಶದಿಂದ ಆಂಧ್ರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸೋ ಆಲೋಚನೆ ಚಿತ್ರತಂಡದ್ದು.

ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ನಡೆಯಲಿದೆ ಯುವರತ್ನ ಪ್ರೀ ರಿಲೀಸ್​ ಇವೆಂಟ್​!
ಪುನೀತ್​ ರಾಜ್​ಕುಮಾರ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Mar 14, 2021 | 4:09 PM

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಚಿತ್ರತಂಡ ಮೈಸೂರಿನಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಏರ್ಪಡಿಸಿದೆ. ಮಾರ್ಚ್ 20ರಂದು ಮೈಸೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಯುವರತ್ನ ಪ್ರೀ ರಿಲೀಸ್ ಇವೆಂಟ್​ ಮತ್ತು ಆಡಿಯೋ ಲಾಂಚ್ ಒಟ್ಟಿಗೆ ನೆರವೇರಲಿದೆ. ಇದಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೀಗಿರುವಾಗಲೇ ಚಿತ್ರತಂಡದಿಂದ ಮತ್ತೊಂದು ಅಪ್​ಡೇಟ್​ ಸಿಕ್ಕಿದೆ. ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಪ್ರೀ ರಿಲೀಸ್​ ಇವೆಂಟ್​ ಮಾಡಲು ತಂಡ ನಿರ್ಧರಿಸಿದೆ. ಹೌದು, ಯುವರತ್ನ ಸಿನಿಮಾ ತೆಲುಗಿನಲ್ಲೂ ರಿಲೀಸ್​ ಆಗುತ್ತಿದೆ. ಈ ಸಿನಿಮಾಗೆ ಪ್ರಚಾರ ಕೊಡುವ ಉದ್ದೇಶದಿಂದ ಆಂಧ್ರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸೋ ಆಲೋಚನೆ ಚಿತ್ರತಂಡದ್ದು. ಈ ಕಾರ್ಯಕ್ರಮಕ್ಕೆ ಸ್ಟಾರ್​ ನಟರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಟಾಲಿವುಡ್​ನ ಅನೇಕ ಸ್ಟಾರ್​ಗಳಿಗೆ ರಾಜ್​ಕುಮಾರ್​ ಫ್ಯಾಮಿಲಿ ತುಂಬಾನೇ ಆಪ್ತವಾಗಿದೆ. ಬೆಂಗಳೂರಿಗೆ ಬಂದಾಗೆಲ್ಲ ಅವರು ರಾಜ್​ಕುಮಾರ್​ ಕುಟುಂಬದವರನ್ನು ಭೇಟಿ ಮಾಡಿ ಹೋದ ಉದಾಹರಣೆ ಇದೆ. ಈಗ ತೆಲುಗು ನಾಡಿಗೆ ಪುನೀತ್​ ಹೋಗುತ್ತಾರೆ ಎಂದರೆ, ಅಲ್ಲಿ ಟಾಲಿವುಡ್​ ನಟರಿಂದ ಭರ್ಜರಿ ಸ್ವಾಗತ ಸಿಗುವ ನಿರೀಕ್ಷೆ ಇದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಈ ಮೊದಲು ರಿಲೀಸ್​ ಆಗಿರುವ ಸಿನಿಮಾ ಟೀಸರ್​ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಪುನೀತ್​ಗೆ ಜತೆಯಾಗಿ ಸಯ್ಯೇಶಾ ನಟಿಸಿದ್ದಾರೆ. ಧನಂಜಯ್​ ಹಾಗೂ ಪ್ರಕಾಶ್​ ರಾಜ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 1ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Yuvarathnaa Pre-Release: ಮೈಸೂರಲ್ಲಿ ಅದ್ದೂರಿಯಾಗಿ ನೆರವೇರಲಿದೆ ಯುವರತ್ನ ಪ್ರೀ ರಿಲೀಸ್ ಇವೆಂಟ್

ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಬಾಹ್ಯಾಕಾಶಕ್ಕೆ ಹಾರಿದ ಮಗನನ್ನು ಕಂಡು ಭಾವುಕರಾದ ಶುಭಾಂಶು ಶುಕ್ಲಾ ತಾಯಿ
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ