Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ನಡೆಯಲಿದೆ ಯುವರತ್ನ ಪ್ರೀ ರಿಲೀಸ್​ ಇವೆಂಟ್​!

ಯುವರತ್ನ ಸಿನಿಮಾ ತೆಲುಗಿನಲ್ಲೂ ರಿಲೀಸ್​ ಆಗುತ್ತಿದೆ. ಈ ಸಿನಿಮಾಗೆ ಪ್ರಚಾರ ಕೊಡುವ ಉದ್ದೇಶದಿಂದ ಆಂಧ್ರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸೋ ಆಲೋಚನೆ ಚಿತ್ರತಂಡದ್ದು.

ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ನಡೆಯಲಿದೆ ಯುವರತ್ನ ಪ್ರೀ ರಿಲೀಸ್​ ಇವೆಂಟ್​!
ಪುನೀತ್​ ರಾಜ್​ಕುಮಾರ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Mar 14, 2021 | 4:09 PM

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಚಿತ್ರತಂಡ ಮೈಸೂರಿನಲ್ಲಿ ಪ್ರೀ ರಿಲೀಸ್ ಕಾರ್ಯಕ್ರಮ ಏರ್ಪಡಿಸಿದೆ. ಮಾರ್ಚ್ 20ರಂದು ಮೈಸೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಯುವರತ್ನ ಪ್ರೀ ರಿಲೀಸ್ ಇವೆಂಟ್​ ಮತ್ತು ಆಡಿಯೋ ಲಾಂಚ್ ಒಟ್ಟಿಗೆ ನೆರವೇರಲಿದೆ. ಇದಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹೀಗಿರುವಾಗಲೇ ಚಿತ್ರತಂಡದಿಂದ ಮತ್ತೊಂದು ಅಪ್​ಡೇಟ್​ ಸಿಕ್ಕಿದೆ. ಟಾಲಿವುಡ್​ ಸ್ಟಾರ್​ ನಟರ ಸಮಾಗಮದಲ್ಲಿ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಪ್ರೀ ರಿಲೀಸ್​ ಇವೆಂಟ್​ ಮಾಡಲು ತಂಡ ನಿರ್ಧರಿಸಿದೆ. ಹೌದು, ಯುವರತ್ನ ಸಿನಿಮಾ ತೆಲುಗಿನಲ್ಲೂ ರಿಲೀಸ್​ ಆಗುತ್ತಿದೆ. ಈ ಸಿನಿಮಾಗೆ ಪ್ರಚಾರ ಕೊಡುವ ಉದ್ದೇಶದಿಂದ ಆಂಧ್ರದಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸೋ ಆಲೋಚನೆ ಚಿತ್ರತಂಡದ್ದು. ಈ ಕಾರ್ಯಕ್ರಮಕ್ಕೆ ಸ್ಟಾರ್​ ನಟರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಟಾಲಿವುಡ್​ನ ಅನೇಕ ಸ್ಟಾರ್​ಗಳಿಗೆ ರಾಜ್​ಕುಮಾರ್​ ಫ್ಯಾಮಿಲಿ ತುಂಬಾನೇ ಆಪ್ತವಾಗಿದೆ. ಬೆಂಗಳೂರಿಗೆ ಬಂದಾಗೆಲ್ಲ ಅವರು ರಾಜ್​ಕುಮಾರ್​ ಕುಟುಂಬದವರನ್ನು ಭೇಟಿ ಮಾಡಿ ಹೋದ ಉದಾಹರಣೆ ಇದೆ. ಈಗ ತೆಲುಗು ನಾಡಿಗೆ ಪುನೀತ್​ ಹೋಗುತ್ತಾರೆ ಎಂದರೆ, ಅಲ್ಲಿ ಟಾಲಿವುಡ್​ ನಟರಿಂದ ಭರ್ಜರಿ ಸ್ವಾಗತ ಸಿಗುವ ನಿರೀಕ್ಷೆ ಇದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಈ ಮೊದಲು ರಿಲೀಸ್​ ಆಗಿರುವ ಸಿನಿಮಾ ಟೀಸರ್​ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಪುನೀತ್​ಗೆ ಜತೆಯಾಗಿ ಸಯ್ಯೇಶಾ ನಟಿಸಿದ್ದಾರೆ. ಧನಂಜಯ್​ ಹಾಗೂ ಪ್ರಕಾಶ್​ ರಾಜ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 1ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Yuvarathnaa Pre-Release: ಮೈಸೂರಲ್ಲಿ ಅದ್ದೂರಿಯಾಗಿ ನೆರವೇರಲಿದೆ ಯುವರತ್ನ ಪ್ರೀ ರಿಲೀಸ್ ಇವೆಂಟ್

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ