AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa Pre-Release: ಮೈಸೂರಲ್ಲಿ ಅದ್ದೂರಿಯಾಗಿ ನೆರವೇರಲಿದೆ ಯುವರತ್ನ ಪ್ರೀ ರಿಲೀಸ್ ಇವೆಂಟ್

Puneeth Rajkumar: ಯುವರತ್ನ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಮಾರ್ಚ್ 20ರಂದು ಮೈಸೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ.

Yuvarathnaa Pre-Release: ಮೈಸೂರಲ್ಲಿ ಅದ್ದೂರಿಯಾಗಿ ನೆರವೇರಲಿದೆ ಯುವರತ್ನ ಪ್ರೀ ರಿಲೀಸ್ ಇವೆಂಟ್
ರಾಜೇಶ್ ದುಗ್ಗುಮನೆ
|

Updated on: Mar 09, 2021 | 4:25 PM

Share

ಸದ್ಯ ಸ್ಯಾಂಡಲ್​ವುಡ್​ನಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮದ ಹವಾ ಜೋರಾಗಿದೆ. ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ದಾವಣಗೆರೆಯಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಇದಾದ ಬೆನ್ನಲ್ಲೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತಂಡ ಕೂಡ ರಿಲೀಸ್​ಗೂ ಮುನ್ನ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಿತ್ತು. ಈಗ ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಚಿತ್ರ ಕೂಡ ಇದೇ ಹಾದಿ ತುಳಿದಿದೆ. ಯುವರತ್ನ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಮಾರ್ಚ್ 20ರಂದು ಮೈಸೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಯುವರತ್ನ ಪ್ರೀ ರಿಲೀಸ್ ಮತ್ತು ಆಡಿಯೋ ಲಾಂಚ್ ಒಟ್ಟಿಗೆ ನೆರವೇರಲಿದೆ. ಇದಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಹೊಂಬಾಳೆ ಫಿಲ್ಸ್ಮ್​ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್​ ಗೌಡ, ಯುವರತ್ನ ಪ್ರೀ ರಿಲೀಸ್​ ಇವೆಂಟ್​ ಬಗ್ಗೆ ಸೂಚನೆ ನೀಡಿದ್ದರು. ಈಗ ಈ ಬಗ್ಗೆ ಖಚಿತ ಮಾಹಿತಿ ಸಿಕ್ಕಂತಾಗಿದೆ.

ಸ್ಯಾಂಡಲ್​ವುಡ್​ ಪಾಲಿಗೆ ಪ್ರೀ ರಿಲೀಸ್​ ಇವೆಂಟ್​ ಹೊಸತು ಎಂದೇ ಹೇಳಬಹುದು. ತೆಲುಗಿನಲ್ಲಿ ಸ್ಟಾರ್​ ನಟರ ಚಿತ್ರ ರಿಲೀಸ್​ ಆಗುವುದಕ್ಕೂ ಮುನ್ನ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಪದ್ದತಿ ನಡೆದುಕೊಂಡು ಬಂದಿದೆ. ಈಗ ಈ ಟ್ರೆಂಡ್​ ಕನ್ನಡ ಚಿತ್ರರಂಗದಲ್ಲೂ ಶುರುವಾದಂತಾಗಿದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಈ ಮೊದಲು ರಿಲೀಸ್​ ಆಗಿರುವ ಸಿನಿಮಾ ಟೀಸರ್​ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಪುನೀತ್​ಗೆ ಜತೆಯಾಗಿ ಸಯ್ಯೇಶಾ ನಟಿಸಿದ್ದಾರೆ. ಧನಂಜಯ್​ ಹಾಗೂ ಪ್ರಕಾಶ್​ ರಾಜ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 1ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Paatashaala Song: ಪಾಠಶಾಲಾ ಹಾಡಿಗೆ ತಲೆದೂಗಿದ ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​! ನಿಮಗೂ ಇಷ್ಟವಾಯ್ತಾ?

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ