AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa: ಆರ್ಭಟ ಶುರು ಮಾಡಿದ ಯುವರತ್ನ.. ರಾಜ್ಯಾದ್ಯಂತ ಥಿಯೇಟರ್​ ಮುಂದೆ ಅಭಿಮಾನಿಗಳ ಸಂಭ್ರಮಾಚರಣೆ!

Yuvarathnaa: ಅಭಿಮಾನಿಗಳಿಗಾಗಿಯೇ ವಿಶೇಷ ಪ್ರದರ್ಶನ ಏರ್ಪಾಡು ಮಾಡಿರುವ ಯುವರತ್ನ ಸಿನಿಮಾ ತಂಡ, ಅಭಿಮಾನಿಗಳಿಗಾಗಿ ಒಟ್ಟು 50 ಫ್ಯಾನ್ಸ್ ಶೋಗಳನ್ನ ಮೀಸಲಿರಿಸಿದೆ.

Yuvarathnaa: ಆರ್ಭಟ ಶುರು ಮಾಡಿದ ಯುವರತ್ನ.. ರಾಜ್ಯಾದ್ಯಂತ ಥಿಯೇಟರ್​ ಮುಂದೆ ಅಭಿಮಾನಿಗಳ ಸಂಭ್ರಮಾಚರಣೆ!
ಪುನೀತ್​ ರಾಜ್​ಕುಮಾರ್
Follow us
ಪೃಥ್ವಿಶಂಕರ
|

Updated on:Apr 01, 2021 | 12:37 PM

ಬೆಂಗಳೂರು: ಇಂದು ಬಹುನಿರೀಕ್ಷಿತ ಪುನೀತ್​ ರಾಜ್​ಕುಮಾರ್​ ಅಭಿನಯದ ಯುವರತ್ನ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಕಳೆದರೆಡು ವರ್ಷಗಳಿಂದ ಪವರ್​ ಸ್ಟಾರ್​ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಯುವರತ್ನ ಸಿನಿಮಾ ಇಂದು ಬೆಳಿಗ್ಗೆ 6 ಗಂಟೆಯಿಂದಲೇ ತನ್ನ ಆರ್ಭಟ ಶುರುಮಾಡಿದೆ. ಹೀಗಾಗಿ ತನ್ನ ಆರಾಧ್ಯ ದೈವವನ್ನು ಕಣ್ತುಂಬಿಕೊಳ್ಳಲು ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಜೊತೆಗೆ ಪುನೀತ್​ ಕಟ್​ಔಟ್​ಗೆ ಹಾಲಿನ ಅಭಿಷೇಕದ ಹಾಗೂ ಥಿಯೇಟರ್​ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ಯುವರತ್ನ ಸಿನಿಮಾ ರಾಜಧಾನಿ ಬೆಂಗಳೂರಿನಲ್ಲೂ ಇಂದು ಬೆಳಿಗ್ಗೆಯಿಂದಲೇ ತನ್ನ ಪ್ರದರ್ಶನ ಶುರು ಮಾಡಿದೆ. ಮಧ್ಯ ರಾತ್ರಿಯಿಂದಲೇ ಪುನೀತ್​ ಸಿನಿಮಾ ನೋಡಲು ಚಿತ್ರಮಂದಿರದ ಮುಂದೆ ಕಾದು ಕುಳಿತಿದ್ದ ಅಭಿಮಾನಿಗಳು ತೆರೆಯ ಮೇಲೆ ಪವರ್​ಸ್ಟಾರ್​ ಹವಾ ಕಣ್ತುಂಬಿಗಳು ಕಾಯುತ್ತಿದ್ದರು. ಇದರ ಫಲವಾಗಿ ಬೆಂಗಳೂರಿನ ಎಲ್ಲಾ ಥಿಯೇಟರ್​ಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.

ಅಭಿಮಾನಿಗಳು ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದಾರೆ. ಅಭಿಮಾನಿಗಳಿಗಾಗಿಯೇ ವಿಶೇಷ ಪ್ರದರ್ಶನ ಏರ್ಪಾಡು ಮಾಡಿರುವ ಯುವರತ್ನ ಸಿನಿಮಾ ತಂಡ, ಅಭಿಮಾನಿಗಳಿಗಾಗಿ ಒಟ್ಟು 50 ಫ್ಯಾನ್ಸ್ ಶೋಗಳನ್ನ ಮೀಸಲಿರಿಸಿದೆ. ಹೀಗಾಗಿ ಊರ್ವಶಿ, ವಿರೇಶ್ ಚಿತ್ರಮಂದಿರದಲ್ಲಿ ಅಭಿಮಾನಿಗಳು ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದಾರೆ. ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳ ಸಾಗರವೇ ಸೃಷ್ಟಿಯಾಗಿದೆ. ಬೆಳಗ್ಗೆ ಆರು ಗಂಟೆಗೆಯಿಂದಲೇ ಫ್ಯಾನ್ಸ್ ಶೋ ಆರಂಭವಾಗಿದ್ದು ಒಟ್ಟು 600ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಯುವರತ್ನ ರಿಲೀಸ್ ಆಗಿದೆ.

ಕರ್ನಾಟಕದಲ್ಲಿ 400, ಆಂಧ್ರ ತೆಲಂಗಾಣದಲ್ಲಿ 200 ಚಿತ್ರಮಂದಿರಗಳಲ್ಲಿ ಯುವರತ್ನ ರಿಲೀಸ್ ಆಗಿದ್ದು, ಕನ್ನಡ ಮತ್ತು ತೆಲುಗಿನಲ್ಲಿ ಒಟ್ಟಿಗೆ ತೆರೆಗೆ ಬಂದಿದೆ. ಲಾಕ್​ಡೌನ್ ಬಳಿಕ ರಿಲೀಸ್ ಆಗ್ತಿರೋ 3ನೇ ಬಿಗ್ ಬಜೆಟ್ ಸಿನಿಮಾ ಯುವರತ್ನವಾಗಿದೆ.

ಇದನ್ನೂ ಓದಿ: Yuvarathnaa: ಧೂಳೆಬ್ಬಿಸಲು ಬಂದ ಯುವರತ್ನ! ಎಷ್ಟು ಚಿತ್ರಮಂದಿರಗಳಲ್ಲಿ ಪುನೀತ್​ ರಾಜ್​ಕುಮಾರ್ ಹವಾ?

Published On - 7:25 am, Thu, 1 April 21

ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!