AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa: ಆರ್ಭಟ ಶುರು ಮಾಡಿದ ಯುವರತ್ನ.. ರಾಜ್ಯಾದ್ಯಂತ ಥಿಯೇಟರ್​ ಮುಂದೆ ಅಭಿಮಾನಿಗಳ ಸಂಭ್ರಮಾಚರಣೆ!

Yuvarathnaa: ಅಭಿಮಾನಿಗಳಿಗಾಗಿಯೇ ವಿಶೇಷ ಪ್ರದರ್ಶನ ಏರ್ಪಾಡು ಮಾಡಿರುವ ಯುವರತ್ನ ಸಿನಿಮಾ ತಂಡ, ಅಭಿಮಾನಿಗಳಿಗಾಗಿ ಒಟ್ಟು 50 ಫ್ಯಾನ್ಸ್ ಶೋಗಳನ್ನ ಮೀಸಲಿರಿಸಿದೆ.

Yuvarathnaa: ಆರ್ಭಟ ಶುರು ಮಾಡಿದ ಯುವರತ್ನ.. ರಾಜ್ಯಾದ್ಯಂತ ಥಿಯೇಟರ್​ ಮುಂದೆ ಅಭಿಮಾನಿಗಳ ಸಂಭ್ರಮಾಚರಣೆ!
ಪುನೀತ್​ ರಾಜ್​ಕುಮಾರ್
ಪೃಥ್ವಿಶಂಕರ
|

Updated on:Apr 01, 2021 | 12:37 PM

Share

ಬೆಂಗಳೂರು: ಇಂದು ಬಹುನಿರೀಕ್ಷಿತ ಪುನೀತ್​ ರಾಜ್​ಕುಮಾರ್​ ಅಭಿನಯದ ಯುವರತ್ನ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಕಳೆದರೆಡು ವರ್ಷಗಳಿಂದ ಪವರ್​ ಸ್ಟಾರ್​ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಯುವರತ್ನ ಸಿನಿಮಾ ಇಂದು ಬೆಳಿಗ್ಗೆ 6 ಗಂಟೆಯಿಂದಲೇ ತನ್ನ ಆರ್ಭಟ ಶುರುಮಾಡಿದೆ. ಹೀಗಾಗಿ ತನ್ನ ಆರಾಧ್ಯ ದೈವವನ್ನು ಕಣ್ತುಂಬಿಕೊಳ್ಳಲು ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಜೊತೆಗೆ ಪುನೀತ್​ ಕಟ್​ಔಟ್​ಗೆ ಹಾಲಿನ ಅಭಿಷೇಕದ ಹಾಗೂ ಥಿಯೇಟರ್​ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ಯುವರತ್ನ ಸಿನಿಮಾ ರಾಜಧಾನಿ ಬೆಂಗಳೂರಿನಲ್ಲೂ ಇಂದು ಬೆಳಿಗ್ಗೆಯಿಂದಲೇ ತನ್ನ ಪ್ರದರ್ಶನ ಶುರು ಮಾಡಿದೆ. ಮಧ್ಯ ರಾತ್ರಿಯಿಂದಲೇ ಪುನೀತ್​ ಸಿನಿಮಾ ನೋಡಲು ಚಿತ್ರಮಂದಿರದ ಮುಂದೆ ಕಾದು ಕುಳಿತಿದ್ದ ಅಭಿಮಾನಿಗಳು ತೆರೆಯ ಮೇಲೆ ಪವರ್​ಸ್ಟಾರ್​ ಹವಾ ಕಣ್ತುಂಬಿಗಳು ಕಾಯುತ್ತಿದ್ದರು. ಇದರ ಫಲವಾಗಿ ಬೆಂಗಳೂರಿನ ಎಲ್ಲಾ ಥಿಯೇಟರ್​ಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.

ಅಭಿಮಾನಿಗಳು ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದಾರೆ. ಅಭಿಮಾನಿಗಳಿಗಾಗಿಯೇ ವಿಶೇಷ ಪ್ರದರ್ಶನ ಏರ್ಪಾಡು ಮಾಡಿರುವ ಯುವರತ್ನ ಸಿನಿಮಾ ತಂಡ, ಅಭಿಮಾನಿಗಳಿಗಾಗಿ ಒಟ್ಟು 50 ಫ್ಯಾನ್ಸ್ ಶೋಗಳನ್ನ ಮೀಸಲಿರಿಸಿದೆ. ಹೀಗಾಗಿ ಊರ್ವಶಿ, ವಿರೇಶ್ ಚಿತ್ರಮಂದಿರದಲ್ಲಿ ಅಭಿಮಾನಿಗಳು ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದಾರೆ. ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳ ಸಾಗರವೇ ಸೃಷ್ಟಿಯಾಗಿದೆ. ಬೆಳಗ್ಗೆ ಆರು ಗಂಟೆಗೆಯಿಂದಲೇ ಫ್ಯಾನ್ಸ್ ಶೋ ಆರಂಭವಾಗಿದ್ದು ಒಟ್ಟು 600ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಯುವರತ್ನ ರಿಲೀಸ್ ಆಗಿದೆ.

ಕರ್ನಾಟಕದಲ್ಲಿ 400, ಆಂಧ್ರ ತೆಲಂಗಾಣದಲ್ಲಿ 200 ಚಿತ್ರಮಂದಿರಗಳಲ್ಲಿ ಯುವರತ್ನ ರಿಲೀಸ್ ಆಗಿದ್ದು, ಕನ್ನಡ ಮತ್ತು ತೆಲುಗಿನಲ್ಲಿ ಒಟ್ಟಿಗೆ ತೆರೆಗೆ ಬಂದಿದೆ. ಲಾಕ್​ಡೌನ್ ಬಳಿಕ ರಿಲೀಸ್ ಆಗ್ತಿರೋ 3ನೇ ಬಿಗ್ ಬಜೆಟ್ ಸಿನಿಮಾ ಯುವರತ್ನವಾಗಿದೆ.

ಇದನ್ನೂ ಓದಿ: Yuvarathnaa: ಧೂಳೆಬ್ಬಿಸಲು ಬಂದ ಯುವರತ್ನ! ಎಷ್ಟು ಚಿತ್ರಮಂದಿರಗಳಲ್ಲಿ ಪುನೀತ್​ ರಾಜ್​ಕುಮಾರ್ ಹವಾ?

Published On - 7:25 am, Thu, 1 April 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ