AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa: ‘ಪುನೀತ್​ ರಾಜ್​ಕುಮಾರ್​ಗೆ ಯಾಕೆ ಇಂಥ ಅನ್ಯಾಯ?’ ಸರ್ಕಾರದ ವಿರುದ್ಧ ಸಿಡಿದೆದ್ದ ಅಪ್ಪು ಫ್ಯಾನ್ಸ್​!

Puneeth Rajkumar: ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಮಾತ್ರ ಆಸನ ಭರ್ತಿ ಮಾಡಬೇಕು ಎಂಬ ಸರ್ಕಾರದ ಆದೇಶದಿಂದ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳಿಗೆ ತೀವ್ರ ಬೇಸರ ಆಗಿದೆ. ಹಾಗಂತ ಫ್ಯಾನ್ಸ್​ ಕೈ ಕಟ್ಟಿ ಕುಳಿತಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಸರ್ಕಾರವನ್ನು ಎಲ್ಲರೂ ಪ್ರಶ್ನಿಸುತ್ತಿದ್ದಾರೆ.

Yuvarathnaa: ‘ಪುನೀತ್​ ರಾಜ್​ಕುಮಾರ್​ಗೆ ಯಾಕೆ ಇಂಥ ಅನ್ಯಾಯ?’ ಸರ್ಕಾರದ ವಿರುದ್ಧ ಸಿಡಿದೆದ್ದ ಅಪ್ಪು ಫ್ಯಾನ್ಸ್​!
ಪುನೀತ್​ ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Apr 03, 2021 | 12:58 PM

Share

ಭಾರೀ ನಿರೀಕ್ಷೆಗಳೊಂದಿಗೆ ‘ಯುವರತ್ನ’ ಸಿನಿಮಾ ಏ.1ರಂದು ರಿಲೀಸ್​ ಆಗಿತ್ತು. ಆದರೆ ಬಿಡುಗಡೆಯಾದ ಎರಡೇ ದಿನಕ್ಕೆ ಈ ಚಿತ್ರಕ್ಕೆ ಹೊಸ ನಿಯಮದ ಬಿಸಿ ತಟ್ಟಿದೆ. ಒಂದೆಡೆ ಪೈರಸಿ ವಿರುದ್ಧ ಹೋರಾಡುತ್ತಿದ್ದ ಚಿತ್ರತಂಡಕ್ಕೆ ಈಗ ಹೊಸ ತಲೆನೋವು ಆರಂಭ ಆಗಿದೆ. ಚಿತ್ರತಂಡಕ್ಕೆ ಮಾತ್ರವಲ್ಲದೆ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳಿಗೂ ಇದರಿಂದ ತೀವ್ರ ಬೇಸರ ಆಗಿದೆ. ಹಾಗಂತ ಫ್ಯಾನ್ಸ್​ ಕೈ ಕಟ್ಟಿ ಕುಳಿತಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಸರ್ಕಾರವನ್ನು ಎಲ್ಲರೂ ಪ್ರಶ್ನಿಸುತ್ತಿದ್ದಾರೆ. ಹ್ಯಾಶ್​ಟ್ಯಾಗ್​ ಅಭಿಯಾನ ಶುರುಮಾಡಿಕೊಂಡಿದ್ದಾರೆ.

‘ನಟ ಸಾರ್ವಭೌಮ’ ಬಳಿಕ ಪುನೀತ್​ ನಟನೆಯ ಯಾವುದೇ ಸಿನಿಮಾ ತೆರೆಕಂಡಿರಲಿಲ್ಲ. ಬರೋಬ್ಬರಿ 2 ವರ್ಷಗಳ ನಂತರ ‘ಯುವರತ್ನ’ ಮೂಲಕ ಅಪ್ಪು ಅವರನ್ನು ಚಿತ್ರಮಂದಿರದಲ್ಲಿ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಕ್ಕಿತ್ತು. ಎಲ್ಲವೂ ಚೆನ್ನಾಗಿ ನಡೆಯುತ್ತಿದೆ ಎನ್ನುವಾಗಲೇ ಶೇ.50ರಷ್ಟು ಮಾತ್ರ ಆಸನ ಭರ್ತಿ ಮಾಡಬೇಕು ಎಂಬ ಸರ್ಕಾರದ ಆದೇಶದಿಂದಾಗಿ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ.

ಲಾಕ್​ಡೌನ್​ ಸಂದರ್ಭದಲ್ಲಿ ಪುನೀತ್​ ಅವರು ದೇಣಿಗೆ ನೀಡುವ ಮೂಲಕ ಸಹಾಯ ಮಾಡಿದ್ದರು. ಆದರೆ ಇಂದು ಅವರ ಚಿತ್ರಕ್ಕೆ ತೊಂದರೆ ಆಗಿರುವುದು ಫ್ಯಾನ್ಸ್​ ಬೇಸರಕ್ಕೆ ಕಾರಣ ಆಗಿದೆ. ಯಾವುದೇ ಮುನ್ಸೂಚನೆ ನೀಡದೇ ಹೀಗೆ ಏಕಾಏಕಿ ನಿಯಮ ಜಾರಿ ಮಾಡಿರುವುದು ಎಲ್ಲರ ಆಕ್ರೋಶಕ್ಕೆ ಕಾರಣ ಆಗಿದೆ. ಇದನ್ನು ಸೋಶಿಯಲ್​ ಮೀಡಿಯಾ ಮೂಲಕ ಪ್ರಶ್ನಿಸಲಾಗುತ್ತಿದೆ.

#WeWant100PercentOccupancy #SaveCinema ಮುಂತಾದ ಹ್ಯಾಶ್​ಟ್ಯಾಗ್​ಗಳನ್ನು ಬಳಸಿ ಅಪ್ಪು ಅಭಿಮಾನಿಗಳು ಟ್ವೀಟ್​ ಮಾಡುತ್ತಿದ್ದಾರೆ. ಅದರ ಜೊತೆಗೆ ರಾಜಕೀಯದವರು ನಡೆಸಿದ ಸಮಾವೇಶಗಳ ಫೋಟೋಗಳನ್ನು ಶೇರ್​ ಮಾಡಲಾಗುತ್ತಿದೆ. ಇಂಥ ಪೊಲಿಟಿಕಲ್​ ಕ್ಯಾಂಪೇನ್​ಗಳಲ್ಲಿ ಕೊರೊನಾ ಬರುವುದಿಲ್ಲವೇ? ಬರೀ ಸಿನಿಮಾಗೆ ಯಾಕೆ ಈ ರೀತಿ ಅನ್ಯಾಯ ಮಾಡ್ತೀರಿ ಎಂದು ಜನರು ಸರ್ಕಾರದ ನಡೆಯನ್ನು ವ್ಯಂಗ್ಯ ಮಾಡುತ್ತಿದ್ದಾರೆ.

ಸರ್ಕಾರ ತನ್ನ ನಿರ್ಧಾರ ಬದಲಿಸುವವರೆಗೂ ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮುಂದುವರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಯುವರತ್ನ ಚಿತ್ರಕ್ಕೆ ಬೆಂಬಲ ನೀಡಿ, ಶುಕ್ರವಾರ (ಮಾ.2) ರಾತ್ರಿಯಿಂದಲೇ ವಿಡಿಯೋಗಳನ್ನು ಮಾಡಿ ಹರಿಬಿಡಲಾಗುತ್ತಿದೆ. ಸಿಎಂ ನಿವಾಸದ ಬಳಿ ಅಪ್ಪು ಫ್ಯಾನ್ಸ್​ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನಿವಾಸ ಕಾವೇರಿ ಬಳಿ ಪೊಲೀಸ್ ಬಿಗಿಭದ್ರತೆ ಒದಗಿಸಲಾಗಿದೆ. ಇನ್ನು ಪುನೀತ್​ ಕೂಡ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ. ಮೊದಲೇ ಹೇಳಿದ್ದರೆ ನಾವು ಸಿನಿಮಾ ರಿಲೀಸ್​ ಮಾಡುತ್ತಿರಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ವಿಚಾರವಾಗಿ ಶನಿವಾರ (ಮಾ.3) ಸಭೆ ನಡೆಸಲಾಗಿದೆ. ಸದ್ಯ ಎದುರಾಗಿರುವ ಬಿಕ್ಕಟ್ಟಿನ ಕುರಿತು ಚರ್ಚೆ ಮಾಡಲಾಗಿದ್ದು, ಹೀಗೆ ಏಕಾಏಕಿ ಆದೇಶ ಹೊರಡಿಸಿದರೆ ಏನು ಮಾಡುವುದು ಎಂದು ಫಿಲ್ಮ್ ಚೇಂಬರ್​ ಅಧ್ಯಕ್ಷ ಜೈರಾಜ್​ ಪ್ರಶ್ನಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಮಂಡಳಿಯ ಪ್ರಮುಖರು ನಿರ್ಧರಿಸಿದ್ದಾರೆ.

‘50% ಆಕ್ಯೂಪೆನ್ಸಿ ಆದೇಶ ಚಿತ್ರರಂಗಕ್ಕೆ ಆಘಾತಕಾರಿ. ಯುವರತ್ನ ರಿಲೀಸ್ ಆದ ಒಂದೇ ದಿನಕ್ಕೆ ಈ ರೀತಿ ಆಗಿರೋದರಿಂದ ಅವರಿಗೆ ಹೆಚ್ಚು ತೊಂದರೆ ಆಗ್ತಿದೆ. ಮೊದಲೇ ಹೇಳಿದ್ರೆ ರಿಲೀಸ್ ಮುಂದೂಡಬಹುದಿತ್ತು. ಈ ಬಗ್ಗೆ ನಾವು ಸರ್ಕಾರಕ್ಕೆ ಮನವಿ ಮಾಡ್ತಿವಿ. ಇದರಿಂದ ಏನೆಲ್ಲಾ ತೊಂದರೆ ಆಗುತ್ತೆ ಅನ್ನೋದನ್ನ ಮನವರಿಕೆ ಮಾಡಿಕೊಡುತ್ತೇವೆ’ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್​ ಹೇಳಿದ್ದಾರೆ.

ಇದನ್ನೂ ಓದಿ: ಚಿತ್ರಮಂದಿರಕ್ಕೆ ಏಕಾಏಕಿ ಪ್ರವೇಶ ನಿರ್ಬಂಧಿಸಿದರೆ ನಾವೇನು ಮಾಡಬೇಕು?; ಸರ್ಕಾರದ ಕ್ರಮಕ್ಕೆ ಪುನೀತ್​ ಬೇಸರ

Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ