Yuvarathnaa Collections: ಸಾಲುಸಾಲು ತೊಂದರೆ ಎದುರಿಸಿದರೂ ಯುವರತ್ನಗೆ ಒಳ್ಳೆಯ ಕಲೆಕ್ಷನ್; ಸಿನಿಮಾದ ಒಟ್ಟು ಗಳಿಕೆ ಎಷ್ಟು?

ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ 'ಯುವರತ್ನ' ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಾಕ್ಸ್​ ಆಫೀಸ್​ನಲ್ಲಿ ಯುವರತ್ನ ಮೊದಲ ದಿನ 7-10 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತ್ತು ಎನ್ನಲಾಗಿದೆ.

Yuvarathnaa Collections: ಸಾಲುಸಾಲು ತೊಂದರೆ ಎದುರಿಸಿದರೂ ಯುವರತ್ನಗೆ ಒಳ್ಳೆಯ ಕಲೆಕ್ಷನ್; ಸಿನಿಮಾದ ಒಟ್ಟು ಗಳಿಕೆ ಎಷ್ಟು?
ಪುನೀತ್​ ರಾಜ್​ಕುಮಾರ್ - ಯುವರತ್ನ
Follow us
|

Updated on: Apr 14, 2021 | 3:10 PM

ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಕೆ ಮಾಡಿಕೊಂಡಿತ್ತು. ಆದರೆ, ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಆಸನ ಮಿತಿ ಹೇರಿದ್ದರಿಂದ ಸಿನಿಮಾ ರಿಲೀಸ್​ ಆದ ಒಂದೇ ವಾರಕ್ಕೆ ಚಿತ್ರ ಒಟಿಟಿ ಹಾದಿ ಹಿಡಿದಿತ್ತು. ಹಾಗಾದರೆ, ಈ ಸಿನಿಮಾ ಒಂದು ವಾರದಲ್ಲಿ ಒಟ್ಟು ಗಳಿಕೆ ಮಾಡಿದ್ದೆಷ್ಟು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ ‘ಯುವರತ್ನ’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಮೊದಲ ದಿನ ಮುಂಜಾನೆ 6 ಗಂಟೆಯಿಂದಲೇ ಯುವರತ್ನ ಪ್ರದರ್ಶನ ಕಂಡಿತ್ತು. ಪರಿಣಾಮ ಬಾಕ್ಸ್​ ಆಫೀಸ್​ನಲ್ಲಿ ಯುವರತ್ನ ಮೊದಲ ದಿನ 7-10 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತ್ತು ಎನ್ನಲಾಗಿದೆ.

ನಂತರ ಒಂದು ವಾರಗಳ ಕಾಲ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ. ಕೊರೊನಾ ಎರಡನೆ ಅಲೆ, ಆಸನ ಮಿತಿ ಚಾಲೆಂಜ್​ಗಳನ್ನು ಎದುರಿಸಿ ಯುವತ್ನ ಸಿನಿಮಾ 30 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ರಿಲೀಸ್​ ಆದ ಪ್ರಮುಖ ಮೂರನೇ ಚಿತ್ರ ಇದಾಗಿದೆ. ಧ್ರುವ ಸರ್ಜಾ ನಟನೆಯ ಪೊಗರು ಚಿತ್ರ ಬಾಕ್ಸ್​ ಆಫೀಸ್​ನಲ್ಲಿ 45 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಇನ್ನು, ಭಾರೀ ಜನಮನ್ನಣೆ ಪಡೆದಿದ್ದ ರಾಬರ್ಟ್​ ಸಿನಿಮಾ 105 ಕೋಟಿ ರೂಪಾಯಿ ಬಾಚಿಕೊಂಡಿದೆ.

ಅಮೆಜಾನ್​ ಪ್ರೈಮ್​ಗೆ ಒಳ್ಳೆಯ ಬೆಲೆಗೆ ಯುವರತ್ನ ಸೇಲ್​ ಆಗಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಮೊದಲು ಕೆಜಿಎಫ್​ ಚಾಪ್ಟರ್​ 1 ಸಿನಿಮಾ 18 ಕೋಟಿಗೆ ಮಾರಾಟವಾಗಿತ್ತು. ಈ ದಾಖಲೆಯನ್ನು ಯುವರತ್ನ ಮುರಿದು ಹಾಕಿದೆ. ಬರೋಬ್ಬರಿ 20 ಕೋಟಿಗೆ ಯುವರತ್ನ ಸಿನಿಮಾ ಹಕ್ಕನ್ನು ಪ್ರೈಮ್​ ಪಡೆದುಕೊಂಡಿದೆ ಎನ್ನಲಾಗಿದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬಂದಿದ್ದ ಚಿತ್ರ ಯುವರತ್ನ. ಧನಂಜಯ್​, ಪ್ರಕಾಶ್​ ರಾಜ್ ಮೊದಲಾದವರು​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Yuvarathnaa Collection: ಯುವರತ್ನ ಬಾಕ್ಸ್​ ಆಫೀಸ್​ ಗಳಿಕೆ ಎಷ್ಟು? ಇಲ್ಲಿದೆ ಮಾಹಿತಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ