AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa Collections: ಸಾಲುಸಾಲು ತೊಂದರೆ ಎದುರಿಸಿದರೂ ಯುವರತ್ನಗೆ ಒಳ್ಳೆಯ ಕಲೆಕ್ಷನ್; ಸಿನಿಮಾದ ಒಟ್ಟು ಗಳಿಕೆ ಎಷ್ಟು?

ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ 'ಯುವರತ್ನ' ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಾಕ್ಸ್​ ಆಫೀಸ್​ನಲ್ಲಿ ಯುವರತ್ನ ಮೊದಲ ದಿನ 7-10 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತ್ತು ಎನ್ನಲಾಗಿದೆ.

Yuvarathnaa Collections: ಸಾಲುಸಾಲು ತೊಂದರೆ ಎದುರಿಸಿದರೂ ಯುವರತ್ನಗೆ ಒಳ್ಳೆಯ ಕಲೆಕ್ಷನ್; ಸಿನಿಮಾದ ಒಟ್ಟು ಗಳಿಕೆ ಎಷ್ಟು?
ಪುನೀತ್​ ರಾಜ್​ಕುಮಾರ್ - ಯುವರತ್ನ
ರಾಜೇಶ್ ದುಗ್ಗುಮನೆ
|

Updated on: Apr 14, 2021 | 3:10 PM

Share

ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾ ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಕೆ ಮಾಡಿಕೊಂಡಿತ್ತು. ಆದರೆ, ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಆಸನ ಮಿತಿ ಹೇರಿದ್ದರಿಂದ ಸಿನಿಮಾ ರಿಲೀಸ್​ ಆದ ಒಂದೇ ವಾರಕ್ಕೆ ಚಿತ್ರ ಒಟಿಟಿ ಹಾದಿ ಹಿಡಿದಿತ್ತು. ಹಾಗಾದರೆ, ಈ ಸಿನಿಮಾ ಒಂದು ವಾರದಲ್ಲಿ ಒಟ್ಟು ಗಳಿಕೆ ಮಾಡಿದ್ದೆಷ್ಟು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ ‘ಯುವರತ್ನ’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಮೊದಲ ದಿನ ಮುಂಜಾನೆ 6 ಗಂಟೆಯಿಂದಲೇ ಯುವರತ್ನ ಪ್ರದರ್ಶನ ಕಂಡಿತ್ತು. ಪರಿಣಾಮ ಬಾಕ್ಸ್​ ಆಫೀಸ್​ನಲ್ಲಿ ಯುವರತ್ನ ಮೊದಲ ದಿನ 7-10 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತ್ತು ಎನ್ನಲಾಗಿದೆ.

ನಂತರ ಒಂದು ವಾರಗಳ ಕಾಲ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ. ಕೊರೊನಾ ಎರಡನೆ ಅಲೆ, ಆಸನ ಮಿತಿ ಚಾಲೆಂಜ್​ಗಳನ್ನು ಎದುರಿಸಿ ಯುವತ್ನ ಸಿನಿಮಾ 30 ಕೋಟಿ ಕಲೆಕ್ಷನ್​ ಮಾಡಿದೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ರಿಲೀಸ್​ ಆದ ಪ್ರಮುಖ ಮೂರನೇ ಚಿತ್ರ ಇದಾಗಿದೆ. ಧ್ರುವ ಸರ್ಜಾ ನಟನೆಯ ಪೊಗರು ಚಿತ್ರ ಬಾಕ್ಸ್​ ಆಫೀಸ್​ನಲ್ಲಿ 45 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಇನ್ನು, ಭಾರೀ ಜನಮನ್ನಣೆ ಪಡೆದಿದ್ದ ರಾಬರ್ಟ್​ ಸಿನಿಮಾ 105 ಕೋಟಿ ರೂಪಾಯಿ ಬಾಚಿಕೊಂಡಿದೆ.

ಅಮೆಜಾನ್​ ಪ್ರೈಮ್​ಗೆ ಒಳ್ಳೆಯ ಬೆಲೆಗೆ ಯುವರತ್ನ ಸೇಲ್​ ಆಗಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಮೊದಲು ಕೆಜಿಎಫ್​ ಚಾಪ್ಟರ್​ 1 ಸಿನಿಮಾ 18 ಕೋಟಿಗೆ ಮಾರಾಟವಾಗಿತ್ತು. ಈ ದಾಖಲೆಯನ್ನು ಯುವರತ್ನ ಮುರಿದು ಹಾಕಿದೆ. ಬರೋಬ್ಬರಿ 20 ಕೋಟಿಗೆ ಯುವರತ್ನ ಸಿನಿಮಾ ಹಕ್ಕನ್ನು ಪ್ರೈಮ್​ ಪಡೆದುಕೊಂಡಿದೆ ಎನ್ನಲಾಗಿದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬಂದಿದ್ದ ಚಿತ್ರ ಯುವರತ್ನ. ಧನಂಜಯ್​, ಪ್ರಕಾಶ್​ ರಾಜ್ ಮೊದಲಾದವರು​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Yuvarathnaa Collection: ಯುವರತ್ನ ಬಾಕ್ಸ್​ ಆಫೀಸ್​ ಗಳಿಕೆ ಎಷ್ಟು? ಇಲ್ಲಿದೆ ಮಾಹಿತಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ