Yuvarathnaa Trailer: ಕೌಂಟರ್​ ಕೊಟ್ರೆ ಎನ್​ಕೌಂಟರ್​​; ಯುವರತ್ನ ಟ್ರೇಲರ್​ನಲ್ಲಿ ಮಿಂಚಿದ ಪುನೀತ್​ ರಾಜ್​ಕುಮಾರ್​

ಸಿನಿಮಾದಲ್ಲಿ ಡಾಲಿ ಧನಂಜಯ್​ ಖಳನಾಗಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಹೇಗಿರಲಿದೆ ಎಂಬುದಕ್ಕೆ ಸಾಕ್ಷ್ಯ ಸಿಕ್ಕಿದೆ. ಸಿನಿಮಾದಲ್ಲಿ ಡ್ರಗ್​ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಕೂಡ ನಡೆದಿದೆ ಎಂಬುದು ಸೂಕ್ಷ್ಮವಾಗಿ ಗಮನಿಸಿದಾಗ ಗೊತ್ತಾಗುತ್ತದೆ.

Yuvarathnaa Trailer: ಕೌಂಟರ್​ ಕೊಟ್ರೆ ಎನ್​ಕೌಂಟರ್​​; ಯುವರತ್ನ ಟ್ರೇಲರ್​ನಲ್ಲಿ ಮಿಂಚಿದ ಪುನೀತ್​ ರಾಜ್​ಕುಮಾರ್​
ಪುನೀತ್​ ರಾಜ್​ಕುಮಾರ್​
Follow us
|

Updated on: Mar 20, 2021 | 3:10 PM

ಬಹುನಿರೀಕ್ಷಿತ ಯುವರತ್ನ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದೆ. ಒಂದು ಕಡೆ ಕಾಲೇಜು ಹುಡುಗ ಮತ್ತೊಂದು ಕಡೆ ಪೊಲೀಸ್​ ಆಗಿ ಪುನೀತ್​ ರಾಜ್​ಕುಮಾರ್​ ಮಿಂಚಿದ್ದಾರೆ. ಡಾಲಿ ಧನಂಜಯ್​ ವಿಲನ್​ ಆಗಿ ಪುನೀತ್​ಗೆ ಟಫ್​ ಫೈಟ್​ ಕೊಡೋ ಎಲ್ಲ ಲಕ್ಷಣ ಟ್ರೇಲರ್​ನಲ್ಲಿ ಎದ್ದು ಕಾಣುತ್ತಿದೆ. ಇಂದು ಮಧ್ಯಾಹ್ನ ಯುವರತ್ನ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದೆ. ಟ್ರೇಲರ್​ನ ಮೊದಲಾರ್ಧದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡರೆ ಕೊನೆಯ ಒಂದು ನಿಮಿಷದಲ್ಲಿ ಪುನೀತ್​ ಪೊಲೀಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಸಿನಿಮಾದಲ್ಲಿ ಪುನೀತ್​ಗೆ ಎರಡು ಶೇಡ್​ ಇರೋ ವಿಚಾರವನ್ನು ನಿರ್ದೇಶಕ ಸಂತೋಷ್​​​ ಆನಂದ್​ರಾಮ್​ ಬಿಟ್ಟುಕೊಟ್ಟಿದ್ದಾರೆ.

ಪೊಲೀಸರಿಗೆ ಕೊಟ್ಟಿರೋ ಸ್ಟಾರ್​ ಡ್ಯುಟಿಯಲ್ಲಿ ಇರೋವರೆಗೂ ಮಾತ್ರ, ಆದರೆ, ಜನ ನಮಗೆ ಕೊಟ್ಟ ಸ್ಟಾರ್​ ಉಸಿರು ಇರೋವರೆಗೂ. ಜನಕ್ಕೆ ದುಡ್ಡು ಕೊಟ್ಟು ವೋಟ್​ ಹಾಕಿ ಗೆಲ್ಲೋ ನಿನಗೆ, ನಿಮ್​ ಅಪ್ಪನಿಗೆ ಇಷ್ಟು ಇರಬೇಕಾದರೆ.. ಜನ ನಮಗೆ ದುಡ್​ ಕೊಟ್ಟು ವೋಟ್​ ಹಾಕಿ ಗೆಲ್ಸಿರೋದು ನಮಗೆಷ್ಟ್​ ಇರಬಾರದು. ದಮ್​ ಹೊಡಿತೀಯಾ ಎಂದು ಕೇಳಿದಾಗ, ದಮ್​ ಗುಂಡಿಗೇಲಿದೆ ಬಾಯಿಗೆ ಬೇಡ ಎಂಬಿತ್ಯಾದಿ ಡೈಲಾಗ್​ಗಳು ಇಂಟರೆಸ್ಟಿಂಗ್​ ಆಗಿವೆ.

ಸಿನಿಮಾದಲ್ಲಿ ಡಾಲಿ ಧನಂಜಯ್​ ಖಳನಾಗಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಹೇಗಿರಲಿದೆ ಎಂಬುದಕ್ಕೆ ಸಾಕ್ಷ್ಯ ಸಿಕ್ಕಿದೆ. ಸಿನಿಮಾದಲ್ಲಿ ಡ್ರಗ್​ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಕೂಡ ನಡೆದಿದೆ ಎಂಬುದು ಸೂಕ್ಷ್ಮವಾಗಿ ಗಮನಿಸಿದಾಗ ಗೊತ್ತಾಗುತ್ತದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಈ ಮೊದಲು ರಿಲೀಸ್​ ಆಗಿರುವ ಸಿನಿಮಾ ಟೀಸರ್​ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಪುನೀತ್​ಗೆ ಜತೆಯಾಗಿ ಸಯ್ಯೇಶಾ ನಟಿಸಿದ್ದಾರೆ. ಧನಂಜಯ್​ ಹಾಗೂ ಪ್ರಕಾಶ್​ ರಾಜ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 1ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ‘ವ್ಯಾಕ್ಸಿನ್​ ಬಂದಮೇಲೂ ಲಾಕ್​ಡೌನ್​ ಮಾಡುವುದು ವಿಪರ್ಯಾಸ’: ಯುವರತ್ನ ನಿರ್ದೇಶಕ ಸಂತೋಷ್ ಆನಂದ್​ರಾಮ್​!

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​