AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvarathnaa Trailer: ಕೌಂಟರ್​ ಕೊಟ್ರೆ ಎನ್​ಕೌಂಟರ್​​; ಯುವರತ್ನ ಟ್ರೇಲರ್​ನಲ್ಲಿ ಮಿಂಚಿದ ಪುನೀತ್​ ರಾಜ್​ಕುಮಾರ್​

ಸಿನಿಮಾದಲ್ಲಿ ಡಾಲಿ ಧನಂಜಯ್​ ಖಳನಾಗಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಹೇಗಿರಲಿದೆ ಎಂಬುದಕ್ಕೆ ಸಾಕ್ಷ್ಯ ಸಿಕ್ಕಿದೆ. ಸಿನಿಮಾದಲ್ಲಿ ಡ್ರಗ್​ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಕೂಡ ನಡೆದಿದೆ ಎಂಬುದು ಸೂಕ್ಷ್ಮವಾಗಿ ಗಮನಿಸಿದಾಗ ಗೊತ್ತಾಗುತ್ತದೆ.

Yuvarathnaa Trailer: ಕೌಂಟರ್​ ಕೊಟ್ರೆ ಎನ್​ಕೌಂಟರ್​​; ಯುವರತ್ನ ಟ್ರೇಲರ್​ನಲ್ಲಿ ಮಿಂಚಿದ ಪುನೀತ್​ ರಾಜ್​ಕುಮಾರ್​
ಪುನೀತ್​ ರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Mar 20, 2021 | 3:10 PM

Share

ಬಹುನಿರೀಕ್ಷಿತ ಯುವರತ್ನ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದೆ. ಒಂದು ಕಡೆ ಕಾಲೇಜು ಹುಡುಗ ಮತ್ತೊಂದು ಕಡೆ ಪೊಲೀಸ್​ ಆಗಿ ಪುನೀತ್​ ರಾಜ್​ಕುಮಾರ್​ ಮಿಂಚಿದ್ದಾರೆ. ಡಾಲಿ ಧನಂಜಯ್​ ವಿಲನ್​ ಆಗಿ ಪುನೀತ್​ಗೆ ಟಫ್​ ಫೈಟ್​ ಕೊಡೋ ಎಲ್ಲ ಲಕ್ಷಣ ಟ್ರೇಲರ್​ನಲ್ಲಿ ಎದ್ದು ಕಾಣುತ್ತಿದೆ. ಇಂದು ಮಧ್ಯಾಹ್ನ ಯುವರತ್ನ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದೆ. ಟ್ರೇಲರ್​ನ ಮೊದಲಾರ್ಧದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡರೆ ಕೊನೆಯ ಒಂದು ನಿಮಿಷದಲ್ಲಿ ಪುನೀತ್​ ಪೊಲೀಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಸಿನಿಮಾದಲ್ಲಿ ಪುನೀತ್​ಗೆ ಎರಡು ಶೇಡ್​ ಇರೋ ವಿಚಾರವನ್ನು ನಿರ್ದೇಶಕ ಸಂತೋಷ್​​​ ಆನಂದ್​ರಾಮ್​ ಬಿಟ್ಟುಕೊಟ್ಟಿದ್ದಾರೆ.

ಪೊಲೀಸರಿಗೆ ಕೊಟ್ಟಿರೋ ಸ್ಟಾರ್​ ಡ್ಯುಟಿಯಲ್ಲಿ ಇರೋವರೆಗೂ ಮಾತ್ರ, ಆದರೆ, ಜನ ನಮಗೆ ಕೊಟ್ಟ ಸ್ಟಾರ್​ ಉಸಿರು ಇರೋವರೆಗೂ. ಜನಕ್ಕೆ ದುಡ್ಡು ಕೊಟ್ಟು ವೋಟ್​ ಹಾಕಿ ಗೆಲ್ಲೋ ನಿನಗೆ, ನಿಮ್​ ಅಪ್ಪನಿಗೆ ಇಷ್ಟು ಇರಬೇಕಾದರೆ.. ಜನ ನಮಗೆ ದುಡ್​ ಕೊಟ್ಟು ವೋಟ್​ ಹಾಕಿ ಗೆಲ್ಸಿರೋದು ನಮಗೆಷ್ಟ್​ ಇರಬಾರದು. ದಮ್​ ಹೊಡಿತೀಯಾ ಎಂದು ಕೇಳಿದಾಗ, ದಮ್​ ಗುಂಡಿಗೇಲಿದೆ ಬಾಯಿಗೆ ಬೇಡ ಎಂಬಿತ್ಯಾದಿ ಡೈಲಾಗ್​ಗಳು ಇಂಟರೆಸ್ಟಿಂಗ್​ ಆಗಿವೆ.

ಸಿನಿಮಾದಲ್ಲಿ ಡಾಲಿ ಧನಂಜಯ್​ ಖಳನಾಗಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಹೇಗಿರಲಿದೆ ಎಂಬುದಕ್ಕೆ ಸಾಕ್ಷ್ಯ ಸಿಕ್ಕಿದೆ. ಸಿನಿಮಾದಲ್ಲಿ ಡ್ರಗ್​ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಕೂಡ ನಡೆದಿದೆ ಎಂಬುದು ಸೂಕ್ಷ್ಮವಾಗಿ ಗಮನಿಸಿದಾಗ ಗೊತ್ತಾಗುತ್ತದೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಚಿತ್ರ ಯುವರತ್ನ. ಈ ಮೊದಲು ರಿಲೀಸ್​ ಆಗಿರುವ ಸಿನಿಮಾ ಟೀಸರ್​ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾದಲ್ಲಿ ಪುನೀತ್​ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಪುನೀತ್​ಗೆ ಜತೆಯಾಗಿ ಸಯ್ಯೇಶಾ ನಟಿಸಿದ್ದಾರೆ. ಧನಂಜಯ್​ ಹಾಗೂ ಪ್ರಕಾಶ್​ ರಾಜ್​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್​ 1ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ‘ವ್ಯಾಕ್ಸಿನ್​ ಬಂದಮೇಲೂ ಲಾಕ್​ಡೌನ್​ ಮಾಡುವುದು ವಿಪರ್ಯಾಸ’: ಯುವರತ್ನ ನಿರ್ದೇಶಕ ಸಂತೋಷ್ ಆನಂದ್​ರಾಮ್​!

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ