AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಚಿತ್ರಕ್ಕೆ ರೆಡಿ ಆದ ಝೈದ್ ಖಾನ್; ಮತ್ತೊಂದು ವಿಭಿನ್ನ ಪ್ರಯತ್ನ

ಈ ವರ್ಷ ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆಗಿ ಗಮನ ಸೆಳೆಯಿತು. ಈ ಚಿತ್ರಕ್ಕೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಜೊತೆ ಝೈದ್ ಖಾನ್ ಕೈ ಜೋಡಿಸಿದ್ದಾರೆ. ಈ ಚಿತ್ರ ಪ್ರೇಮ ಕಥೆ ಹೊಂದಿರಲಿದೆ ಎನ್ನುವ ಸೂಚನೆ ಪೋಸ್ಟರ್​ನಲ್ಲಿ ಸಿಕ್ಕಿದೆ.

ಎರಡನೇ ಚಿತ್ರಕ್ಕೆ ರೆಡಿ ಆದ ಝೈದ್ ಖಾನ್; ಮತ್ತೊಂದು ವಿಭಿನ್ನ ಪ್ರಯತ್ನ
ಝೈದ್ ಖಾನ್
ರಾಜೇಶ್ ದುಗ್ಗುಮನೆ
|

Updated on: Mar 21, 2024 | 11:20 AM

Share

ಕಾಂಗ್ರೆಸ್ ನಾಯಕ ಹಾಗೂ ಸಚಿವ ಜಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ (Zaid Khan) ಅವರು ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಬನಾರಸ್’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಟೈಮ್ ಟ್ರಾವೆಲ್ ಕಾನ್ಸೆಪ್ಟ್ ಆಧರಿಸಿ ಈ ಸಿನಿಮಾ ಮೂಡಿ ಬಂದಿತ್ತು. ಈಗ ಅವರ ಎರಡನೇ ಸಿನಿಮಾ ಬಗ್ಗೆ ಇತ್ತೀಚೆಗೆ ಅಪ್​ಡೇಟ್ ಸಿಕ್ಕಿತ್ತು. ಈ ಚಿತ್ರದ ಹೊಸ ಪೋಸ್ಟರ್ ಗಮನ ಸೆಳೆದಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ZK -02’ ಎಂದು ಶೀರ್ಷಿಕೆ ಇಡಲಾಗಿದೆ.

ಈ ವರ್ಷ ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆಗಿ ಗಮನ ಸೆಳೆಯಿತು. ಈ ಚಿತ್ರಕ್ಕೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಜೊತೆ ಝೈದ್ ಖಾನ್ ಕೈ ಜೋಡಿಸಿದ್ದಾರೆ. ಈ ಚಿತ್ರ ಪ್ರೇಮ ಕಥೆ ಹೊಂದಿರಲಿದೆ ಎನ್ನುವ ಸೂಚನೆ ಪೋಸ್ಟರ್​ನಲ್ಲಿ ಸಿಕ್ಕಿದೆ. ಪೋಸ್ಟರ್​ನಲ್ಲಿ ಮದ್ಯದ ಬಾಟಲಿ ಇದೆ. ಬೆಂಚ್ ಹಿಂಭಾಗದಲ್ಲಿ ‘ಬ್ಲಡಿ ಲವ್’ ಎಂದು ಬರೆಯಲಾಗಿದೆ. ಝೈದ್ ಖಾನ್ ಅವರು ಬೆನ್ನು ತೋರಿಸಿ ಕುಳಿತಿದ್ದಾರೆ. ಎದುರು ಭಾಗದಲ್ಲಿ ಹುಡುಗಿಯೊಬ್ಬಳ ಫೋಟೋ ಇದೆ. ಸದ್ಯದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ‌.

View this post on Instagram

A post shared by Zaid Khan (@urszaidkhan)

ಝೈದ್ ಖಾನ್ ಹೀರೋ ನಟಿಸುತ್ತಿರುವ ಎರಡನೇ ಸಿನಿಮಾ ಇದು. ಆಶ್ರಿತ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಅನಿಲ್ ಕುಮಾರ್ ಅವರು ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಜೆ.ಎಸ್ ವಾಲಿ ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ, ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಸಿನಿಮಾಗೆ ಇದೆ.

ಇದನ್ನೂ ಓದಿ: ಝೈದ್ ಖಾನ್​ಗೆ ಆಕ್ಷನ್-ಕಟ್ ಹೇಳಲಿರುವ ‘ಉಪಾಧ್ಯಕ್ಷ’ ನಿರ್ದೇಶಕ

ಝೈದ್ ಖಾನ್ ಅವರ ಮೊದಲ ಸಿನಿಮಾ ‘ಬನಾರಸ್’ಗೆ ಸೋನಲ್ ಮೊಂತೆರೋ ನಾಯಕಿ ಆಗಿದ್ದರು. ಜಯತೀರ್ಥ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ 2022ರ ನವೆಂಬರ್ 4ರಂದು ರಿಲೀಸ್ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ