AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಚಿತ್ರಕ್ಕೆ ರೆಡಿ ಆದ ಝೈದ್ ಖಾನ್; ಮತ್ತೊಂದು ವಿಭಿನ್ನ ಪ್ರಯತ್ನ

ಈ ವರ್ಷ ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆಗಿ ಗಮನ ಸೆಳೆಯಿತು. ಈ ಚಿತ್ರಕ್ಕೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಜೊತೆ ಝೈದ್ ಖಾನ್ ಕೈ ಜೋಡಿಸಿದ್ದಾರೆ. ಈ ಚಿತ್ರ ಪ್ರೇಮ ಕಥೆ ಹೊಂದಿರಲಿದೆ ಎನ್ನುವ ಸೂಚನೆ ಪೋಸ್ಟರ್​ನಲ್ಲಿ ಸಿಕ್ಕಿದೆ.

ಎರಡನೇ ಚಿತ್ರಕ್ಕೆ ರೆಡಿ ಆದ ಝೈದ್ ಖಾನ್; ಮತ್ತೊಂದು ವಿಭಿನ್ನ ಪ್ರಯತ್ನ
ಝೈದ್ ಖಾನ್
ರಾಜೇಶ್ ದುಗ್ಗುಮನೆ
|

Updated on: Mar 21, 2024 | 11:20 AM

Share

ಕಾಂಗ್ರೆಸ್ ನಾಯಕ ಹಾಗೂ ಸಚಿವ ಜಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ (Zaid Khan) ಅವರು ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಬನಾರಸ್’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಟೈಮ್ ಟ್ರಾವೆಲ್ ಕಾನ್ಸೆಪ್ಟ್ ಆಧರಿಸಿ ಈ ಸಿನಿಮಾ ಮೂಡಿ ಬಂದಿತ್ತು. ಈಗ ಅವರ ಎರಡನೇ ಸಿನಿಮಾ ಬಗ್ಗೆ ಇತ್ತೀಚೆಗೆ ಅಪ್​ಡೇಟ್ ಸಿಕ್ಕಿತ್ತು. ಈ ಚಿತ್ರದ ಹೊಸ ಪೋಸ್ಟರ್ ಗಮನ ಸೆಳೆದಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ZK -02’ ಎಂದು ಶೀರ್ಷಿಕೆ ಇಡಲಾಗಿದೆ.

ಈ ವರ್ಷ ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆಗಿ ಗಮನ ಸೆಳೆಯಿತು. ಈ ಚಿತ್ರಕ್ಕೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಅವರ ಜೊತೆ ಝೈದ್ ಖಾನ್ ಕೈ ಜೋಡಿಸಿದ್ದಾರೆ. ಈ ಚಿತ್ರ ಪ್ರೇಮ ಕಥೆ ಹೊಂದಿರಲಿದೆ ಎನ್ನುವ ಸೂಚನೆ ಪೋಸ್ಟರ್​ನಲ್ಲಿ ಸಿಕ್ಕಿದೆ. ಪೋಸ್ಟರ್​ನಲ್ಲಿ ಮದ್ಯದ ಬಾಟಲಿ ಇದೆ. ಬೆಂಚ್ ಹಿಂಭಾಗದಲ್ಲಿ ‘ಬ್ಲಡಿ ಲವ್’ ಎಂದು ಬರೆಯಲಾಗಿದೆ. ಝೈದ್ ಖಾನ್ ಅವರು ಬೆನ್ನು ತೋರಿಸಿ ಕುಳಿತಿದ್ದಾರೆ. ಎದುರು ಭಾಗದಲ್ಲಿ ಹುಡುಗಿಯೊಬ್ಬಳ ಫೋಟೋ ಇದೆ. ಸದ್ಯದಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ‌.

View this post on Instagram

A post shared by Zaid Khan (@urszaidkhan)

ಝೈದ್ ಖಾನ್ ಹೀರೋ ನಟಿಸುತ್ತಿರುವ ಎರಡನೇ ಸಿನಿಮಾ ಇದು. ಆಶ್ರಿತ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಅನಿಲ್ ಕುಮಾರ್ ಅವರು ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಜೆ.ಎಸ್ ವಾಲಿ ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ, ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಸಿನಿಮಾಗೆ ಇದೆ.

ಇದನ್ನೂ ಓದಿ: ಝೈದ್ ಖಾನ್​ಗೆ ಆಕ್ಷನ್-ಕಟ್ ಹೇಳಲಿರುವ ‘ಉಪಾಧ್ಯಕ್ಷ’ ನಿರ್ದೇಶಕ

ಝೈದ್ ಖಾನ್ ಅವರ ಮೊದಲ ಸಿನಿಮಾ ‘ಬನಾರಸ್’ಗೆ ಸೋನಲ್ ಮೊಂತೆರೋ ನಾಯಕಿ ಆಗಿದ್ದರು. ಜಯತೀರ್ಥ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ 2022ರ ನವೆಂಬರ್ 4ರಂದು ರಿಲೀಸ್ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್