AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಸಮಾಧಿ ಬಳಿ ಶಾಸಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್

ಪುನೀತ್ ರಾಜ್​ಕುಮಾರ್ ಸಮಾಧಿಗೆ ನಮನ ಸಲ್ಲಿಸಿ ಬನಾರಸ್ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿದೆ. ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್ ಅನ್ನು ಪುನೀತ್ ರಾಜ್​ಕುಮಾರ್ ಮಾಡಬೇಕಿತ್ತು.

ಅಪ್ಪು ಸಮಾಧಿ ಬಳಿ ಶಾಸಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್
ಅಪ್ಪು ಸಮಾಧಿ ಬಳಿ ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್ ಆಗಿದೆ
TV9 Web
| Edited By: |

Updated on:Nov 17, 2021 | 12:52 PM

Share

ಬೆಂಗಳೂರು: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ನಟಿಸಿರುವ ಬನಾರಸ್ ಸಿನಿಮಾದ ಪೊಸ್ಟರ್ ಲಾಂಚ್ ಆಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಚಿತ್ರತಂಡ ಪೋಸ್ಟರ್ ಲಾಂಚ್ ಮಾಡಿದೆ. ಜಮೀರ್ ಪುತ್ರ ಝೈದ್ ಖಾನ್ ಬನಾರಸ್ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಟ್ಟಿದ್ದು, ಈ ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದಾರೆ. ಚಿತ್ರದ ನಾಯಕಿಯಾಗಿ ಸೋನಲ್ ಮಂಥಾರಿಯಾ ನಟಿಸಿದ್ದಾರೆ. ಇಂದು (ನ.17) ಅಪ್ಪು ಸಮಾಧಿಗೆ ಹೂವಿನ ಹಾರ ಹಾಕಿ, ಪೋಟೋಗೆ ಪೂಜೆ ಸಲ್ಲಿಸಿ ಸಿನಿಮಾದ ಪೋಸ್ಟರ್​ನ ಲಾಂಚ್ ಮಾಡಿದ್ದಾರೆ.

ಪುನೀತ್ ರಾಜ್​ಕುಮಾರ್ ಸಮಾಧಿಗೆ ನಮನ ಸಲ್ಲಿಸಿ ಬನಾರಸ್ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿದೆ. ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್ ಅನ್ನು ಪುನೀತ್ ರಾಜ್​ಕುಮಾರ್ ಮಾಡಬೇಕಿತ್ತು. ಆದರೆ ಅಪ್ಪು ಆಗಲಿಕೆ ಕಾರಣದಿಂದ ಇದು ಸಾಧ್ಯವಾಗಿಲ್ಲ. ಇದೀಗ ಅಪ್ಪು ಅಗಲಿಕೆಯ ನಂತರ ಸಮಾಧಿ ಬಳಿ ಪೋಸ್ಟರ್ ಲಾಂಚ್ ಮಾಡಲಾಗಿದೆ. ಪೊಸ್ಟರ್ ಲಾಂಚ್​ನಲ್ಲಿ ನಿರ್ದೇಶಕ ಜಯತೀರ್ತ, ನಿರ್ದೇಶಕ ಎ ಹರ್ಷ, ಹಾಸ್ಯ ನಟ ಸುಜಯ್ ಶಾಸ್ತ್ರಿ ಭಾಗಿಯಾಗಿದ್ದರು.

‘ಬೆಲ್​ ಬಾಟಂ’ ಸಿನಿಮಾ ಮೂಲಕ ದೊಡ್ಡ ಗೆಲುವು ಪಡೆದ ನಿರ್ದೇಶಕ ಜಯತೀರ್ಥ ಅವರು ‘ಬನಾರಸ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪ್ರತಿಷ್ಠಿತ ಲಹರಿ ಮ್ಯೂಸಿಕ್​, ಟಿ-ಸಿರೀಸ್​ ಸಂಸ್ಥೆಗಳು ಜಂಟಿಯಾಗಿ ‘ಬನಾರಸ್​’ ಚಿತ್ರದ ಆಡಿಯೋ ಹಕ್ಕುಗಳನ್ನು ದಾಖಲೆ ಮೊತ್ತಕ್ಕೆ ಖರೀದಿ ಮಾಡಿವೆ. ಇದು ಝೈದ್​ ಖಾನ್​ ಪಾಲಿಗೆ ಹೆಮ್ಮ ತರುವಂಥ ವಿಚಾರವಾಗಿದೆ.

ಬಹುಪಾಲು ಚಿತ್ರೀಕರಣ ಕಾಶಿಯಲ್ಲಿ ನಡೆದಿದೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ಮುಡಿಬರಲಿದೆ. ಎಲ್ಲ ಭಾಷೆಯ ಆಡಿಯೋ ಹಕ್ಕುಗಳು ಸೇಲ್​ ಆಗಿವೆ. ‘ಬನಾರಸ್​’ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ

Suriya: ನಟ ಸೂರ್ಯ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ; ಕಾರಣವೇನು? ಇಲ್ಲಿದೆ ಮಾಹಿತಿ

ಬೊಂಬೆ ಹೇಳುತೈತೆ ಹಾಡಿನ ಮುಖಾಂತರ ಪುನೀತ್​ಗೆ ನಮನ ಸಲ್ಲಿಸಿದ 50ಕ್ಕೂ ಹೆಚ್ಚು ಪುಟಾಣಿಗಳು; ವಿಡಿಯೋ ನೋಡಿ

Published On - 12:36 pm, Wed, 17 November 21

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ