AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಸಮಾಧಿ ಬಳಿ ಶಾಸಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್

ಪುನೀತ್ ರಾಜ್​ಕುಮಾರ್ ಸಮಾಧಿಗೆ ನಮನ ಸಲ್ಲಿಸಿ ಬನಾರಸ್ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿದೆ. ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್ ಅನ್ನು ಪುನೀತ್ ರಾಜ್​ಕುಮಾರ್ ಮಾಡಬೇಕಿತ್ತು.

ಅಪ್ಪು ಸಮಾಧಿ ಬಳಿ ಶಾಸಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್
ಅಪ್ಪು ಸಮಾಧಿ ಬಳಿ ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್ ಆಗಿದೆ
TV9 Web
| Edited By: sandhya thejappa|

Updated on:Nov 17, 2021 | 12:52 PM

Share

ಬೆಂಗಳೂರು: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ನಟಿಸಿರುವ ಬನಾರಸ್ ಸಿನಿಮಾದ ಪೊಸ್ಟರ್ ಲಾಂಚ್ ಆಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಚಿತ್ರತಂಡ ಪೋಸ್ಟರ್ ಲಾಂಚ್ ಮಾಡಿದೆ. ಜಮೀರ್ ಪುತ್ರ ಝೈದ್ ಖಾನ್ ಬನಾರಸ್ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಟ್ಟಿದ್ದು, ಈ ಚಿತ್ರವನ್ನು ಜಯತೀರ್ಥ ನಿರ್ದೇಶಿಸಿದ್ದಾರೆ. ಚಿತ್ರದ ನಾಯಕಿಯಾಗಿ ಸೋನಲ್ ಮಂಥಾರಿಯಾ ನಟಿಸಿದ್ದಾರೆ. ಇಂದು (ನ.17) ಅಪ್ಪು ಸಮಾಧಿಗೆ ಹೂವಿನ ಹಾರ ಹಾಕಿ, ಪೋಟೋಗೆ ಪೂಜೆ ಸಲ್ಲಿಸಿ ಸಿನಿಮಾದ ಪೋಸ್ಟರ್​ನ ಲಾಂಚ್ ಮಾಡಿದ್ದಾರೆ.

ಪುನೀತ್ ರಾಜ್​ಕುಮಾರ್ ಸಮಾಧಿಗೆ ನಮನ ಸಲ್ಲಿಸಿ ಬನಾರಸ್ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿದೆ. ಬನಾರಸ್ ಸಿನಿಮಾದ ಪೋಸ್ಟರ್ ಲಾಂಚ್ ಅನ್ನು ಪುನೀತ್ ರಾಜ್​ಕುಮಾರ್ ಮಾಡಬೇಕಿತ್ತು. ಆದರೆ ಅಪ್ಪು ಆಗಲಿಕೆ ಕಾರಣದಿಂದ ಇದು ಸಾಧ್ಯವಾಗಿಲ್ಲ. ಇದೀಗ ಅಪ್ಪು ಅಗಲಿಕೆಯ ನಂತರ ಸಮಾಧಿ ಬಳಿ ಪೋಸ್ಟರ್ ಲಾಂಚ್ ಮಾಡಲಾಗಿದೆ. ಪೊಸ್ಟರ್ ಲಾಂಚ್​ನಲ್ಲಿ ನಿರ್ದೇಶಕ ಜಯತೀರ್ತ, ನಿರ್ದೇಶಕ ಎ ಹರ್ಷ, ಹಾಸ್ಯ ನಟ ಸುಜಯ್ ಶಾಸ್ತ್ರಿ ಭಾಗಿಯಾಗಿದ್ದರು.

‘ಬೆಲ್​ ಬಾಟಂ’ ಸಿನಿಮಾ ಮೂಲಕ ದೊಡ್ಡ ಗೆಲುವು ಪಡೆದ ನಿರ್ದೇಶಕ ಜಯತೀರ್ಥ ಅವರು ‘ಬನಾರಸ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪ್ರತಿಷ್ಠಿತ ಲಹರಿ ಮ್ಯೂಸಿಕ್​, ಟಿ-ಸಿರೀಸ್​ ಸಂಸ್ಥೆಗಳು ಜಂಟಿಯಾಗಿ ‘ಬನಾರಸ್​’ ಚಿತ್ರದ ಆಡಿಯೋ ಹಕ್ಕುಗಳನ್ನು ದಾಖಲೆ ಮೊತ್ತಕ್ಕೆ ಖರೀದಿ ಮಾಡಿವೆ. ಇದು ಝೈದ್​ ಖಾನ್​ ಪಾಲಿಗೆ ಹೆಮ್ಮ ತರುವಂಥ ವಿಚಾರವಾಗಿದೆ.

ಬಹುಪಾಲು ಚಿತ್ರೀಕರಣ ಕಾಶಿಯಲ್ಲಿ ನಡೆದಿದೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ಮುಡಿಬರಲಿದೆ. ಎಲ್ಲ ಭಾಷೆಯ ಆಡಿಯೋ ಹಕ್ಕುಗಳು ಸೇಲ್​ ಆಗಿವೆ. ‘ಬನಾರಸ್​’ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ

Suriya: ನಟ ಸೂರ್ಯ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ; ಕಾರಣವೇನು? ಇಲ್ಲಿದೆ ಮಾಹಿತಿ

ಬೊಂಬೆ ಹೇಳುತೈತೆ ಹಾಡಿನ ಮುಖಾಂತರ ಪುನೀತ್​ಗೆ ನಮನ ಸಲ್ಲಿಸಿದ 50ಕ್ಕೂ ಹೆಚ್ಚು ಪುಟಾಣಿಗಳು; ವಿಡಿಯೋ ನೋಡಿ

Published On - 12:36 pm, Wed, 17 November 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್