AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹಮದ್​ ಪುತ್ರ ಝೈದ್​ ಖಾನ್​ ದಾಖಲೆ; ಭಾರಿ ಮೊತ್ತಕ್ಕೆ ಲಹರಿ, ಟಿ ಸಿರೀಸ್​ ಪಾಲಾಯ್ತು ‘ಬನಾರಸ್​’ ಆಡಿಯೋ

ಸ್ಟಾರ್​ ನಟರ, ದೊಡ್ಡ ಬ್ಯಾನರ್​ ಸಿನಿಮಾಗಳ ಆಡಿಯೋ ಹಕ್ಕುಗಳನ್ನು ಕೋಟ್ಯಂತರ ರೂಪಾಯಿಗೆ ಖರೀದಿ ಮಾಡುವುದು ಸಹಜ. ಆದರೆ ಓರ್ವ ಹೊಸ ಹೀರೋ ನಟಿಸಿರುವ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತ ನೀಡಿರುವುದು ಇದೇ ಮೊದಲು ಎನ್ನಲಾಗುತ್ತಿದೆ.

ಶಾಸಕ ಜಮೀರ್ ಅಹಮದ್​ ಪುತ್ರ ಝೈದ್​ ಖಾನ್​ ದಾಖಲೆ; ಭಾರಿ ಮೊತ್ತಕ್ಕೆ ಲಹರಿ, ಟಿ ಸಿರೀಸ್​ ಪಾಲಾಯ್ತು ‘ಬನಾರಸ್​’ ಆಡಿಯೋ
ಸೋನಲ್ ಮಾಂಥೆರೋ, ಝೈದ್ ಖಾನ್
TV9 Web
| Edited By: ಸಾಧು ಶ್ರೀನಾಥ್​|

Updated on:Oct 26, 2021 | 1:38 PM

Share

ಶಾಸಕ ಜಮೀರ್​ ಅಹ್ಮದ್​ ಖಾನ್​ ಅವರ ಪುತ್ರ ಝೈದ್​ ಖಾನ್​ ನಟಿಸಿರುವ ಮೊದಲ ಸಿನಿಮಾ ‘ಬನಾರಸ್​’ ಅನೇಕ ಕಾರಣಗಳಿಂದ ಸದ್ದು ಮಾಡುತ್ತಿದೆ. ‘ಬೆಲ್​ ಬಾಟಂ’ ಸಿನಿಮಾ ಮೂಲಕ ದೊಡ್ಡ ಗೆಲುವು ಪಡೆದ ನಿರ್ದೇಶಕ ಜಯತೀರ್ಥ ಅವರು ‘ಬನಾರಸ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಬಹುತೇಕ ಕೆಲಸಗಳು ಮುಗಿದಿದ್ದು, ಈಗ ಆಡಿಯೋ ರಿಲೀಸ್​ಗೆ ಸಿದ್ಧತೆ ನಡೆಯುತ್ತಿದೆ. ಪ್ರತಿಷ್ಠಿತ ಲಹರಿ ಮ್ಯೂಸಿಕ್​, ಟಿ-ಸಿರೀಸ್​ ಸಂಸ್ಥೆಗಳು ಜಂಟಿಯಾಗಿ ‘ಬನಾರಸ್​’ ಚಿತ್ರದ ಆಡಿಯೋ ಹಕ್ಕುಗಳನ್ನು ದಾಖಲೆ ಮೊತ್ತಕ್ಕೆ ಖರೀದಿ ಮಾಡಿವೆ. ಇದು ಝೈದ್​ ಖಾನ್​ ಪಾಲಿಗೆ ಹೆಮ್ಮ ತರುವಂಥ ವಿಚಾರವಾಗಿದೆ.

ಸ್ಟಾರ್​ ನಟರ ಅಥವಾ ದೊಡ್ಡ ಬ್ಯಾನರ್​ ಸಿನಿಮಾಗಳ ಆಡಿಯೋ ಹಕ್ಕುಗಳನ್ನು ಕೋಟ್ಯಂತರ ರೂಪಾಯಿ ಕೊಟ್ಟು ಖರೀದಿ ಮಾಡುವುದು ಸಹಜ. ಆದರೆ ಓರ್ವ ಹೊಸ ಹೀರೋ ನಟಿಸಿರುವ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತ ನೀಡಿರುವುದು ಇದೇ ಮೊದಲ ಎನ್ನಲಾಗುತ್ತಿದೆ. ಆ ಮೊತ್ತ ಎಷ್ಟು ಎಂಬುದನ್ನು ಲಹರಿ ಸಂಸ್ಥೆ ಬಹಿರಂಗಪಡಿಸಿಲ್ಲ. ಒಟ್ಟಿನಲ್ಲಿ ಝೈದ್​ ಖಾನ್​ ಚೊಚ್ಚಲ ಚಿತ್ರದಲ್ಲೇ ದಾಖಲೆ ಬರೆದಿರುವುದು ಗಮನಾರ್ಹ ಸಂಗತಿ ಎನ್ನುತ್ತಿದೆ ಚಿತ್ರತಂಡ. ಈ ಚಿತ್ರದ ಆಡಿಯೋ ಹಕ್ಕುಗಳು ಖರೀದಿಸಿರುವುದಕ್ಕೆ ಸಂತಸ ಇದೆ ಎಂದಿದೆ ಲಹರಿ ಸಂಸ್ಥೆ.

‘ಬನಾರಸ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಝೈದ್​ ಖಾನ್​ ಗ್ರ್ಯಾಂಡ್​ ಎಂಟ್ರಿ ನೀಡಲಿದ್ದಾರೆ. ಅವರಿಗೆ ಜೋಡಿಯಾಗಿ ಸೋನಲ್​ ಮಾಂಥೆರೋ ನಟಿಸಿದ್ದಾರೆ. ಬಹುಪಾಲು ಚಿತ್ರೀಕರಣ ಕಾಶಿಯಲ್ಲಿ ನಡೆದಿದೆ. ‘ಒಲವೇ ಮಂದಾರ’ ಚಿತ್ರದಿಂದ ‘ಬೆಲ್​ ಬಾಟಂ’ ಸಿನಿಮಾದವರೆಗೆ ಪ್ರತಿ ಬಾರಿಯೂ ವಿಶೇಷ ಕಥಾಹಂದರವನ್ನು ಜನರ ಮುಂದೆ ಪ್ರಸ್ತುತ ಪಡಿಸುತ್ತಿರುವ ಜಯತೀರ್ಥ ಅವರು ಈಗ ‘ಬನಾರಸ್​’ ಮೂಲಕ ಯಾವ ಕಥೆಯನ್ನು ಹೇಳಲಿದ್ದಾರೆ ಎಂಬ ಕುತೂಹಲ ಮೂಡಿದೆ.

ಕನ್ನಡ, ತೆಲುಗು, ತಮಿಳು ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ಮುಡಿಬರಲಿದೆ. ಎಲ್ಲ ಭಾಷೆಯ ಆಡಿಯೋ ಹಕ್ಕುಗಳು ಸೇಲ್​ ಆಗಿವೆ. ‘ಬನಾರಸ್​’ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ:

Salaga: ನಿರೀಕ್ಷೆಗೂ ಮೀರಿ ‘ಸಲಗ’ ಸಕ್ಸಸ್​; ಹಾಗಾದ್ರೆ ಈವರೆಗಿನ ಕಲೆಕ್ಷನ್​ ಲೆಕ್ಕ ಹೇಳೋರು ಯಾರು?

ಉಪೇಂದ್ರ ಬಗ್ಗೆ ‘ಕೋಟಿಗೊಬ್ಬ 3’ ವೇದಿಕೆಯಲ್ಲಿ ಸುದೀಪ್​ ಮಾತು; ಉಪ್ಪಿ ಅಂದ್ರೆ ಸ್ಫೂರ್ತಿಯ ಕಿಚ್ಚು

Published On - 1:21 pm, Tue, 26 October 21

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ