AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹಮದ್​ ಪುತ್ರ ಝೈದ್​ ಖಾನ್​ ದಾಖಲೆ; ಭಾರಿ ಮೊತ್ತಕ್ಕೆ ಲಹರಿ, ಟಿ ಸಿರೀಸ್​ ಪಾಲಾಯ್ತು ‘ಬನಾರಸ್​’ ಆಡಿಯೋ

ಸ್ಟಾರ್​ ನಟರ, ದೊಡ್ಡ ಬ್ಯಾನರ್​ ಸಿನಿಮಾಗಳ ಆಡಿಯೋ ಹಕ್ಕುಗಳನ್ನು ಕೋಟ್ಯಂತರ ರೂಪಾಯಿಗೆ ಖರೀದಿ ಮಾಡುವುದು ಸಹಜ. ಆದರೆ ಓರ್ವ ಹೊಸ ಹೀರೋ ನಟಿಸಿರುವ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತ ನೀಡಿರುವುದು ಇದೇ ಮೊದಲು ಎನ್ನಲಾಗುತ್ತಿದೆ.

ಶಾಸಕ ಜಮೀರ್ ಅಹಮದ್​ ಪುತ್ರ ಝೈದ್​ ಖಾನ್​ ದಾಖಲೆ; ಭಾರಿ ಮೊತ್ತಕ್ಕೆ ಲಹರಿ, ಟಿ ಸಿರೀಸ್​ ಪಾಲಾಯ್ತು ‘ಬನಾರಸ್​’ ಆಡಿಯೋ
ಸೋನಲ್ ಮಾಂಥೆರೋ, ಝೈದ್ ಖಾನ್
TV9 Web
| Updated By: ಸಾಧು ಶ್ರೀನಾಥ್​|

Updated on:Oct 26, 2021 | 1:38 PM

Share

ಶಾಸಕ ಜಮೀರ್​ ಅಹ್ಮದ್​ ಖಾನ್​ ಅವರ ಪುತ್ರ ಝೈದ್​ ಖಾನ್​ ನಟಿಸಿರುವ ಮೊದಲ ಸಿನಿಮಾ ‘ಬನಾರಸ್​’ ಅನೇಕ ಕಾರಣಗಳಿಂದ ಸದ್ದು ಮಾಡುತ್ತಿದೆ. ‘ಬೆಲ್​ ಬಾಟಂ’ ಸಿನಿಮಾ ಮೂಲಕ ದೊಡ್ಡ ಗೆಲುವು ಪಡೆದ ನಿರ್ದೇಶಕ ಜಯತೀರ್ಥ ಅವರು ‘ಬನಾರಸ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಬಹುತೇಕ ಕೆಲಸಗಳು ಮುಗಿದಿದ್ದು, ಈಗ ಆಡಿಯೋ ರಿಲೀಸ್​ಗೆ ಸಿದ್ಧತೆ ನಡೆಯುತ್ತಿದೆ. ಪ್ರತಿಷ್ಠಿತ ಲಹರಿ ಮ್ಯೂಸಿಕ್​, ಟಿ-ಸಿರೀಸ್​ ಸಂಸ್ಥೆಗಳು ಜಂಟಿಯಾಗಿ ‘ಬನಾರಸ್​’ ಚಿತ್ರದ ಆಡಿಯೋ ಹಕ್ಕುಗಳನ್ನು ದಾಖಲೆ ಮೊತ್ತಕ್ಕೆ ಖರೀದಿ ಮಾಡಿವೆ. ಇದು ಝೈದ್​ ಖಾನ್​ ಪಾಲಿಗೆ ಹೆಮ್ಮ ತರುವಂಥ ವಿಚಾರವಾಗಿದೆ.

ಸ್ಟಾರ್​ ನಟರ ಅಥವಾ ದೊಡ್ಡ ಬ್ಯಾನರ್​ ಸಿನಿಮಾಗಳ ಆಡಿಯೋ ಹಕ್ಕುಗಳನ್ನು ಕೋಟ್ಯಂತರ ರೂಪಾಯಿ ಕೊಟ್ಟು ಖರೀದಿ ಮಾಡುವುದು ಸಹಜ. ಆದರೆ ಓರ್ವ ಹೊಸ ಹೀರೋ ನಟಿಸಿರುವ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತ ನೀಡಿರುವುದು ಇದೇ ಮೊದಲ ಎನ್ನಲಾಗುತ್ತಿದೆ. ಆ ಮೊತ್ತ ಎಷ್ಟು ಎಂಬುದನ್ನು ಲಹರಿ ಸಂಸ್ಥೆ ಬಹಿರಂಗಪಡಿಸಿಲ್ಲ. ಒಟ್ಟಿನಲ್ಲಿ ಝೈದ್​ ಖಾನ್​ ಚೊಚ್ಚಲ ಚಿತ್ರದಲ್ಲೇ ದಾಖಲೆ ಬರೆದಿರುವುದು ಗಮನಾರ್ಹ ಸಂಗತಿ ಎನ್ನುತ್ತಿದೆ ಚಿತ್ರತಂಡ. ಈ ಚಿತ್ರದ ಆಡಿಯೋ ಹಕ್ಕುಗಳು ಖರೀದಿಸಿರುವುದಕ್ಕೆ ಸಂತಸ ಇದೆ ಎಂದಿದೆ ಲಹರಿ ಸಂಸ್ಥೆ.

‘ಬನಾರಸ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಝೈದ್​ ಖಾನ್​ ಗ್ರ್ಯಾಂಡ್​ ಎಂಟ್ರಿ ನೀಡಲಿದ್ದಾರೆ. ಅವರಿಗೆ ಜೋಡಿಯಾಗಿ ಸೋನಲ್​ ಮಾಂಥೆರೋ ನಟಿಸಿದ್ದಾರೆ. ಬಹುಪಾಲು ಚಿತ್ರೀಕರಣ ಕಾಶಿಯಲ್ಲಿ ನಡೆದಿದೆ. ‘ಒಲವೇ ಮಂದಾರ’ ಚಿತ್ರದಿಂದ ‘ಬೆಲ್​ ಬಾಟಂ’ ಸಿನಿಮಾದವರೆಗೆ ಪ್ರತಿ ಬಾರಿಯೂ ವಿಶೇಷ ಕಥಾಹಂದರವನ್ನು ಜನರ ಮುಂದೆ ಪ್ರಸ್ತುತ ಪಡಿಸುತ್ತಿರುವ ಜಯತೀರ್ಥ ಅವರು ಈಗ ‘ಬನಾರಸ್​’ ಮೂಲಕ ಯಾವ ಕಥೆಯನ್ನು ಹೇಳಲಿದ್ದಾರೆ ಎಂಬ ಕುತೂಹಲ ಮೂಡಿದೆ.

ಕನ್ನಡ, ತೆಲುಗು, ತಮಿಳು ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ಮುಡಿಬರಲಿದೆ. ಎಲ್ಲ ಭಾಷೆಯ ಆಡಿಯೋ ಹಕ್ಕುಗಳು ಸೇಲ್​ ಆಗಿವೆ. ‘ಬನಾರಸ್​’ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ:

Salaga: ನಿರೀಕ್ಷೆಗೂ ಮೀರಿ ‘ಸಲಗ’ ಸಕ್ಸಸ್​; ಹಾಗಾದ್ರೆ ಈವರೆಗಿನ ಕಲೆಕ್ಷನ್​ ಲೆಕ್ಕ ಹೇಳೋರು ಯಾರು?

ಉಪೇಂದ್ರ ಬಗ್ಗೆ ‘ಕೋಟಿಗೊಬ್ಬ 3’ ವೇದಿಕೆಯಲ್ಲಿ ಸುದೀಪ್​ ಮಾತು; ಉಪ್ಪಿ ಅಂದ್ರೆ ಸ್ಫೂರ್ತಿಯ ಕಿಚ್ಚು

Published On - 1:21 pm, Tue, 26 October 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ