AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್ ರೋಣ’ ಸಿನಿಮಾ ವಿತರಣೆಗೆ ಮುಂದೆಬಂದ ಸಂಸ್ಥೆಗಳಿವು; ಇಲ್ಲಿದೆ ಮಾಹಿತಿ

ಸುದೀಪ್​ಗೆ ಪರಭಾಷೆಯಲ್ಲೂ ಅಭಿಮಾನಿಗಳು ಇದ್ದಾರೆ. ಈಗಾಗಲೇ ಹಿಂದಿ, ತೆಲುಗು ಭಾಷೆಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೂ ಹಲವು ದೊಡ್ಡ ನಿರ್ಮಾಣ ಸಂಸ್ಥೆಗಳು ‘ವಿಕ್ರಾಂತ್ ರೋಣ’ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿವೆ.

‘ವಿಕ್ರಾಂತ್ ರೋಣ’ ಸಿನಿಮಾ ವಿತರಣೆಗೆ ಮುಂದೆಬಂದ ಸಂಸ್ಥೆಗಳಿವು; ಇಲ್ಲಿದೆ ಮಾಹಿತಿ
ಸುದೀಪ್
TV9 Web
| Edited By: |

Updated on:Jul 14, 2022 | 9:21 PM

Share

‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ಸಾಕಷ್ಟು ಹೈಪ್ ಸೃಷ್ಟಿ ಮಾಡಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಚಿತ್ರ ರಿಲೀಸ್ ಆಗುತ್ತಿದೆ. ಈ ಸಿನಿಮಾ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾ 3ಡಿಯಲ್ಲಿ ತೆರೆಗೆ ಬರುತ್ತಿದೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಅನೂಪ್ ಭಂಡಾರಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ, ತಮಿಳು, ತೆಲುಗು ಮೊದಲಾದ ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ವಿಶೇಷ ಎಂದರೆ ಪರಭಾಷೆಯಲ್ಲಿ ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಈ ಚಿತ್ರವನ್ನು ಬಿಡುಗಡೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದೆ. ತಮಿಳಿನಲ್ಲಿ ಈ ಚಿತ್ರವನ್ನು ಜೀ ಸ್ಟುಡಿಯೋಸ್ (Zee Studios) ವಿತರಣೆ ಮಾಡಲು ಮುಂದೆ ಬಂದಿದ್ದು, ಚಿತ್ರಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಿದೆ.

ಸುದೀಪ್​ಗೆ ಪರಭಾಷೆಯಲ್ಲೂ ಅಭಿಮಾನಿಗಳು ಇದ್ದಾರೆ. ಈಗಾಗಲೇ ಹಿಂದಿ, ತೆಲುಗು ಭಾಷೆಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೂ ಹಲವು ದೊಡ್ಡ ನಿರ್ಮಾಣ ಸಂಸ್ಥೆಗಳು ‘ವಿಕ್ರಾಂತ್ ರೋಣ’ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿವೆ. ಈ ವಿಚಾರ ಕೇಳಿ ಸುದೀಪ್ ಫ್ಯಾನ್ಸ್ ಸಖತ್ ಖುಷಿ ಪಟ್ಟಿದ್ದಾರೆ.

ಇದನ್ನೂ ಓದಿ
Image
Kichcha Sudeep: ಕಿಚ್ಚ ಸುದೀಪ್​ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿದ ವ್ಯಕ್ತಿ ವಿರುದ್ಧ ನಿರ್ದೇಶಕ ನಂದ ಕಿಶೋರ್​ ಆಕ್ರೋಶ
Image
ಕಿಚ್ಚ ಸುದೀಪ್​ಗೆ ಸಿಕ್ತು ಮತ್ತೊಂದು ಬ್ಯಾಟ್ ಗಿಫ್ಟ್​; ಇದರಲ್ಲಿದೆ ಹಲವು ದಿಗ್ಗಜರ ಆಟೋಗ್ರಾಫ್​
Image
‘ವಿಕ್ರಾಂತ್ ರೋಣ’ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಿಂಚಿದ ಸುದೀಪ್​-ಜಾಕ್ವೆಲಿನ್
Image
Vikrant Rona Press Meet: ರಕ್ಷಿತ್​ ಶೆಟ್ಟಿಯ ಮಾತಿಗೆ ಫಿದಾ ಆಗಿ ವೇದಿಕೆಗೆ ಬಂದು ತಬ್ಬಿಕೊಂಡ ಕಿಚ್ಚ ಸುದೀಪ್​

ಕರ್ನಾಟಕದಲ್ಲಿ ‘ಕಿಚ್ಚ ಕ್ರಿಯೇಶನ್ಸ್’ ಹಾಗೂ ‘ಶಾಲಿನಿ ಆರ್ಟ್ಸ್’ ಮೂಲಕ ‘ವಿಕ್ರಾಂತ್ ರೋಣ’ ವಿತರಣೆ ಆಗಲಿದೆ. ಕರ್ನಾಟಕದಲ್ಲಿ ಈ ಚಿತ್ರ ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಆ ಸಂದರ್ಭದಲ್ಲಿ ಯಾವುದೇ ದೊಡ್ಡ ಸಿನಿಮಾಗಳು ತೆರೆಗೆ ಬರುತ್ತಿಲ್ಲ. ಹೀಗಾಗಿ, ಸುದೀಪ್ ಚಿತ್ರಕ್ಕೆ ಹೆಚ್ಚು ಪರದೆಗಳು ಸಿಗುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: BBK 9: ‘ಬಿಗ್​ ಬಾಸ್ ಕನ್ನಡ ಸೀಸನ್​ 9’​ ಪ್ರೋಮೋ ಶೂಟಿಂಗ್​; ಕಿಚ್ಚ ಸುದೀಪ್​ ಗೆಟಪ್​ ​ನೋಡಿ ಫ್ಯಾನ್ಸ್​ ಫಿದಾ

ಬಾಲಿವುಡ್​ನಲ್ಲಿ ಸುದೀಪ್​ಗೆ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ. ‘ಸಲ್ಮಾನ್ ಖಾನ್ ಫಿಲಮ್ಸ್’ ಹಾಗೂ ‘ಪಿವಿಆರ್ ಪಿಕ್ಚರ್ಸ್’ ಉತ್ತರ ಭಾರತದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ‘ಕಾಸ್ಮೋಸ್ ಎಂಟರ್​​ಟೇನ್​ಮೆಂಟ್ಸ್’ ಮೂಲಕ​​ ‘ವಿಕ್ರಾಂತ್​ ರೋಣ’ ಸಿನಿಮಾ ಹಂಚಿಕೆ ಆಗಲಿದೆ. ತಮಿಳಿನಲ್ಲಿ ‘ಜೀ ಸ್ಟುಡಿಯೋಸ್’ ಮೂಲಕ ಸುದೀಪ್ ಸಿನಿಮಾ ವಿತರಣೆಯಾಗಲಿದೆ. ಮಲಯಾಳಂನಲ್ಲಿ ದುಲ್ಖರ್ ಸಲ್ಮಾನ್ ಅವರ ‘ವೇಫೇರರ್ ಫಿಲಮ್ಸ್’ ಮೂಲಕ ಚಿತ್ರ ವಿತರಣೆಯಾಗಲಿದೆ. ವಿದೇಶದಲ್ಲಿ ‘ಒನ್ ಟ್ವೆಂಟಿ 8 ಮೀಡಿಯಾ’ ಈ ಚಿತ್ರವನ್ನು ವಿತರಣೆ ಮಾಡಲಿದೆ.

Published On - 8:22 pm, Thu, 14 July 22

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?