AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​

ಸಂದೀಪ್​ ರೆಡ್ಡಿ ವಂಗ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ನಟರು ಕಾದಿದ್ದಾರೆ. ‘ಅನಿಮಲ್​’ ಸಿನಿಮಾದ ಯಶಸ್ಸಿನ ಬಳಿಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರಿಗೆ ಭಾರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಈ ನಡುವೆ ‘ಮೆಗಾ ಸ್ಟಾರ್​’ ಚಿರಂಜೀವಿ ಅವರನ್ನು ಸಂದೀಪ್​ ಭೇಟಿ ಮಾಡಿದ್ದಾರೆ. ಅವರಿಬ್ಬರು ಮಾತನಾಡುತ್ತಾ ಕುಳಿತಿರುವ ಫೋಟೋ ವೈರಲ್​ ಆಗಿದೆ.

ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​
ಶ್ರೀಕಾಂತ್​ ಒಡೆಲ, ಸಂದೀಪ್​ ರೆಡ್ಡಿ ವಂಗ,​ ಚಿರಂಜೀವಿ
ಮದನ್​ ಕುಮಾರ್​
|

Updated on: Jan 28, 2024 | 3:28 PM

Share

‘ಅನಿಮಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ (Sandeep Reddy Vanga) ಸಖತ್​ ಫೇಮಸ್​ ಆಗಿದ್ದಾರೆ. ಚಿತ್ರರಂಗದಲ್ಲಿ ಅವರು ಹ್ಯಾಟ್ರಿಕ್​ ಗೆಲುವು ಸಿಕ್ಕಿದೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಹಾಗೂಅನಿಮಲ್​’ (Animal) ಸಿನಿಮಾಗಳು ಯಶಸ್ಸು ಕಂಡಿವೆ. ಅವರ ಮುಂದಿನ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ಈ ನಡುವೆ ಸಂದೀಪ್​ ರೆಡ್ಡಿ ವಂಗ ಅವರು ‘ಮೆಗಾ ಸ್ಟಾರ್​’ ಚಿರಂಜೀವಿ (Chiranjeevi) ಅವರನ್ನು ಭೇಟಿ ಮಾಡಿದ್ದಾರೆ. ಅವರಿಬ್ಬರು ಮಾತನಾಡುತ್ತಾ ಕುಳಿತಿರುವ ಫೋಟೋ ವೈರಲ್​ ಆಗಿದೆ. ಅದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಈ ಫೋಟೋ ಹಿಂದಿನ ಅಸಲಿ ವಿಷಯ ಬೇರೆಯೇ ಇದೆ.

ಚಿತ್ರರಂಗದಲ್ಲಿ ಚಿರಂಜೀವಿ ಅವರಿಗೆ ಇರುವ ಅನುಭವ ಅಪಾರ. ತೆಲುಗು ಚಿತ್ರರಂಗಕ್ಕೆ ಅವರು ಬಹಳ ಕೊಡುಗೆ ನೀಡಿದ್ದಾರೆ. ಈ ಕಲಾವಿದನಾಗಿ ಅವರು ಸಲ್ಲಿಸಿರುವ ಸೇವೆಗೆ ಭಾರತ ಸರ್ಕಾರದಿಂದ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಆಗಿದೆ. ಅವರಿಗೆ ಎಲ್ಲೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಭಿಮಾನಿಗಳು. ಆಪ್ತರು, ಸೆಲೆಬ್ರಿಟಿಗಳು ಮನಸಾರೆ ಹಾರೈಸುತ್ತಿದ್ದಾರೆ. ಸಂದೀಪ್​ ರೆಡ್ಡಿ ವಂಗ ಕೂಡ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ‘ಆ ಸೀನ್​ ಇಲ್ಲ’: ಒಟಿಟಿಯಲ್ಲಿ ‘ಅನಿಮಲ್​’ ಸಿನಿಮಾ ನೋಡಿದ ಪ್ರೇಕ್ಷಕರಿಗೆ ಬೇಸರ

ಚಿರಂಜೀವಿ ಅವರು ಪದ್ಮಭೂಷಣ ಪ್ರಶಸ್ತಿ ಭಾಜನರಾಗಿರುವುದರಿಂದ ಸಂದೀಪ್ ರೆಡ್ಡಿ ವಂಗ ಅವರು ಭೇಟಿ ಮಾಡಿದ್ದಾರೆ. ಅವರಿಗೆ ‘ದಸರ’ ಸಿನಿಮಾದ ನಿರ್ದೇಶಕ ಶ್ರೀಕಾಂತ್​ ಒಡೆಲ ಅವರು ಸಾಥ್​ ನೀಡಿದ್ದಾರೆ. ಹಿರಿಯ ನಟನನ್ನು ಭೇಟಿ ಮಾಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಆ ಮೂಲಕ ಚಿರಂಜೀವಿ ಮೇಲೆ ತಾವು ಇಟ್ಟಿರುವ ಅಭಿಮಾನವನ್ನು ಅವರಿಬ್ಬರು ವ್ಯಕ್ತಪಡಿಸಿದ್ದಾರೆ.

‘ವಾವ್​.. ಸಂದೀಪ್​ ರೆಡ್ಡಿ ವಂಗ ಮತ್ತು ಚಿರಂಜೀವಿ ಅವರು ಜೊತೆಯಾಗಿ ಸಿನಿಮಾ ಮಾಡಿದರೆ ಬಹಳ ಚೆನ್ನಾಗಿರುತ್ತದೆ’ ಎಂದು ನೆಟ್ಟಿಗರು ಆಸೆಪಟ್ಟಿದ್ದಾರೆ. ‘ಈಗಾಗಲೇ ಚಿರಂಜೀವಿ ಅವರಿಗೆ ಸಂದೀಪ್​ ಒಂದು ಕಥೆ ಹೇಳಿರಬಹುದು’ ಎಂದು ಕೂಡ ಕೆಲವರು ಕಮೆಂಟ್​ ಮಾಡಿದ್ದಾರೆ. ಆದರೆ ಇದೊಂದು ಸೌಹಾರ್ದಯುತ ಭೇಟಿ ಮಾತ್ರ ಎಂದು ಹೇಳಲಾಗುತ್ತಿದೆ. ಸಂದೀಪ್​ ರೆಡ್ಡಿ ವಂಗ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ನಟರು ಕಾದಿದ್ದಾರೆ. ‘ಅನಿಮಲ್​’ ಸಿನಿಮಾದ ಯಶಸ್ಸಿನ ಬಳಿಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರಿಗೆ ಭಾರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್