AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​

ಸಂದೀಪ್​ ರೆಡ್ಡಿ ವಂಗ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ನಟರು ಕಾದಿದ್ದಾರೆ. ‘ಅನಿಮಲ್​’ ಸಿನಿಮಾದ ಯಶಸ್ಸಿನ ಬಳಿಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರಿಗೆ ಭಾರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಈ ನಡುವೆ ‘ಮೆಗಾ ಸ್ಟಾರ್​’ ಚಿರಂಜೀವಿ ಅವರನ್ನು ಸಂದೀಪ್​ ಭೇಟಿ ಮಾಡಿದ್ದಾರೆ. ಅವರಿಬ್ಬರು ಮಾತನಾಡುತ್ತಾ ಕುಳಿತಿರುವ ಫೋಟೋ ವೈರಲ್​ ಆಗಿದೆ.

ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​
ಶ್ರೀಕಾಂತ್​ ಒಡೆಲ, ಸಂದೀಪ್​ ರೆಡ್ಡಿ ವಂಗ,​ ಚಿರಂಜೀವಿ
ಮದನ್​ ಕುಮಾರ್​
|

Updated on: Jan 28, 2024 | 3:28 PM

Share

‘ಅನಿಮಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ (Sandeep Reddy Vanga) ಸಖತ್​ ಫೇಮಸ್​ ಆಗಿದ್ದಾರೆ. ಚಿತ್ರರಂಗದಲ್ಲಿ ಅವರು ಹ್ಯಾಟ್ರಿಕ್​ ಗೆಲುವು ಸಿಕ್ಕಿದೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಹಾಗೂಅನಿಮಲ್​’ (Animal) ಸಿನಿಮಾಗಳು ಯಶಸ್ಸು ಕಂಡಿವೆ. ಅವರ ಮುಂದಿನ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ಈ ನಡುವೆ ಸಂದೀಪ್​ ರೆಡ್ಡಿ ವಂಗ ಅವರು ‘ಮೆಗಾ ಸ್ಟಾರ್​’ ಚಿರಂಜೀವಿ (Chiranjeevi) ಅವರನ್ನು ಭೇಟಿ ಮಾಡಿದ್ದಾರೆ. ಅವರಿಬ್ಬರು ಮಾತನಾಡುತ್ತಾ ಕುಳಿತಿರುವ ಫೋಟೋ ವೈರಲ್​ ಆಗಿದೆ. ಅದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಈ ಫೋಟೋ ಹಿಂದಿನ ಅಸಲಿ ವಿಷಯ ಬೇರೆಯೇ ಇದೆ.

ಚಿತ್ರರಂಗದಲ್ಲಿ ಚಿರಂಜೀವಿ ಅವರಿಗೆ ಇರುವ ಅನುಭವ ಅಪಾರ. ತೆಲುಗು ಚಿತ್ರರಂಗಕ್ಕೆ ಅವರು ಬಹಳ ಕೊಡುಗೆ ನೀಡಿದ್ದಾರೆ. ಈ ಕಲಾವಿದನಾಗಿ ಅವರು ಸಲ್ಲಿಸಿರುವ ಸೇವೆಗೆ ಭಾರತ ಸರ್ಕಾರದಿಂದ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಆಗಿದೆ. ಅವರಿಗೆ ಎಲ್ಲೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಭಿಮಾನಿಗಳು. ಆಪ್ತರು, ಸೆಲೆಬ್ರಿಟಿಗಳು ಮನಸಾರೆ ಹಾರೈಸುತ್ತಿದ್ದಾರೆ. ಸಂದೀಪ್​ ರೆಡ್ಡಿ ವಂಗ ಕೂಡ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ‘ಆ ಸೀನ್​ ಇಲ್ಲ’: ಒಟಿಟಿಯಲ್ಲಿ ‘ಅನಿಮಲ್​’ ಸಿನಿಮಾ ನೋಡಿದ ಪ್ರೇಕ್ಷಕರಿಗೆ ಬೇಸರ

ಚಿರಂಜೀವಿ ಅವರು ಪದ್ಮಭೂಷಣ ಪ್ರಶಸ್ತಿ ಭಾಜನರಾಗಿರುವುದರಿಂದ ಸಂದೀಪ್ ರೆಡ್ಡಿ ವಂಗ ಅವರು ಭೇಟಿ ಮಾಡಿದ್ದಾರೆ. ಅವರಿಗೆ ‘ದಸರ’ ಸಿನಿಮಾದ ನಿರ್ದೇಶಕ ಶ್ರೀಕಾಂತ್​ ಒಡೆಲ ಅವರು ಸಾಥ್​ ನೀಡಿದ್ದಾರೆ. ಹಿರಿಯ ನಟನನ್ನು ಭೇಟಿ ಮಾಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಆ ಮೂಲಕ ಚಿರಂಜೀವಿ ಮೇಲೆ ತಾವು ಇಟ್ಟಿರುವ ಅಭಿಮಾನವನ್ನು ಅವರಿಬ್ಬರು ವ್ಯಕ್ತಪಡಿಸಿದ್ದಾರೆ.

‘ವಾವ್​.. ಸಂದೀಪ್​ ರೆಡ್ಡಿ ವಂಗ ಮತ್ತು ಚಿರಂಜೀವಿ ಅವರು ಜೊತೆಯಾಗಿ ಸಿನಿಮಾ ಮಾಡಿದರೆ ಬಹಳ ಚೆನ್ನಾಗಿರುತ್ತದೆ’ ಎಂದು ನೆಟ್ಟಿಗರು ಆಸೆಪಟ್ಟಿದ್ದಾರೆ. ‘ಈಗಾಗಲೇ ಚಿರಂಜೀವಿ ಅವರಿಗೆ ಸಂದೀಪ್​ ಒಂದು ಕಥೆ ಹೇಳಿರಬಹುದು’ ಎಂದು ಕೂಡ ಕೆಲವರು ಕಮೆಂಟ್​ ಮಾಡಿದ್ದಾರೆ. ಆದರೆ ಇದೊಂದು ಸೌಹಾರ್ದಯುತ ಭೇಟಿ ಮಾತ್ರ ಎಂದು ಹೇಳಲಾಗುತ್ತಿದೆ. ಸಂದೀಪ್​ ರೆಡ್ಡಿ ವಂಗ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ನಟರು ಕಾದಿದ್ದಾರೆ. ‘ಅನಿಮಲ್​’ ಸಿನಿಮಾದ ಯಶಸ್ಸಿನ ಬಳಿಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರಿಗೆ ಭಾರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ