AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​

ಸಂದೀಪ್​ ರೆಡ್ಡಿ ವಂಗ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ನಟರು ಕಾದಿದ್ದಾರೆ. ‘ಅನಿಮಲ್​’ ಸಿನಿಮಾದ ಯಶಸ್ಸಿನ ಬಳಿಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರಿಗೆ ಭಾರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಈ ನಡುವೆ ‘ಮೆಗಾ ಸ್ಟಾರ್​’ ಚಿರಂಜೀವಿ ಅವರನ್ನು ಸಂದೀಪ್​ ಭೇಟಿ ಮಾಡಿದ್ದಾರೆ. ಅವರಿಬ್ಬರು ಮಾತನಾಡುತ್ತಾ ಕುಳಿತಿರುವ ಫೋಟೋ ವೈರಲ್​ ಆಗಿದೆ.

ಚಿರಂಜೀವಿ ಭೇಟಿ ಮಾಡಿದ ‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ; ಫೋಟೋ ವೈರಲ್​
ಶ್ರೀಕಾಂತ್​ ಒಡೆಲ, ಸಂದೀಪ್​ ರೆಡ್ಡಿ ವಂಗ,​ ಚಿರಂಜೀವಿ
ಮದನ್​ ಕುಮಾರ್​
|

Updated on: Jan 28, 2024 | 3:28 PM

Share

‘ಅನಿಮಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ (Sandeep Reddy Vanga) ಸಖತ್​ ಫೇಮಸ್​ ಆಗಿದ್ದಾರೆ. ಚಿತ್ರರಂಗದಲ್ಲಿ ಅವರು ಹ್ಯಾಟ್ರಿಕ್​ ಗೆಲುವು ಸಿಕ್ಕಿದೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಹಾಗೂಅನಿಮಲ್​’ (Animal) ಸಿನಿಮಾಗಳು ಯಶಸ್ಸು ಕಂಡಿವೆ. ಅವರ ಮುಂದಿನ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ಈ ನಡುವೆ ಸಂದೀಪ್​ ರೆಡ್ಡಿ ವಂಗ ಅವರು ‘ಮೆಗಾ ಸ್ಟಾರ್​’ ಚಿರಂಜೀವಿ (Chiranjeevi) ಅವರನ್ನು ಭೇಟಿ ಮಾಡಿದ್ದಾರೆ. ಅವರಿಬ್ಬರು ಮಾತನಾಡುತ್ತಾ ಕುಳಿತಿರುವ ಫೋಟೋ ವೈರಲ್​ ಆಗಿದೆ. ಅದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಈ ಫೋಟೋ ಹಿಂದಿನ ಅಸಲಿ ವಿಷಯ ಬೇರೆಯೇ ಇದೆ.

ಚಿತ್ರರಂಗದಲ್ಲಿ ಚಿರಂಜೀವಿ ಅವರಿಗೆ ಇರುವ ಅನುಭವ ಅಪಾರ. ತೆಲುಗು ಚಿತ್ರರಂಗಕ್ಕೆ ಅವರು ಬಹಳ ಕೊಡುಗೆ ನೀಡಿದ್ದಾರೆ. ಈ ಕಲಾವಿದನಾಗಿ ಅವರು ಸಲ್ಲಿಸಿರುವ ಸೇವೆಗೆ ಭಾರತ ಸರ್ಕಾರದಿಂದ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಆಗಿದೆ. ಅವರಿಗೆ ಎಲ್ಲೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಭಿಮಾನಿಗಳು. ಆಪ್ತರು, ಸೆಲೆಬ್ರಿಟಿಗಳು ಮನಸಾರೆ ಹಾರೈಸುತ್ತಿದ್ದಾರೆ. ಸಂದೀಪ್​ ರೆಡ್ಡಿ ವಂಗ ಕೂಡ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ‘ಆ ಸೀನ್​ ಇಲ್ಲ’: ಒಟಿಟಿಯಲ್ಲಿ ‘ಅನಿಮಲ್​’ ಸಿನಿಮಾ ನೋಡಿದ ಪ್ರೇಕ್ಷಕರಿಗೆ ಬೇಸರ

ಚಿರಂಜೀವಿ ಅವರು ಪದ್ಮಭೂಷಣ ಪ್ರಶಸ್ತಿ ಭಾಜನರಾಗಿರುವುದರಿಂದ ಸಂದೀಪ್ ರೆಡ್ಡಿ ವಂಗ ಅವರು ಭೇಟಿ ಮಾಡಿದ್ದಾರೆ. ಅವರಿಗೆ ‘ದಸರ’ ಸಿನಿಮಾದ ನಿರ್ದೇಶಕ ಶ್ರೀಕಾಂತ್​ ಒಡೆಲ ಅವರು ಸಾಥ್​ ನೀಡಿದ್ದಾರೆ. ಹಿರಿಯ ನಟನನ್ನು ಭೇಟಿ ಮಾಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಆ ಮೂಲಕ ಚಿರಂಜೀವಿ ಮೇಲೆ ತಾವು ಇಟ್ಟಿರುವ ಅಭಿಮಾನವನ್ನು ಅವರಿಬ್ಬರು ವ್ಯಕ್ತಪಡಿಸಿದ್ದಾರೆ.

‘ವಾವ್​.. ಸಂದೀಪ್​ ರೆಡ್ಡಿ ವಂಗ ಮತ್ತು ಚಿರಂಜೀವಿ ಅವರು ಜೊತೆಯಾಗಿ ಸಿನಿಮಾ ಮಾಡಿದರೆ ಬಹಳ ಚೆನ್ನಾಗಿರುತ್ತದೆ’ ಎಂದು ನೆಟ್ಟಿಗರು ಆಸೆಪಟ್ಟಿದ್ದಾರೆ. ‘ಈಗಾಗಲೇ ಚಿರಂಜೀವಿ ಅವರಿಗೆ ಸಂದೀಪ್​ ಒಂದು ಕಥೆ ಹೇಳಿರಬಹುದು’ ಎಂದು ಕೂಡ ಕೆಲವರು ಕಮೆಂಟ್​ ಮಾಡಿದ್ದಾರೆ. ಆದರೆ ಇದೊಂದು ಸೌಹಾರ್ದಯುತ ಭೇಟಿ ಮಾತ್ರ ಎಂದು ಹೇಳಲಾಗುತ್ತಿದೆ. ಸಂದೀಪ್​ ರೆಡ್ಡಿ ವಂಗ ಜೊತೆ ಸಿನಿಮಾ ಮಾಡಲು ಅನೇಕ ಸ್ಟಾರ್​ ನಟರು ಕಾದಿದ್ದಾರೆ. ‘ಅನಿಮಲ್​’ ಸಿನಿಮಾದ ಯಶಸ್ಸಿನ ಬಳಿಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅವರಿಗೆ ಭಾರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!