AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಾಂತ್ಯಕ್ಕೆ ಸೆಟ್ಟೇರಲಿದೆ ಪ್ರಭಾಸ್-ವಂಗಾ ಕಾಂಬಿನೇಷನ್ ಸಿನಿಮಾ ‘ಸ್ಪಿರಿಟ್’

ಸಂದೀಪ್ ವಂಗ ಒಂದರ ನಂತರ ಒಂದು ಯೋಜನೆಗಳನ್ನು ಹೊಂದಿದ್ದಾರೆ. ಅವರು ‘ಅನಿಮಲ್’ ಸಿನಿಮಾ ಸೀಕ್ವೆಲ್ ‘ಅನಿಮಲ್ ಪಾರ್ಕ್’ ಮಾಡಬೇಕಿದೆ. ಅಲ್ಲು ಅರ್ಜುನ್ ಅವರ ಜೊತೆಗೂ ಸಿನಿಮಾ ಮಾಡುತ್ತಿದ್ದಾರೆ. ಇದರ ಜೊತೆ ಹಲವು ನಿರ್ಮಾಪಕರು ಅವರ ಕಾಲ್​ಶೀಟ್ ಪಡೆಯಲು ಉತ್ಸುಕರಾಗಿದ್ದಾರೆ.

ವರ್ಷಾಂತ್ಯಕ್ಕೆ ಸೆಟ್ಟೇರಲಿದೆ ಪ್ರಭಾಸ್-ವಂಗಾ ಕಾಂಬಿನೇಷನ್ ಸಿನಿಮಾ ‘ಸ್ಪಿರಿಟ್’
ಪ್ರಭಾಸ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 20, 2024 | 12:21 PM

Share

ಹಲವು ನಿರ್ದೇಶಕರು ತಮ್ಮದೇ ಆದ ಸ್ಟೈಲ್ ಹೊಂದಿದ್ದಾರೆ. ಕೆಲವು ನಿರ್ದೇಶಕರು ತಮ್ಮ ಪ್ರಾಜೆಕ್ಟ್‌ಗಳನ್ನು ಕಡಿಮೆ ಸಮಯದಲ್ಲಿ ಪ್ರೇಕ್ಷಕರ ಎದುರು ಪ್ರಸ್ತುತಪಡಿಸಿದರೆ, ಕೆಲವರು ಬಹಳ ಸಮಯ ತೆಗೆದುಕೊಳ್ಳುತ್ತಾರೆ. ಮಾಡಿರೋ ಕೆಲಸ ತೃಪ್ತಿ ಕೊಟ್ಟ ಬಳಿಕವೇ ಅದನ್ನು ಪ್ರೇಕ್ಷಕರ ಎದುರು ತರುವ ಅನೇಕರಿದ್ದಾರೆ. ಅದಕ್ಕೆ ಹಲವು ವರ್ಷ ಮುಡಿಪಿಡುತ್ತಾರೆ. ಅಂತಹ ನಿರ್ದೇಶಕರಲ್ಲಿ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಕೂಡ ಒಬ್ಬರು. ಅವರು ಮಾಡಿರೋ ಮೂರು ಸಿನಿಮಾಗಳು ಹಿಟ್ ಆಗಿವೆ. ಅವರ ಮುಂದಿನ ಪ್ರಾಜೆಕ್ಟ್ ಯಾವುದು ಎನ್ನುವ ಕುತೂಹಲ ಮೂಡಿದೆ.

ಸಂದೀಪ್ ವಂಗಾ ಅವರ ಈವರೆಗೆ ಮೂರು ಹಿಟ್ ಸಿನಿಮಾ ನೀಡಿದ್ದಾರೆ. ‘ಅರ್ಜುನ್ ರೆಡ್ಡಿ’ ತೆಲುಗಿನಲ್ಲಿ ಸೂಪರ್ ಹಿಟ್ ಆಯಿತು. ಆ ಬಳಿಕ ಅದನ್ನು ‘ಕಬೀರ್ ಸಿಂಗ್’ ಹೆಸರಲ್ಲಿ ಹಿಂದಿಗೆ ರಿಮೇಕ್ ಮಾಡಿದರು. ಈಗ ರಣಬೀರ್ ಕಪೂರ್ ಅವರೊಂದಿಗೆ ‘ಅನಿಮಲ್’ ಮಾಡಿ ಗೆದ್ದಿದ್ದಾರೆ. ಈ ಚಿತ್ರದಲ್ಲಿ ನಟಿಸಿದ ಎಲ್ಲರ ಖ್ಯಾತಿ ಹೆಚ್ಚಾಗಿದೆ. ಸಂದೀಪ್ ವಂಗಾ ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರದ ಕೆಲಸವನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಂದೀಪ್ ವಂಗ ಒಂದರ ನಂತರ ಒಂದು ಯೋಜನೆಗಳನ್ನು ಹೊಂದಿದ್ದಾರೆ. ಅವರು ‘ಅನಿಮಲ್’ ಸಿನಿಮಾ ಸೀಕ್ವೆಲ್ ‘ಅನಿಮಲ್ ಪಾರ್ಕ್’ ಮಾಡಬೇಕಿದೆ. ಅಲ್ಲು ಅರ್ಜುನ್ ಅವರ ಜೊತೆಗೂ ಸಿನಿಮಾ ಮಾಡುತ್ತಿದ್ದಾರೆ. ಇದರ ಜೊತೆ ಹಲವು ನಿರ್ಮಾಪಕರು ಅವರ ಕಾಲ್​ಶೀಟ್ ಪಡೆಯಲು ಉತ್ಸುಕರಾಗಿದ್ದಾರೆ. ಅವರು ತಮ್ಮ ಪ್ರತಿ ಸಿನಿಮಾ ಮಾಡಲು ಅಗತ್ಯಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ವರ್ಷಾಂತ್ಯಕ್ಕೆ ‘ಸ್ಪಿರಿಟ್’ ಸಿನಿಮಾ ಆರಂಭ ಆಗಲಿದೆ.

‘ಅರ್ಜುನ್ ರೆಡ್ಡಿ’ ಹಿಟ್ ಆದ ಬಳಿಕ ಆ ಚಿತ್ರವನ್ನು ‘ಕಬೀರ್ ಸಿಂಗ್’ ಹೆಸರಲ್ಲಿ ಹಿಂದಿಗೆ ರಿಮೇಕ್ ಮಾಡಲು ಸಂದೀಪ್ ಎರಡು ವರ್ಷ ತೆಗೆದುಕೊಂಡರು. ‘ಅನಿಮಲ್‌’ ಚಿತ್ರಕ್ಕಾಗಿ ನಾಲ್ಕು ವರ್ಷಗಳ ಸುದೀರ್ಘ ಸಮಯ ತೆಗೆದುಕೊಂಡಿದ್ದರು. ಈಗ ‘ಸ್ಪಿರಿಟ್’ ಸಿನಿಮಾ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದೆ. ‘ಪ್ರಭಾಸ್ ಚಿತ್ರವನ್ನು ಆದಷ್ಟು ಬೇಗ ಮುಗಿಸುವ ಆಲೋಚನೆ ನನಗೆ ಇದೆ. ಈ ವರ್ಷಾಂತ್ಯದೊಳಗೆ ಸ್ಪಿರಿಟ್ ಸಿನಿಮಾ ಕಾರ್ಯ ಆರಂಭಿಸುತ್ತೇನೆ’ ಎಂದು ಅವರು ಹೇಳಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಘೋಷಣೆ; ಸರ್​ಪ್ರೈಸ್ ಕೊಟ್ಟ ನೆಟ್​ಫ್ಲಿಕ್ಸ್

‘ಸಲಾರ್’ ಸಿನಿಮಾ ಮೂಲಕ ಪ್ರಭಾಸ್ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ಥಿಯೇಟರ್​ನಲ್ಲಿ ಹಿಟ್ ಆಗಿ ಒಟಿಟಿಯಲ್ಲಿ ರಿಲೀಸ್ ಆಗಿದೆ. ಅದೇ ರೀತಿ ಸಂದೀಪ್ ನಿರ್ದೇಶನದ ‘ಅನಿಮಲ್’ ಸಿನಿಮಾ ಕೂಡ ಭರ್ಜರಿ ಗಳಿಕೆ ಮಾಡಿದೆ. ಎರಡು ಹಿಟ್ ಕಾಂಬಿನೇಷನ್ ಒಂದಾಗುತ್ತಿರುವದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು