AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಿರ್ದೇಶಕನ ಕಚೇರಿಯಲ್ಲಿ ದೊಡ್ಡದಾಗಿ ಹಾಕಲಾಗಿದೆ ಚಿರಂಜೀವಿ ಫೋಟೋ

ಖ್ಯಾತ ನಿರ್ದೇಶಕನ ಕಚೇರಿಯಲ್ಲಿ ಚಿರಂಜೀವಿ ಅವರ ‘ಆರಾಧನಾ’ ಚಿತ್ರದ ಐಕಾನಿಕ್ ಪೋಸ್ಟರ್ ಇದೆ. ಸಂದೀಪ್ ರೆಡ್ಡಿ ಚಿರಂಜೀವಿ ಅವರ ದೊಡ್ಡ ಅಭಿಮಾನಿ ಎಂದು ತಿಳಿದುಬಂದಿದೆ. ಚಿರಂಜೀವಿನ ಅವರು ಅನೇಕ ಸಂದರ್ಭಗಳಲ್ಲಿ ಹೊಗಳಿದ್ದಾರೆ. ಈ ಪೋಸ್ಟರ್ ಅವರ ಅಭಿಮಾನವನ್ನು ಪ್ರತಿಬಿಂಬಿಸುತ್ತದೆ ಎಂಬುದನ್ನು ಇಲ್ಲಿ ಗಮನಿಸಬೇಕು.

ಖ್ಯಾತ ನಿರ್ದೇಶಕನ ಕಚೇರಿಯಲ್ಲಿ ದೊಡ್ಡದಾಗಿ ಹಾಕಲಾಗಿದೆ ಚಿರಂಜೀವಿ ಫೋಟೋ
ಚಿರಂಜೀವಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 06, 2025 | 11:38 AM

Share

ಟಾಲಿವುಡ್​ನ ಖ್ಯಾತ ನಟರಲ್ಲಿ ಚಿರಂಜೀವಿ ಅವರಿಗೂ ಸ್ಥಾನ ಇದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ಅವರು ಅನೇಕರಿಗೆ ಸ್ಫೂರ್ತಿ ಆಗಿದ್ದಾರೆ. ಹೊಸಬರದಿಂದ ಹಿಡಿದು ಎಲ್ಲಾ ರೀತಿಯ ನಿರ್ದೇಶಕರು ಹಾಗೂ ಕಲಾವಿದರನ್ನು ಅವರು ಬೆಂಬಲಿಸುತ್ತಾ ಬಂದಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರ ಫೋಟೋ ಅನೇಕರ ಮನೆಯಲ್ಲಿ ಇದೆ. ಅದೇ ರೀತಿ ಸ್ಟಾರ್ ನಿರ್ದೇಶಕನ ಕಚೇರಿಯಲ್ಲೂ ಇವರ ಫೋಟೋ ದೊಡ್ಡದಾಗಿ ರಾರಾಜಿಸುತ್ತಿದೆ. ಅಷ್ಟಕ್ಕೂ ಯಾರು ಆ ನಿರ್ದೇಶಕರು? ಸಂದೀಪ್ ರೆಡ್ಡಿ ವಂಗ.

ಸಂದೀಪ್ ರೆಡ್ಡಿ ವಂಗ ನೀಡಿದ್ದು ಮೂರೇ ಮೂರು ಸಿನಿಮಾ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’ ಹಾಗೂ ‘ಅನಿಮಲ್’. ಮೂರು ಸಿನಿಮಾಗಳು ಸೂಪರ್ ಡೂಪರ್ ಹಿಟ್. ಅದರಲ್ಲೂ ‘ಅನಿಮಲ್’ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ಮಾಡಿದ್ದು ಗೊತ್ತೇ ಇದೆ.  ಇತ್ತೀಚೆಗೆ ಸಂದೀಪ್ ರೆಡ್ಡಿ ಅವರು ತಮ್ಮ ಕಚೇರಿಯ ಚಿತ್ರ ಹಂಚಿಕೊಂಡಿದ್ದು, ಮೆಗಾಸ್ಟಾರ್ ಚಿರಂಜೀವಿ ಫೋಟೋ ಕಾಣಿಸಿದೆ.

ಇದು ಚಿರಂಜೀವಿ ಸಾಮಾನ್ಯವಾಗಿ ಪೋಸ್ ಕೊಡುತ್ತಾ ನಿಂತ ಫೋಟೋ ಅಲ್ಲವೇ ಅಲ್ಲ. ಬದಲಿಗೆ ‘ಆರಾಧನಾ’ ಚಿತ್ರದಲ್ಲಿ ಬರೋ ಒಂದು ದೃಶ್ಯದ ಪೋಸ್ಟರ್ ಆಗಿದೆ. ಈ ಪೋಸ್ಟರ್​ನ ಹಿನ್ನೆಲೆಯ ದೃಶ್ಯಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಕೆಲಸ ಆಗುತ್ತಿದೆ. ಅನೇಕರು ಸಂದೀಪ್ ರೆಡ್ಡಿ ವಂಗ ಅವರನ್ನು ಶ್ಲಾಘಿಸುತ್ತಿದ್ದಾರೆ. ಸಂದೀಪ್ ಅವರು ಚಿರಂಜೀವಿಯ ದೊಡ್ಡ ಅಭಿಮಾನಿ. ಅನೇಕ ಸಂದರ್ಶನದಲ್ಲಿ ಚಿರಂಜೀವಿಯನ್ನು ಹೊಗಳಿದ್ದಾರೆ. ಅವರ ಹಳೆಯ ಸಿನಿಮಾಗಳ ದೃಶ್ಯಗಳನ್ನು ಇವರು ವಿವರಿಸಿದ್ದೂ ಇದೆ. ಈಗ ಅವರದ್ದೇ ಸಿನಿಮಾದ ಒಂದು ಪ್ರಮುಖ ದೃಶ್ಯವನ್ನು ಫ್ರೇಮ್ ಮಾಡಿಟ್ಟುಕೊಂಡಿದ್ದು ವಿಶೇಷ. ಇವರು ಒಟ್ಟಾಗಿ ಸಿನಿಮಾ ಮಾಡಲಿ ಎಂದು ಅನೇಕರು ಕೋರಿಕೊಂಡಿದ್ದಾರೆ.

‘ಆರಾಧಾನಾ ಸಿನಿಮಾ ಒಂದೊಳ್ಳೆಯ ಉದಾಹರಣೆ. ನಿನ್ನಯೆವರೆಗೂ ಇದೊಂದು ಸಾಮಾನ್ಯ ದೃಶ್ಯವಾಗಿತ್ತು. ಆದರೆ, ಈ ದೃಶ್ಯ ಈಗ ಐಕಾನಿಕ್ ಆಗಿದೆ. ಇದಕ್ಕೆ ಕಾರಣ ಸಂದೀಪ್ ರೆಡ್ಡಿ ವಂಗ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಚಿರಂಜೀವಿ ಬಗ್ಗೆ ಅವರಿಗೆ ಇರೋ ಪ್ರೀತಿ ವಿಶೇಷವಾದುದ್ದು ಎಂದಿದ್ದಾರೆ.

ಇದನ್ನೂ ಓದಿ: ಸಂದೀಪ್​ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್​’ ಸಿನಿಮಾದಲ್ಲಿ ಜೋಡಿ ಆಗ್ತಾರಾ ತ್ರಿಶಾ-ಪ್ರಭಾಸ್​?

ಸಂದೀಪ್ ಅವರು ತಮ್ಮ ಮುಂದಿನ ಸಿನಿಮಾ ‘ಸ್ಪಿರಿಟ್’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರಕ್ಕೆ ಪ್ರಭಾಸ್ ಹೀರೋ. ಅವರು, ಪ್ರಾಮಾಣಿಕ ಪೊಲೀಸ್​ ಅಧಿಕಾರಿಯ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್